Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬೆನ್ನಿಗೆ ಚೂರಿ ಹಾಕೋರು ನೀವೂ : ಸುಮಲತಾ ವಿರುದ್ಧ ವಾಗ್ದಾಳಿ ನಡೆಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರವೀಂದ್ರ..!

Facebook
Twitter
Telegram
WhatsApp

 

ಮಂಡ್ಯ: ಇತ್ತಿಚೆಗಷ್ಟೇ ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಪಕ್ಷಕ್ಕೆ ಬೆಂಬಲ ಸೂಚಿಸಿದ್ದಾರೆ. ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದೆ. ಇದು ಮಂಡ್ಯ ಜಿಲ್ಲೆಯಲ್ಲಿಯೇ ಹಲವರಿಗೆ ಬೇಸರದ ಸಂಗತಿಯಾಗಿದೆ. ಅವರ ಗೆಲುವಿಗೆ ಸಪೋರ್ಟ್ ಮಾಡಿದ್ದವರೆಲ್ಲಾ ಈಗ ಹಿಂದೆ ಸರಿಯುವಂತೆ ಆಗಿದೆ. ಸ್ವಾಭಿಮಾನ ಪದ ಬಳಸಬೇಡಿ ಎಂದು ಸುಮಲತಾ ಅವರಿಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರವೀಂದ್ರ ತರಾಟೆ ತೆಗೆದುಕೊಂಡಿದ್ದಾರೆ.

ಕತ್ತು ಹಿಸುಕಿದ್ದೀರಿ. ನೀವೂ ಯಾವ ರೀತಿಯಾಗಿ ಕೊಲೆಗಡುಕರಾಗಿದ್ದೀರಿ. ಬೆನ್ನಿಗೆ ಚೂರಿ ಹಾಕೋರು ನೀವೂ ಇನ್ನು ಮುಂದೆ ಸ್ವಾಭಿಮಾನಿ ಪದ ಬಳಸಬೇಡಿ. ಜಿಲ್ಲೆಯ ಸ್ವಾಭಿಮಾನ ಅಡವಿಡಲು ಹೋಗಬೇಡಿ. ಆ ಪದ ಹೇಳುವ ಹಕ್ಕು ನಿಮಗೆ ಇಲ್ಲ. ಸಚ್ಚಿದಾನಂದನ ಬಿಟ್ಟುಕೊಡಲು ನಿಮಗೆ ಆಗಲ್ಲ. ರಮೇಶ್ ಬಾಬು, ಬಂಡಿಸಿದ್ದೇಗೌಡರ ಬೆಂಬಲವಾಗಿ ನಿಂತ ರೈತ ಸಂಘಕ್ಕೆ ಏನು ನ್ಯಾಯ ಕೊಡುತ್ತೀರಾ..? ಎಂದು ಪ್ರಶ್ನಿಸಿದ್ದಾರೆ.

ನಮ್ಮಣ್ಣನ (ಅಂಬರೀಶ್) ಮರ್ಯಾದೆ ಕಳೆಯಲು ಹೋಗಬೇಡಿ. ನನ್ನ ಪ್ರಶ್ನೆಗಳಿಗೆ ಉತ್ತರ ಕೊಡದೆ ಹೋದರೆ ಇನ್ನು ಹತ್ತು ಹತ್ತು ಹಲವು ವಿಚಾರಗಳು ಹೊರಗೆ ಬರುತ್ತವೆ. ಸುಮಲತಾರಿಗಾಗಿ, ಜಿಲ್ಲೆ ಅಸ್ಮಿತೆ ಸ್ವಾಭಿಮಾನಕ್ಕಾಗಿ ಪಾದಯಾತ್ರೆ ಮಾಡಿದ್ದೆವು. ನನ್ನಂತವರ ಹೋರಾಟದಿಂದ ಎಲೆಕ್ಷನ್ ಗೆದ್ರಿ. ಅದಾದ ಬಳಿಕ ನೀವೂ ಎಲ್ಲಿಗೆ ಹೋದ್ರಿ..? ಜಿಲ್ಲೆಯ ಅಭಿವೃದ್ಧಿ ಕೆಲಸ ಮಾಡಲು ಪ್ರಯತ್ನ ಪಟ್ಟಿದ್ದೀರಾ ಎಂದು ಪ್ರಶ್ನಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!