Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕಾಂಗ್ರೆಸ್ ಭದ್ರಕೋಟೆಯಲ್ಲಿ ಸ್ಪರ್ಧೆ‌ ಮಾಡುತ್ತಾರಾ ಶ್ರೀರಾಮುಲು..?

Facebook
Twitter
Telegram
WhatsApp

ಬೆಂಗಳೂರು: 2023ರ ಚುನಾವಣೆಯ ಬಿಸಿ ಜೋರಾಗಿದೆ. ಪ್ರಚಾರದ ಜೊತೆಗೆ ಕ್ಷೇತ್ರ ಫಿಕ್ಸ್ ಮಾಡಿಕೊಳ್ಳುವಲ್ಲೂ ಅಭ್ಯರ್ಥಿಗಳು ತಲೆ ಕೆಡಿಸಿಕೊಂಡಿದ್ದಾರೆ. ಯಾವ ಕ್ಷೇತ್ರದಲ್ಲಿ ನಿಂತರೆ ಯಾರು ಎದುರಾಳಿಯಾಗುತ್ತಾರೆ..? ಅಲ್ಲಿನ ಗೆಲುವು ಪಡೆಯುವುದು ಹೇಗೆ ಎಂಬುದೆಲ್ಲವನ್ನು ಲೆಕ್ಕಾಚಾರ ಹಾಕುತ್ತಿದ್ದಾರೆ. ಇದೀಗ ಶ್ರೀರಾಮುಲು ಮತ್ತು ಸಂತೋಷ್ ಲಾಡ್ ಭೇಟಿ ಕಾಂಗ್ರೆಸ್ ನಾಯಕರನ್ನು ಮಾತ್ರವಲ್ಲ ಬಿಜೆಪಿ ನಾಯಕರಿಗೂ ತಲೆ ಬಿಸಿ ಮಾಡಿದೆ.

ಬಳ್ಳಾರಿ ರಾಜಕೀಯ ಈ ಬಾರಿ ಬಹಳಷ್ಟು ಸುದ್ದಿಯಾಗುತ್ತಿದೆ. ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅತ್ಯಾಪ್ತರು ಎಂಬುದು ಗೊತ್ತಿದೆ. ಸ್ನೇಹಿತರ ನಡುವೆ, ಅಣ್ಣ ತಮ್ಮಂದಿರ ನಡುವೆ ಚುನಾವಣಾ ಸ್ಪರ್ಧೆ ಏರ್ಪಡಲಿದೆ. ಸೋಮಶೇಖರ್ ರೆಡ್ಡಿ ಬಳ್ಳಾರಿ‌ ಮೇಲೆ ಕಣ್ಣಿಟ್ಟಿದ್ದರೆ, ಶ್ರೀರಾಮುಲು ಸಂಡೂರಿನ ಮೇಲೆ ಕಣ್ಣಿಟ್ಟಿದ್ದಾರೆ.

ಕಾಂಗ್ರೆಸ್ ಅಧಿಪತ್ಯ ಸಾಧಿಸಿರುವಂತ ಸಂಡೂರಿನ ಮೇಲೆ ಶ್ರೀರಾಮುಲು ಕಣ್ಣಾಕಿದ್ದಾರೆ. ಸಂಡೂರಿನಲ್ಲಿ ನಿಲ್ಲುವುದಕ್ಕೆ ಸಂತೋಷ್ ಲಾಡ್ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಸಂತೋಷ್ ಲಾಡ್ ಹಾಗೂ ಶ್ರೀರಾಮುಲು ಭೇಟಿ ಬಿಜೆಪಿಗೆ ಗೊಂದಲವನ್ನುಂಟು ಮಾಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

ಚಿತ್ರದುರ್ಗ | ಕಣಿವೆಯಿಂದ ಠಾಣೆಗೆ ಬಂದ ಮಾರಮ್ಮನ ರೋಚಕ ಕಥೆ..!

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 29 :  ಚಿತ್ರದುರ್ಗ ನಗರ ಪೊಲೀಸ್ ಠಾಣೆ ಆವರಣದಲ್ಲಿ ಶ್ರೀ ಕಣಿವೆ ಮಾರಮ್ಮ ದೇವಿ ಆಸೀನಳಾಗಿ ಬಹು ವಿಜೃಂಭಣೆಯಿಂದ ರಾರಾಜಿಸುತ್ತಿದ್ದಾಳೆ, ತಾಯಿ. ಅಸಂಖ್ಯಾತ ಭಕ್ತಜನ ದಿನದಿನವೂ ಅರ್ಚನೆ, ಹರಕೆಗಳಿಂದ ಇದೀಗ

ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ!

ಈ ರಾಶಿ ಒಲ್ಲದ ಮನಸಿಗೆ ಮದುವೆ ಯೋಗ, ಈ ರಾಶಿಯ ದಂಪತಿಗಳಿಗೆ ಸಂತಾನದ ವಿಷಯ ಕೇಳಿ ಹರ್ಷವೋ ಹರ್ಷ! ಶುಕ್ರವಾರ- ರಾಶಿ ಭವಿಷ್ಯ ಮಾರ್ಚ್-29,2024 ಸೂರ್ಯೋದಯ: 06:16, ಸೂರ್ಯಾಸ್ತ : 06:25 ಶಾಲಿವಾಹನ ಶಕೆ1944,

error: Content is protected !!