Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಮೀನು ವಿವಾದ : ತುಮಕೂರಿನಲ್ಲಿ ಅಡಿಕೆ ಗಿಡಗಳು ಬಲಿ..!

Facebook
Twitter
Telegram
WhatsApp

ಜಮೀನು ವಿವಾದ : ತುಮಕೂರಿನಲ್ಲಿ ಅಡಿಕೆ ಗಿಡಗಳು ಬಲಿ..!

ತುಮಕೂರು: ಮರಗಿಡಗಳು ಮಕ್ಕಳಿದ್ದಂತೆ. ಇನ್ನು ಫಸಲು ಕೊಡುವ ಗಿಡ ಮರಗಳನ್ನು ದೇವರಂತೆಯೇ ಕಾಣುತ್ತಾರೆ. ಫಸಲು ಬರುವುದನ್ನು ಹಾಳು ಮಾಡುವ ಮನಸ್ಸನ್ನು ಯಾರು ಮಾಡುವುದಿಲ್ಲ. ಆದ್ರೆ ತುಮಕೂರು ಜಿಲ್ಲೆಯ ಹೆಬ್ಬೂರು ಹೋಬಳಿಯ ಹುಲಿಯಾಪುರ ಗ್ರಾಮದಲ್ಲಿ ಫಸಲು ಬಂದ ಬೆಳೆಯನ್ನು ಲೆಕ್ಕಿಸದೆ ದ್ವೇಷ ಮಾತ್ರ ತೀರಿಸಿಕೊಂಡಿದ್ದಾರೆ. ಇದ್ದ ಹಳೆ ದ್ವೇಷದಿಂದ ಸುಮಾರು 126 ಅಡಿಕೆ ಗಿಡಗಳನ್ನು ಕತ್ತರಿಸಿ, ನೆಲಕ್ಕುರುಳಿಸಿದ್ದಾರೆ.

ಮಂಗಳಮ್ಮ ಎಂಬುವವರಿಗೆ ಸೇರಿದ ಅಡಿಕೆ ಗಿಡಗಳನ್ನು ಈ ರೀತಿ ನಾಶ ಮಾಡಿರುವುದು ಎಂಬುದು ತಿಳಿಸು ಬಂದಿದೆ. ಮಂಗಳಮ್ಮ ಸುಮಾರು 12 ಗುಂಟೆ ಜಮೀನಿನಲ್ಲಿ ಅಡಿಕೆ ಗಿಡಗಳನ್ನು ಬೆಳೆದಿದ್ದರು. ಈ ಜಮೀನಿಗೆ ಸಂಬಂಧಿಸಿದಂತೆ ಆಗಾಗ ಜಗಳಗಳು ನಡೆಯುತ್ತಿದ್ದವಂತೆ. ಇವರ ಸಂಬಂಧಿಗಳಾದ ಜಗದಂಬ ಮತ್ತು ರೇಣುಕಮ್ಮ ಎಂಬುವವರು ಈ ವಿಚಾರಕ್ಕೆ ಯಾವಾಗಲೂ ಜಗಳ ಮಾಡುತ್ತಿದ್ದರಂತೆ. ಇದೇ ದ್ವೇಷದಿಂದ ಗಿಡಗಳನ್ನು ಕಡಿದು ಹಾಕಿದ್ದಾರೆ ಎಂದು ಮಂಗಳಮ್ಮ ಆರೋಪಿಸಿದ್ದಾರೆ.

ಇನ್ನು ಬೆಳಗ್ಗಿನ ಜಾವ ಈ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ದೂರು ನೀಡಿದ್ದು, ಘಟನಾ ಸ್ಥಳಕ್ಕೆ ಹೆಬ್ಬೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜಗದಂಬಾ ಹಾಗೂ ರೇಣುಕಮ್ಮಾ ವಿರುದ್ಧವೂ ಪೊಲೀಸ್ ಠಾನೆಯಲ್ಲಿ ದೂರು ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ

ಈ ರಾಶಿಯ ತಂದೆ ತಾಯಿಗೆ ಮಗಳ ಕುಟುಂಬದಲ್ಲಿ ತುಂಬ ಸಮಸ್ಯೆ ಇದೆ, ಈ ರಾಶಿಯವರ ಉದ್ಯೋಗದಲ್ಲಿ ತುಂಬಾ ಸಮಸ್ಯೆ ಅದರ ಜೊತೆ ಹಣಕಾಸಿನ ಸಮಸ್ಯೆ ಕಾಡಲಿದೆ, ಬುಧವಾರ ರಾಶಿ ಭವಿಷ್ಯ -ಏಪ್ರಿಲ್-24,2024 ಸೂರ್ಯೋದಯ: 05:57,

ಬಿ ಎನ್ ಚಂದ್ರಪ್ಪ ಪರ ಮತಯಾಚನೆ ಮಾಡಿ, ಮೋದಿ, ಅಮಿತ್ ಶಾ ವಿರುದ್ಧ ಗುಡುಗಿದ ಸಿದ್ದರಾಮಯ್ಯ

ಚಿತ್ರದುರ್ಗ: ಈ ತಿಂಗಳ 26 ಕ್ಕೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಬಿಎನ್ ಚಂದ್ರಪ್ಪ ರನ್ನ ಹೆಚ್ಚು ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಮನವಿ ಮಾಡ್ತೀನಿ. ಕಳೆದ 10 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದೆ ಮೋದಿಯವರು ಪ್ರಧಾನಿಯಾಗಿದ್ದಾರೆ.

ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸುತ್ತೇವೆ: ಪ್ರಿಯಾಂಕಾಗಾಂಧಿ ಭರವಸೆ

ಚಿತ್ರದುರ್ಗ ಏ 23: ಕಾಡುಗೊಲ್ಲ ಸಮುದಾಯವನ್ನು ST ಗೆ ಸೇರಿಸಲು ಮೇಲದ ಮೇಲೆ ನಾವು ಕೇಂದ್ರಕ್ಕೆ ಕೇಳುತ್ತಲೇ ಇದ್ದೇವೆ. ಆದರೂ ಇದುವರೆಗೂ ಏಕೆ ಸ್ಪಂದಿಸುತ್ತಿಲ್ಲ ಮೋದಿಯವರೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಇಲ್ಲಿ

error: Content is protected !!