Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಪ್ರಿಲ್ 14 ರಂದು ರಾಜ್ಯಾದ್ಯಂತ ರೈತರ ಕಥೆಯಾಧಾರಿತ ಚಿತ್ರ ಶ್ರೀಮಂತ ಬಿಡುಗಡೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ

ಸುರೇಶ್ ಪಟ್ಟಣ್,
ಮೊ : 87220 22817

ಚಿತ್ರದುರ್ಗ,(ಮಾ.18) : ಶ್ರೀಮಂತ ಚಿತ್ರದಲ್ಲಿ ರೈತನ ಬದುಕು ಭವಣೆ ಆನಾವರಣವಾಗಿದ್ದು, ಈತನೇ ಜಗತ್ತಿನ ಅತೀ ದೊಡ್ಡ ಶ್ರೀಮಂತ ಎಂದು ಸಾಕ್ಷಿಕರಿಸುವ, ಮರೆಯಾಗುತ್ತಿರುವ ಹಳ್ಳಿಯ ಸುಗ್ಗಿ, ಹಬ್ಬ, ಹಾಡು ಹಸೆ, ಹಳ್ಳಿ ಆಟಗಳು ಗ್ರಾಮೀಣ ಕೆಲಗಳ ಸಂಭ್ರಮಗಳನ್ನು ನೆನಪಿಸುವುದರೊಂದಿಗೆ ಕರ್ನಾಟಕ ಜನಪದ, ಕಲೆ, ಸಾಹಿತ್ಯ, ಸಂಸ್ಕೃತಿ ಸಂಭ್ರಮಗಳನ್ನು ತಿಳಿ ಹಾಸ್ಯದ ಮೂಲಕ ಪ್ರೇಕ್ಷಕರನ್ನು ಮನರಂಜಿಸುವುದು ಚಿತ್ರದ ಉದ್ದೇಶವಾಗಿದೆ ಎಂದು ಚಿತ್ರದ ನಿರ್ದೇಶಕ, ನಿರ್ಮಾಪಕ ಹಾಸನ್ ರಮೇಶ್ ತಿಳಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಚಿತ್ರ ಸಂದೇಶ ಮತ್ತು ಮನರಂಜನೆಯನ್ನು ನೀಡುವ ಚಿತ್ರ ಇದಾಗಿದೆ. ಏ. 14 ರಂದು ರಾಜ್ಯದಲ್ಲಿ 200 ಚಲನಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಜಿಲ್ಲಾವಾರು ಪ್ರವಾಸ ಮಾಡುವುದರ ಮೂಲಕ ಚಿತ್ರವನ್ನು ಪ್ರಚಾರ ಮಾಡಲಾಗುತ್ತಿದೆ. ಇದು ಪೂರ್ಣ ಪ್ರಮಾಣದಲ್ಲಿ ರೈತನಿಗೆ ಸಂಬಂಧಪಟ್ಟ ಚಿತ್ರವಾಗಿದ್ದು, ರೈತರು ಎಲ್ಲದರಲ್ಲೂ ಸಹಾ ಶ್ರೀಮಂತನಾಗಿದ್ದಾನೆ. ಕಲಾವಿದರಾದ ಸೋನು ಸೂದ್ದುರವರು ಮೊದಲ ಬಾರಿಗೆ ನಾಯಕರಾಗಿ ನಟನೆಯನ್ನು ಮಾಡಿದ್ದಾರೆ ಎಂದರು.

