ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಕಾಂಗ್ರೆಸ್ ಸರ್ಕಾರದಲ್ಲಿ ಸಿಎಂ ಹುದ್ದೆ ಬಗ್ಗೆ ಈಗಲೂ ಆಗಾಗ ಹೊಗೆಯಾಡುತ್ತಲೇ ಇರುತ್ತದೆ. ಯಾಕಂದ್ರೆ ಸಿಎಂ ಹುದ್ದೆ ಬೇಕು ಎಂಬ ಕಾರಣಕ್ಕೆ ಡಿಕೆ ಶಿವಕುಮಾರ್ ಕೂಡ ಸಾಕಷ್ಟು ಶ್ರಮ ಹಾಕಿದರು. ಆದರೆ ಸದ್ಯದ ಪರಿಸ್ಥಿತಿಗೆ ಸಿದ್ದರಾಮಯ್ಯ ಅವರನ್ನೇ ಸಿಎಂ ಮಾಡಿದೆ ಹೈಕಮಾಂಡ್. ಇದರ ಜೊತೆಗೆ ಇದೇ ಅವಧಿಯಲ್ಲಿ ಡಿಕೆ ಶಿವಕುಮಾರ್ ಕೂಡ ಸಿಎಂ ಆಗಲಿದ್ದಾರೆ ಎಂಬ ಭರವಸೆಯನ್ನು ನೀಡಿದೆ.
ಇದರ ನಡುವೆ ಸಚಿವ ಎಂಬಿ ಪಾಟೀಲ್ ಹೇಳಿದ ಹೇಳಿಕೆ ಡಿಕೆಶಿ ಬೆಂಬಲಿಗರನ್ನು ಕೆರಳಿಸಿದೆ. ಪೂರ್ಣಾವಧಿಯಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಅವರೇ ಮುಂದುವರೆಯಲಿದ್ದಾರೆ ಎಂದಿದ್ದರು. ಆ ಹೇಳಿಕೆಯನ್ನು ಬಳಿಕ ಸಮರ್ಥನೆ ಕೂಡ ಮಾಡಿಕೊಂಡಿದ್ದರು. ಆದರೆ ಮಾಧ್ಯಮದ ಮೂಲಕ ಡಿಕೆ ಸುರೇಶ್ ಎಚ್ಚರಿಕೆ ನೀಡಿದ್ದರು. ಇದೀಗ ಎದುರಿಗೆ ಸಿಕ್ಕ ಎಂಬಿ ಪಾಟೀಲ್ ಅವರಿಗೆ ಮತ್ತೆ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧ ಸಭಾಂಗಣದಲ್ಲಿ ಡಿಕೆ ಸುರೇಶ್ ಹಾಗೂ ಎಂಬಿ ಪಾಟೀಲ್ ಮುಖಾಮುಖಿಯಾದರು. ಈ ವೇಳೆ ಗುರಾಯಿಸಿದ ಡಿಕೆ ಸುರೇಶ್, ಬಿಗಿಯಾಗಿರಲಿ ಸ್ವಲ್ಪ ಎಂದಿದ್ದಾರೆ. ಬಹಿರಂಗವಾಗಿಯೇ ಹೇಳಿದು, ಇದನ್ನು ಕಂಡು ಅಲ್ಲಿದ್ದ ಎಲ್ಲರೂ ಗಾಬರಿಯಾಗಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್