Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆನ್ನಿಗೆ ಚೂರಿ ಹಾಕೋರು ನೀವೂ : ಸುಮಲತಾ ವಿರುದ್ಧ ವಾಗ್ದಾಳಿ ನಡೆಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರವೀಂದ್ರ..!

Facebook
Twitter
Telegram
WhatsApp

 

ಮಂಡ್ಯ: ಇತ್ತಿಚೆಗಷ್ಟೇ ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದೆ. ಇದು ಮಂಡ್ಯ ಜಿಲ್ಲೆಯಲ್ಲಿಯೇ ಹಲವರಿಗೆ ಬೇಸರದ ಸಂಗತಿಯಾಗಿದೆ. ಅವರ ಗೆಲುವಿಗೆ ಸಪೋರ್ಟ್ ಮಾಡಿದ್ದವರೆಲ್ಲಾ ಈಗ ಹಿಂದೆ ಸರಿಯುವಂತೆ ಆಗಿದೆ. ಸ್ವಾಭಿಮಾನ ಪದ ಬಳಸಬೇಡಿ ಎಂದು ಸುಮಲತಾ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರವೀಂದ್ರ ತರಾಟೆ ತೆಗೆದುಕೊಂಡಿದ್ದಾರೆ.

ಕತ್ತು ಹಿಸುಕಿದ್ದೀರಿ. ನೀವೂ ಯಾವ ರೀತಿಯಾಗಿ ಕೊಲೆಗಡುಕರಾಗಿದ್ದೀರಿ. ಬೆನ್ನಿಗೆ ಚೂರಿ ಹಾಕೋರು ನೀವೂ ಇನ್ನು ಮುಂದೆ ಸ್ವಾಭಿಮಾನಿ ಪದ ಬಳಸಬೇಡಿ. ಜಿಲ್ಲೆಯ ಸ್ವಾಭಿಮಾನ ಅಡವಿಡಲು ಹೋಗಬೇಡಿ. ಆ ಪದ ಹೇಳುವ ಹಕ್ಕು ನಿಮಗೆ ಇಲ್ಲ. ಸಚ್ಚಿದಾನಂದನ ಬಿಟ್ಟುಕೊಡಲು ನಿಮಗೆ ಆಗಲ್ಲ. ರಮೇಶ್ ಬಾಬು, ಬಂಡಿಸಿದ್ದೇಗೌಡರ ಬೆಂಬಲವಾಗಿ ನಿಂತ ರೈತ ಸಂಘಕ್ಕೆ ಏನು ನ್ಯಾಯ ಕೊಡುತ್ತೀರಾ..? ಎಂದು ಪ್ರಶ್ನಿಸಿದ್ದಾರೆ.

ನಮ್ಮಣ್ಣನ (ಅಂಬರೀಶ್) ಮರ್ಯಾದೆ ಕಳೆಯಲು ಹೋಗಬೇಡಿ. ನನ್ನ ಪ್ರಶ್ನೆಗಳಿಗೆ ಉತ್ತರ ಕೊಡದೆ ಹೋದರೆ ಇನ್ನು ಹತ್ತು ಹತ್ತು ಹಲವು ವಿಚಾರಗಳು ಹೊರಗೆ ಬರುತ್ತವೆ. ಸುಮಲತಾರಿಗಾಗಿ, ಜಿಲ್ಲೆ ಅಸ್ಮಿತೆ ಸ್ವಾಭಿಮಾನಕ್ಕಾಗಿ ಪಾದಯಾತ್ರೆ ಮಾಡಿದ್ದೆವು. ನನ್ನಂತವರ ಹೋರಾಟದಿಂದ ಎಲೆಕ್ಷನ್ ಗೆದ್ರಿ. ಅದಾದ ಬಳಿಕ ನೀವೂ ಎಲ್ಲಿಗೆ ಹೋದ್ರಿ..? ಜಿಲ್ಲೆಯ ಅಭಿವೃದ್ಧಿ ಕೆಲಸ ಮಾಡಲು ಪ್ರಯತ್ನ ಪಟ್ಟಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curry Leaves Juice : ಕರಿಬೇವಿನ ಜ್ಯೂಸ್ ಕುಡಿಯುವುದರಿಂದ ಆಗುವ ಲಾಭಗಳೇನು ?

ಸುದ್ದಿಒನ್ : ಅಡುಗೆಯಲ್ಲಿ ಕರಿಬೇವಿನ ಸೊಪ್ಪನ್ನು ಸಾಮಾನ್ಯವಾಗಿ ಬಳಸುತ್ತೇವೆ. ವಿವಿಧ ರೀತಿಯ ಅಡುಗೆಗೆ ಅವಶ್ಯವಾಗಿ ಬಳಸಲಾಗುತ್ತದೆ. ಕರಿಬೇವಿನ ಎಲೆಗಳನ್ನು ಹಾಕುವುದರಿಂದ ಉತ್ತಮ ರುಚಿ ಮತ್ತು ಪರಿಮಳ ಹೆಚ್ಚುತ್ತದೆ. ರುಚಿ ಮತ್ತು ವಾಸನೆ ಮಾತ್ರವಲ್ಲದೆ ತುಂಬಾ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ

ಈ ರಾಶಿಯ ಗುತ್ತಿಗೆದಾರರಿಗೆ ಹೊಸ ಟೆಂಡರ್ ಹಾಗೂ ಹಳೆ ಬಾಕಿ ಅತಿ ಶೀಘ್ರದಲ್ಲಿ ಪಡೆಯಲಿದ್ದೀರಿ, ಈ ರಾಶಿಯವರು ಆಸ್ತಿ ಉಡುಗೊರೆಯಾಗಿ ಪಡೆಯುವಿರಿ, ಶನಿವಾರ ರಾಶಿ ಭವಿಷ್ಯ -ಜುಲೈ-27,2024 ಸೂರ್ಯೋದಯ: 05:58, ಸೂರ್ಯಾಸ್ತ : 06:47

error: Content is protected !!