Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕುಟುಂಬ ಪಾರಂಪರ್ಯಕ್ಕೆ ಜನರೇ ಅಂತ್ಯ ಆಡಲಿದ್ದಾರೆ : ಸಿಪಿ ಯೋಗೀಶ್ವರ್ ಮಾತಿಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು..?

Facebook
Twitter
Telegram
WhatsApp

ಕುಟುಂಬ ಪಾರಂಪರ್ಯಕ್ಕೆ ಜನರೇ ಅಂತ್ಯ ಆಡಲಿದ್ದಾರೆ : ಸಿಪಿ ಯೋಗೀಶ್ವರ್ ಮಾತಿಗೆ ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು..?

ರಾಮನಗರ: ಚುನಾವಣಾ ಪ್ರಚಾರದ ತಯಾರಿಯಲ್ಲಿ ಜೆಡಿಎಸ್ ಭಾಗಿಯಾಗಿದೆ. ರಾಮನಗರದಲ್ಲಿ ಇಂದು ಪಂಚರತ್ನ ರಥಯಾತ್ರೆ ನಡೆದಿದ್ದು, ಈ ವೇಳೆ ನಿಖಿಲ್ ಕುಮಾರಸ್ವಾಮಿ, ಕುಟುಂಬ ರಾಜಕಾರಣದ ಬಗ್ಗೆ ಮಾತನಾಡಿದ್ದಾರೆ. ಜಿಲ್ಲೆಯಲ್ಲಿ ಕುಟುಂಬ ರಾಜಕಾರಣ ಎಂಬ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.

ಕುಮಾರಸ್ವಾಮಿ ಕುಟುಂಬ ರಾಜಕಾರಣದ ವಂಶಪಾರಂಪರ್ಯ ರಾಜಕಾರಣಕ್ಕೆ ಮುಂದಿನ ಚುನಾವಣೆಯಲ್ಲಿ ಜನರೇ ಅಂತ್ಯವಾಡಲಿದ್ದಾರೆ ಎಂಬ ಎಂಎಲ್ಸಿ ಯೋಗೀಶ್ವರ್ ಮಾತಿಗೆ ತಿರುಗೇಟು ನೀಡಿರುವ ನಿಖಿಲ್ ಕುಮಾರಸ್ವಾಮಿ, ಈ ಹಿಂದೆ ರಾಮನಗರದಲ್ಲಿ ರಾಜು ಎಂಬುವವರಿಗೆ ಟಿಕೆಟ್ ನೀಡಿದ್ದೆವು. ಅದರ ಅರಿವು ಸಿಪಿ ಯೋಗೀಶ್ವರ್ ಗೆ ಇದ್ದಂತೆ ಕಾಣುತ್ತಿಲ್ಲ. ಬಿಜೆಪಿಯಲ್ಲಿ ಯಡಿಯೂರಪ್ಪ, ಈಶ್ವರಪ್ಪ ಅವರ ಮಕ್ಕಳು ರಾಜಕೀಯದಲ್ಲಿದ್ದಾರೆ. ಕಾಂಗ್ರೆಸ್ ನಲ್ಲಿ ಡಿಕೆಶಿ ಅವರ ಮನೆಯವರು ನಾಲ್ಕು ಜನ ಇದ್ದಾರೆ. ಎಲ್ಲಾ ಪಕ್ಷದಲ್ಲೂ ಈ ವ್ಯವಸ್ಥೆ ಇದೆ. ಆದರೆ ರಾಮನಗರದಲ್ಲಿ ಕುಟುಂಬ ರಾಜಕಾರಣ ಎಂಬುದು ಇಲ್ಲ ಎಂದಿದ್ದಾರೆ.

ಜನ ಪಂಚರತ್ನ ಯೋಜನೆಯ ಬಗ್ಗೆ ಮಾಹಿತಿ ಪಡೆದುಕೊಳ್ಳುತ್ತಿದ್ದಾರೆ. ಹಣ ಕೊಟ್ಟರು ಸಹ ರಾಜಕೀಯ ಪಕ್ಷಗಳಿಗೆ ಜನ ಸೇರುತ್ತಿಲ್ಲ. ಆದರೆ ಮಧ್ಯರಾತ್ರಿಯವರೆಗೂ ಕುಮಾರಣ್ಣನನ್ನು ಸ್ವಾಗತ ಮಾಡುತ್ತಿದ್ದಾರೆ. ಇದನ್ನು ಕಂಡು ಕೆಲವರಿಗೆ ಸಹಿಸಲು ಆಗುತ್ತಿಲ್ಲ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!