Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜನರ ಕಷ್ಟ ನೋಡಿದಾಗ ಕಣ್ಣೀರು ಬರುತ್ತೆ, ಆದ್ರೆ ನಾನು ಇನ್ಮುಂದೆ ಕಣ್ಣೀರು ಹಾಕಲ್ಲ : ಕುಮಾರಸ್ವಾಮಿ

Facebook
Twitter
Telegram
WhatsApp

 

ಮಂಡ್ಯ : ಈ ಹಿಂದೆ ಕುಮಾರಸ್ವಾಮಿ ಅವರು ಚುನಾವಣಾ ಸಮಯದಲ್ಲಿ‌ ಹಾಕಿದ್ದ ಕಣ್ಣೀರು ಬಹಳಷ್ಟು ಟೀಕೆಗೆ ಗುರಿಯಾಗಿತ್ತು. ಇದೀಗ ಪರಿಷತ್ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಿರುವ ಮಾಜಿ ಸಿಎಂ ಕುಮಾರಸ್ವಾಮಿ ನಾನ್ ಇನ್ಮುಂದೆ ಕಣ್ಣೀರು ಹಾಕಲ್ಲ ಎಂದಿದ್ದಾರೆ. ಜನರ ಕಷ್ಟ ಕಂಡರೆ ಕಣ್ಣೀರು ಬರುತ್ತೆ. ನಂದು ಕಟುಕ ಹೃದಯವಲ್ಲ. ಆದ್ರೆ ಇನ್ಮುಂದೆ ನಾನು ಕಣ್ಣೀರು ಹಾಕಲ್ಲ ಎಂದಿದ್ದಾರೆ.

ನಾನು ಸಿಎಂ ಆಗಿದ್ದಾಗ ಕನಗನಮರಡಿಯಲ್ಲಿ ಸಂಭವಿಸಿದ ಬಸ್ ದುರಂತ ನನ್ನ ಕಣ್ಣಲ್ಲಿ ನೀರು ತರಿಸಿತ್ತು. ಅದನ್ನೇ ಕೆಲವರು ಹೀಯಾಳಿಸಿದರು. ಟವೆಲ್ ನಲ್ಲಿ ಗ್ಲಿಸರಿನ್ ಹಾಕೊಂಡು ಅಳ್ತಿದ್ದಾರೆ ಅಂತ ವ್ಯಂಗ್ಯ ಮಾಡಿದ್ರು ಹೀಗಾಗಿ ಇನ್ಮುಂದೆ ನಾನು ಕಣ್ಣೀರು ಹಾಕಲ್ಲ ಎಂದಿದ್ದಾರೆ.

ಇನ್ನು ಮೈತ್ರಿ ವಿಚಾರವಾಗಿ ಮಾತನಾಡಿ, ನಾನು ಮೈತ್ರಿ ಮಾಡಿಕೊಳ್ಳುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ಕೆಲವು ದಿನಗಳ ಹಿಂದೆ ದೇವೇಗೌಡರು ಪ್ರಧಾನಿ ಮೋದಿಯವರನ್ನ ಭೇಟಿಯಾಗಿದ್ದರ ಬಗ್ಗೆ ಹೇಳಿದ ಅವರು, ಕಾಂಗ್ರೆಸ್ ನಾಯಕರು ನಮ್ಮ ಸಹಕಾರವನ್ನೂ ಕೇಳಿಲ್ಲ, ಆದರೆ ಯಡಿಯೂರಪ್ಪ ಅವರು ಕೇಳಿದ್ದಾರೆ, ಆ ಬಗೆಗೆ ನಾನಿನ್ನು ನಿರ್ಧರಿಸಿಲ್ಲ. ನಾಳೆ ಬೆಂಗಳೂರಿನಲ್ಲಿ ಪ್ರೆಸ್ ಮೀಟ್ ಕರೆದು ಘೋಷಣೆ ಮಾಡುತ್ತೇನೆ ಎಂದು ಹೇಳಿದ್ದಾರೆ

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

ಪ್ರತೀ ಬಾರಿ ಭಾರತೀಯರನ್ನು ನಂಬಿಸಿ ಮೋಸ ಮಾಡೋದು ಮೋದಿಯವರಿಗೆ ರೂಢಿಯಾಗಿದೆ: ಸಿ.ಎಂ. ಸಿದ್ದರಾಮಯ್ಯ

ಚಿತ್ರದುರ್ಗ ಏ 23: ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿ ಇಡಿ ದೇಶದ ರೈತರ 76 ಸಾವಿರ ಕೋಟಿ ಸಾಲ ಮನ್ನಾ ಮಾಡಿದರು. ಮೋದಿ ಪ್ರಧಾನಿಯಾಗಿ ಅತ್ಯಂತ ಶ್ರೀಮಂತರ 16 ಲಕ್ಷ ಕೋಟಿ ಸಾಲ ಮನ್ನಾ

error: Content is protected !!