Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗುದ್ದಲಿ ಪೂಜೆಗೆ ಬಂದಿದ್ದ ಶಾಸಕ ರಂಗನಾಥ್ ಗೆ ಜನರಿಂದ ಕ್ಲಾಸ್..!

Facebook
Twitter
Telegram
WhatsApp

 

 

ತುಮಕೂರು: ಶಾಸಕನನ್ನಾಗಿ ಮಾಡುವುದು ಗ್ರಾಮಗಳ ಉದ್ದಾರ ಮಾಡಲಿ, ಜನರಿಗಾಗಿ ಏನನ್ನಾದರೂ ಮಾಡಲಿ ಎಂಬುದಕ್ಕೆ. ಆದರೆ ಜನರಿಂದ ಆಯ್ಕೆಯಾದ ಕೆಲ ಜನಪ್ರತಿನಿಧಿಗಳು ನಮಗೂ ಅದಕ್ಕೂ ಸಂಬಂಧವಿಲ್ಲ ಎಂಬಂತೆ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಅನುಭವಿಸುತ್ತಾ ಕೂತು ಬಿಡುತ್ತಾರೆ. ಆದ್ರೆ ಮತ್ತದೆ ಚುನಾವಣೆ ಬಂದ್ರೆ ಜನ ರೊಚ್ಚಿಗೇಳುತ್ತಾರೆ ಎಂಬುದನ್ನು ಮರೆತು ಬಿಡುತ್ತಾರೆ. ಅಂಥದ್ದೊಂದು ಘಟನೆ ಕುಣಿಗಲ್ ನಲ್ಲಿ ನಡೆದಿದೆ.

ಜಿಲ್ಲೆಯ ಬಿಸೇಗೌಡನದಿಡ್ಡಿಯಲ್ಲಿ ರಸ್ತೆ ಕಾಮಗಾರಿಯ ಉದ್ಘಾಟನೆ ಕಾರ್ಯಕ್ರಮವಿತ್ತು. ಅಲ್ಲಿಗೆ ಕುಣಿಗಲ್ ಶಾಸಕ ರಂಗನಾಥ್ ಅವರನ್ನು ಆಹ್ವಾನಿಸಲಾಗಿತ್ತು. ಅದರಂತೆ ಕಾರ್ಯಕ್ರಮ ಉದ್ಘಾಟನೆಗೆ ಹೋಗಿದ್ದರು. ಈ ವೇಳೆ ಜನ ಮುತ್ತಿಗೆ ಹಾಕಿದ್ದಾರೆ.

ಗುದ್ದಲಿ ಪೂಜೆಯನ್ನು ಮಾಡುವುದಕ್ಕೆ ಬಿಡದ ಜನ, ಯಾರು ನೀವೂ ಪೂಜೆ ಮಾಡುವುದಕ್ಕೆ..? ಮೊದಲು ಕೆಲಸ ಮಾಡಿ ಆಮೇಲೆ ಗುದ್ದಲಿ ಪೂಜೆ ಮಾಡಿವಂತೆ ಎಂದು ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದ್ದಾರೆ. ಕಡೆಗೂ ಅಲ್ಲಿ ನಿಲ್ಲುವುದಕ್ಕೆ ಬಿಡದೆ ವಾಪಾಸ್ ಕಳುಹಿಸಿದ್ದಾರೆ. ಈ ಹಿಂದೆ ಕುಕ್ಕರ್ ಹಂಚುವಾಗಲೂ ಕ್ಲಾಸ್ ತೆಗೆದುಕೊಂಡಿದ್ದರು. ಮೊದಲು ಕೆಲಸ ಮಾಡಿ ಆಮೇಲೆ ಕುಕ್ಕರ್ ಹಂಚಿ ಎಂದಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!