Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬರಗಾಲದ ನಿಯಮ ಸಡಿಲಿಕೆಗೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

ಬರಗಾಲದ ನಿಯಮ ಸಡಿಲಿಕೆಗೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಗಸ್ಟ್ ತಿಂಗಳಿನ ಅರ್ಧ ಭಾಗ ಮುಗಿಸಿದರೂ ಮಳೆಯಾಗುವ ಸೂಚನೆ ಕಾಣುತ್ತಿಲ್ಲ. ಜೂನ್, ಜುಲೈನಲ್ಲಿಯೇ ಸಾಕಷ್ಟು ಮಳೆಯಾಗಬೇಕಿತ್ತು. ಹೊಲಗಳಲ್ಲಿ ಉಳುಮೆ ಮಾಡಿ, ಮೋಡದತ್ತ ಕಣ್ಣಿಟ್ಟು ಕೂತಿದ್ದಾರೆ ರೈತರು. ಬೀಜ ಬಿತ್ತನೆ ಮಾಡಿದರೂ ಮಳೆಯಿಲ್ಲದೆ ಮಣ್ಣಿನಲ್ಲಿ ಊತು ಹೋಗುತ್ತಿವೆ. ಹೀಗಾಗಿ ಈ ಬಾರಿ ಬರಗಾಲ ಎಂದು ಘೋಷಿಸಲು ಸರ್ಕಾರ ನಿರ್ಧಾರ ಮಾಡಿದೆ.

ಆದರೆ ಇದರ ನಡುವೆ ಬರಗಾಲ ಎಂದು ಘೋಷಣೆ ಮಾಡುವುದಕ್ಕೆ ಕೇಂದ್ರ ಸರ್ಕಾರದ ಹಲವು ನಿಯಮಗಳು ಅಡ್ಡಿಯಾಗುತ್ತಿವೆ. ಹೀಗಾಗಿ ನಿಯಮಾವಳಿ ಸಡಿಲಿಕೆಗೆ ಕೇಂದ್ರಕ್ಕೆ ಪತ್ರದ ಮೂಲಕ ಮನವಿ ಮಾಡಿದ್ದಾರೆ ಸಿದ್ದರಾಮಯ್ಯ.

ಸದ್ಯಕ್ಕೆ ಬರಗಾಲ ಎಂದು ಘೋಷಣೆ‌ ಮಾಡಲು, ಕನಿಷ್ಠ‌ ಮೂರು ವಾರಗಳ ಕೊರತೆಯಿಂದ ಆ ತಾಲೂಕಿನಲ್ಲಿ ಮಳೆಯಾಗಬಾರದು.60% ಮಳೆ ಕೊರತೆ ಇರಬೇಕು, 33% ಬೆಳೆ ಹಾನಿಯಾದರೆ ಮಾತ್ರ ಪರಿಹಾರ ನೀಡಲು ಅವಕಾಶ.ಈ ನಿಯಮಗಳನ್ನು ತಿದ್ದು ಪಡಿ ಮಾಡಲು ಮನವಿ ಮಾಡಲಾಗಿದೆ. ಮಳೆ ಕೊರತೆ ಪ್ರಮಾಣವನ್ನು ಶೇ. 60 ರಿಂದ 30ಕ್ಕೆ ಇಳಿಸಲು ಮನವಿ ಮಾಡಲಾಗಿದೆ. ಕೇಂದ್ರದ ನಿಯಮಗಳು ಸಡಿಲಿಕೆಯಾದರೆ ಮಾತ್ರ ರಾಜ್ಯದಲ್ಲಿ ಬರಪೀಡಿತ ಎಂದು ಘೋಷಿಸಲು ಸಾಧ್ಯವಾಗುತ್ತದೆ. ಬರಗಾಲ ಎಂದು ಘೋಷಿಸಲು ಕೇಂದ್ರದ ಕೆಲ ನಿಯಮಗಳಯ ಅಡ್ಡಿಯಾಗಿದ್ದು ಅವುಗಳನ್ನು ಸಡಿಲಿಕೆ ಮಾಡಬೇಕೆಂದು ಕೇಂದ್ರದ ಕೃಷಿ ಇಲಾಖೆಗೆ ಪತ್ರ ಬರೆಯಲಾಗಿದೆ. ಕೇಂದ್ರ ಕೃಷಿ ಇಲಾಖೆ ಅನುಮತಿಸಿದರೆ ಮಾತ್ರ ಬರಗಾಲ ಎಂದು ಘೋಷಣೆ‌ ಮಾಡಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

ಹೊಳಲ್ಕೆರೆ | ಸ್ನೇಹ ಪಬ್ಲಿಕ್ ಶಾಲೆಯಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಸುದ್ದಿಒನ್, ಹೊಳಲ್ಕೆರೆ, ಜುಲೈ. 26 : ನಮ್ಮ ರಾಷ್ಟ್ರಧ್ವಜವು ಗಾಳಿಯಿಂದ ಹಾರುತ್ತಿಲ್ಲ ಬದಲಾಗಿ ಅದು ಹಾರುತ್ತಿರುವುದು ಈ ದೇಶಕ್ಕಾಗಿ ಮಡಿದ ವೀರ ಯೋಧರ ಸೈನಿಕರ ಉಸಿರಿನಿಂದ ಎಂದು ಸಂಸ್ಥೆಯ ಕಾರ್ಯದರ್ಶಿ ಜಿ.ಎಸ್. ವಸಂತ್ ಹೇಳಿದರು.

error: Content is protected !!