ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಈಸೂರು ಸ್ವಾತಂತ್ರ್ಯ ಚಳುವಳಿ ನೆನೆದ ಪ್ರಧಾನಿ ಮೋದಿ
ಶಿವಮೊಗ್ಗ: ಇಂದು ಜಿಲ್ಲೆಗೆ ಭೇಟಿ ನೀಡಿರುವ ಪ್ರಧಾನಿ ಮೋದಿ, ಇಲ್ಲಿನ ವಿಮಾನ ನಿಲ್ದಾಣವನ್ನು ಉದ್ಘಾಟನೆ ಮಾಡಿದ್ದಾರೆ. ಜೊತೆಗೆ ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರ ಹುಟ್ಟುಹಬ್ಬವಾಗಿರುವ ಕಾರಣ, ಅವರಿಗೆ ವಿಶೇಷವಾಗಿ ಶುಭಾಶಯಕೋರಿದ್ದಾರೆ.
ಇದೇ ವೇಳೆ ಜನರನ್ನುದ್ದೇಶಿಸಿ ಭಾಷಣ ಮಾಡಿ ಮೋದಿ, ಕರ್ನಾಟಕ, ಅಭಿವೃದ್ಧಿ ಪಥದ ಮೇಲೆ ನಡೆಯುತ್ತಿದೆ. ಈ ಅಭಿವೃದ್ಧಿ ಪಥ ರಾಜ್ಯಾದ್ಯಂತ ತಲುಪಲಿ. ಅಭಿವೃದ್ಧಿಯ ಪ್ರಗತಿಯ ಪಥದ ಮೇಲೆ ಓಡುತ್ತಿದೆ ಎಂದಿದ್ದಾರೆ.
ತಮ್ಮ ಭಾಷಣದಲ್ಲಿ ಎರಡು ಕ್ಷೇತ್ರ ಉಲ್ಲೇಖಿಸಿದ ಪ್ರಧಾನಿ, ಗಂಗಾ ಸ್ನಾನ ತುಂಗಾ ಪಾನ ಎಂಬ ಉಕ್ತಿಯೇ ಇದೆ. ಉಸಿರು ಬಿಟ್ಟರೂ ಈಸೂರು ಬಿಡೆವು ಎಂದು ಹೋರಾಡಿದ್ದರು. ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ್ದರು ಎಂದು ಪ್ರಧಾನಿ ಮೋದಿ ನೆನಪಿಸಿಕೊಂಡಿದ್ದಾರೆ.
ಶಿವಮೊಗ್ಗ ಪಶ್ಚಿಮಘಟ್ಟದಲ್ಲಿ ಬರುವ ಮಲೆನಾಡಿನ ಹೆಬ್ಬಾಗಿಲು ಇದ್ದಂತೆ. ಇಲ್ಲಿ ಜೋಗ್ ಜಲಪಾತ, ನದಿಗಳು, ಆನೆ ಬಿಡಾರವೂ ಇದೆ. ಇನ್ನು ಆಗುಂಬೆ ಸೂರ್ಯಾಸ್ತವನ್ನು ಮರೆಯಲು ಯಾರಿಂದಲಾದರೂ ಸಾಧ್ಯವೇ ಇಲ್ಲ. ಜಿಲ್ಲೆಯಲ್ಲಿ ನದಿ, ವನ್ಯ ಸಂಪತ್ತು ಅದ್ಭುತವಾಗಿದೆ ಎಂದು ಮಲೆನಾಡನ್ನು ಹಾಡಿ ಹೊಗಳಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್