ಇದರ ಹಿಂದೆ ಯಾವ ಸಂಘಟನೆ ಇದೆ ಎಂದು ಹೇಳಲ್ಲ : ಬಿ ವೈ ವಿಜಯೇಂದ್ರ

1 Min Read

 

ಶಿವಮೊಗ್ಗ: ವೀರ ಸಾವರ್ಕರ್ ಹಾಗೂ ಟಿಪ್ಪು ಫೋಟೋ ಇಡುವ ವಿಚಾರದಲ್ಲಿ ನಡೆದ ಗಲಾಟೆಯಲ್ಲಿ ಪ್ರೇಮ್ ಸಿಂಗ್ ಎಂಬ ಯುವಕನಿಗೆ ಚಾಕು ಇರಿದಿದ್ದಾರೆ. ಯುವಕನ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾನೆ. ಈ ಸಂಬಂಧ ಬಿ ವೈ ವಿಜಯೇಂದ್ರ ಮಾತನಾಡಿದ್ದು, ಪ್ರೇಮ್ ಸಿಂಗ್ ಆರೋಗ್ಯ ವಿಚಾರಿಸಿದ್ದೇನೆ ಎಂದಿದ್ದಾರೆ.

ಪ್ರೇಮ್ ಸಿಂಗ್ ಇನ್ನು ಎಂಟು ದಿನಗಳ ಕಾಲ ಚಿಕಿತ್ಸೆ ಪಡೆಯಬೇಕಿದೆ. ಕೃತ್ಯವೆಸಗಿದವರ ವಿರುದ್ಧ ಕಠಿಣ ಕ್ರಮವಾಗಬೇಕು. ಈ ಸಂಬಂಧ ನಾನು ಕೂಡ ಸಿಎಂ ಭೇಟಿ ಮಾಡುತ್ತೇನೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಆಗ್ರಹಿಸುತ್ತೇನೆ.

ಇದರ ಹಿಂದೆ ಯಾವ ಸಂಘಟನೆ ಇದೆ ಎಂದು ಹೇಳಲ್ಲ. ಇದು ಎಲ್ಲರಿಗೂ ತಿಳಿದಿರುವ ಓಪನ್ ಸೀಕ್ರೇಟ್ ಎಂದಿದ್ದಾರೆ. 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿರುವಾಗಲೇ ಶಿವಮೊಗ್ಗದಲ್ಲಿ ಇಂಥ ದುರ್ಘಟನೆ ನಡೆದಿದೆ. ಟಿಪ್ಪು ಫೋಟೋ ಇಡುವ ಮತ್ತು ಸಾವರ್ಕರ್ ಫೋಟೋ ಇಡುವ ವಿಚಾರಕ್ಕೆ ಗಲಾಟೆ ಎದ್ದಿದೆ. ಅದೇ ಜಾಗದಲ್ಲಿಯೇ ದೇಶದ ಬಾವುಟವನ್ನು ಬೀಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *