Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಏಪ್ರಿಲ್ 9ರಂದು ಮೈಸೂರಿಗೆ ಬರುವ ಪ್ರಧಾನಿ ಮೋದಿ ಆ ಸ್ಪೆಷಲ್ ದಂಪತಿಯನ್ನು ಭೇಟಿ ಮಾಡದೆ ಹೋಗಲ್ಲ..!

Facebook
Twitter
Telegram
WhatsApp

 

ಮೈಸೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ದಿನಾಂಕ ಫಿಕ್ಸ್ ಆಗಿದೆ. ಎಲ್ಲಾ ಪಕ್ಷದವರು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವುದಲ್ಲದೆ, ಜನ ಯಾರ ಪರ ಇದ್ದಾರೆ ಎಂಬ ಆತಂಕದಲ್ಲಿಯೇ ಇದ್ದಾರೆ. ಅದಕ್ಕಾಗಿಯೇ ಇನ್ನಿಲ್ಲದ ಸರ್ಕಸ್ ಮಾಡುತ್ತಿದ್ದಾರೆ. ಬಿಜೆಪಿ ನಾಯಕರಂತು ಹೈಕಮಾಂಡ್ ಮೊರೆ ಹೋಗಿದ್ದಾರೆ. ಹೀಗಾಗಿಯೇ ಪ್ರಧಾನಿ ಮೋದಿ ಅವರು ಹಲವು ಬಾರಿ ಕರ್ನಾಟಕಕ್ಕೆ‌ ಬಂದಿದ್ದಾರೆ. ಈಗ ಮತ್ತೆ ಭೇಟಿ ನೀಡಲಿದ್ದಾರೆ.

ಇದೇ ತಿಂಗಳ 9ರಂದು ಮೋದಿ ಅವರು ಮೈಸೂರಿಗೆ ಭೇಟಿ ನೀಡಲಿದ್ದಾರೆ. ಭೇಟಿ ವೇಳೆ ಹುಲಿಗಣತಿ ವರದಿಯನ್ನು ಬಿಡುಗಡೆ ಮಾಡಲಿದ್ದಾರೆ. ಬಳಿಕ ಆಸ್ಕರ್ ಅವಾರ್ಡ್ ಪಡೆದಂತ ದಂಪತಿಯನ್ನು ಪ್ರಧಾನಿ ಅವರು ಭೇಟಿಯಾಗಲಿದ್ದಾರೆ.

ಈ ಬಾರಿಯ ಆಸ್ಕರ್ ರೇಸ್ ನಲ್ಲಿ ಎಲಿಫೆಂಟ್ ವಿಸ್ಪರ್ಸ್ ಸಿನಿಮಾ ಗೆದ್ದಿತ್ತು, ಪ್ರಶಸ್ತಿಯನ್ನು ಬಾಚಿಕೊಂಡಿತ್ತು. 41 ನಿಮಿಷಗಳ ಆ ಡಾಕ್ಯುಮೆಂಟರಿಗೆ ಎಲ್ಲರೂ ಮನಸೋತಿದ್ದರು. ಅನಾಥ ಆನೆಯನ್ನು ಹೆತ್ತ ಮಗುವಿನಂತೆ ನೋಡಿಕೊಂಡಿದ್ದರು ದಂಪತಿ. ಈ ಸಿನಿಮಾದ ನಾಯಕ ಬೊಮ್ಮಾ ಮತ್ತು ಅವರ ಪತ್ನಿಯನ್ನು ಭೇಟಿಯಾಗಲಿದ್ದಾರೆ ಪ್ರಧಾನಿ ಮೋದಿ, ಪ್ರಶಂಸಿಲಿದ್ದಾರೆ. ತಮಿಳುನಾಡಿನ ತೆಪ್ಪಕಾಡು ಆನೆ ಕ್ಯಾಂಪ್ ನಲ್ಲಿ ಈ ದಂಪತಿ ಇದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!