ಇದೇ ಪ್ರಥಮ ಬಾರಿಗೆ ಗೋಲ್ಡನ್ ರೈನ್ ಮೂವೀಸ್ ಸಂಸ್ಥೆಯಡಿಯಲ್ಲಿ ಚಿತ್ರವನ್ನು ನಿರ್ಮಾಣ ಮಾಡಲಾಗಿದೆ. ಚಿತ್ರದಲ್ಲಿ ಇಬ್ಬರು ನಾಯಕಿಯರಿದ್ದು ವೈಷ್ಣವಿ ಪಟವರ್ಧನ್ ವೈಷ್ಣವಿ ಚಂದನ್‍ರವರಾಗಿದ್ದಾರೆ. ಇವರೊಂದಿಗೆ ಕ್ರಾಂತಿ ಎಂಬ ಹೂಸ ಯುವ ಪ್ರತಿಭೆಯನ್ನು ಪರಿಚಯಿಸಲಾಗುತ್ತಿದೆ. ಇದರೊಂದಿಗೆ ಹಿರಿಯಬ ಕಲಾವಿದರಾದ ರಮೇಶ್ ಭಟ್, ರವಿಶಂಕರ್ ಗೌಡ, ಸಾಧು ಕೋಕಿಲ, ಚರಣ್ ರಾಜ್, ರಾಜು ತಾಳಿಕೋಟೆ, ಬ್ಯಾಂಕ್ ಮಂಜಣ್ಣ ಸೇರಿದಂತೆ ಗ್ರಾಮೀಣ ರಂಗಭೂಮಿ ಕಲಾವಿದರು ಅಭಿನಯಿಸಿದ್ದಾರೆ ಎಂದು ತಿಳಿಸಿದರು.

ಚಿತ್ರಕ್ಕೆ ಸಂಗೀತವನ್ನು ಹಂಸಲೇಖರವರು ನೀಡಿದ್ದು, ರವಿಕುಮಾರ್ ಛಾಯಾಗ್ರಹಣ, ಪ್ರಕಾಶ ಸಂಕಲನ, ಮಾಸ್ ಮಾಧು ಸಾಹಸ, ಮಧನ್ ಹರಿಣಿ ಹಾಗೂ ಮೋಹನ್ ನೃತ್ಯವನ್ನು ಸಂಯೋಜಿಸಿದ್ದಾರೆ. ಚಿತ್ರ ನಿರ್ಮಾಣದಲ್ಲಿ ನನ್ನ ಜೊತೆಯಲ್ಲಿ ನಾರಾಯಣಪ್ಪ ಹಾಗೂ ಸಂಜಯ್ ಬಾಬು ಕೈಜೋಡಿಸಿದ್ದಾರೆ. ರೈತ ನಿಸ್ವಾರ್ಥ ಪ್ರಮಾಣಿಕ ವ್ಯಕ್ತಿಯಾಗಿದ್ದಾನೆ ತಾನು ಬೆಳೆದ ಬೆಳೆಯನ್ನು ತನಗಾಗಿ ಇಟ್ಟುಕೊಳ್ಳದೇ ಬೇರೆಯರಿಗಾಗಿ ನೀಡುತ್ತಾನೆ, ತನ್ನ ಕೆಲಸದೊಂದಿಗೆ ಕಲೆ. ಸಂಸ್ಕøತಿ, ಆಚಾರ ವಿಚಾರದಲ್ಲಿ ಶ್ರೀಮಂತನಾಗಿದ್ದಾನೆ, ಇದಲ್ಲದೆ ವಿಜ್ಞಾನ, ಕಲೆ, ಸಾಹಿತ್ಯದಲ್ಲಿಯೂ ಸಹಾ ಶ್ರೀಮಂತನಾಗಿದ್ದಾನೆ ಎಂದು ಹಾಸನ್ ರಮೇಶ್ ತಿಳಿಸಿದರು.

ಗೋಷ್ಠಿಯಲ್ಲಿ ಕ್ರಾಂತಿ, ಬ್ಯಾಂಕ್ ಮಂಜಣ್ಣ, ಸತೀಶ್, ಸಂಜಯ ಬಾಬು, ಪಟೇಲ್ ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

ದರ್ಶನ್ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡುತ್ತಿರುವುದೇಕೆ ಗೊತ್ತಾ : ನಾಗಮಂಗಲದಲ್ಲಿ ಸತ್ಯ ಹೇಳಿದ ಚಾಲೆಂಜಿಂಗ್ ಸ್ಟಾರ್

ಮಂಡ್ಯ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದೆ. ಮೊದಲ ಹಂತದ ಚುನಾವಣೆಗೆ ಇನ್ನೆರಡು ದಿನ ಬಾಕಿ. ಎರಡನೇ ಹಳತದ ಚುನಾವಣೆಗೆ 13 ದಿನ ಬಾಕಿ ಇದೆ. ಹೀಗಿರುವಾಗ ಪಕ್ಷಗಳೆಲ್ಲಾ ಅಭ್ಯರ್ಥಿಗಳ ರವಾವಿ ಪ್ರಚಾರ

error: Content is protected !!