Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಲಾಟೆ ಮಾಡುವಾಗ ರೇಪ್ ಮಾಡಿದ್ದಾರೆಂದು ದೂರು ಕೊಟ್ಟಿದ್ದಾರೆ : ಹಾವೇರಿ ನೈತಿಕ ಪೊಲೀಸ್ ಗಿರಿ ಬಗ್ಗೆ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

Facebook
Twitter
Telegram
WhatsApp

 

ಬೆಂಗಳೂರು: ಮುಂದಿನ ಲೋಕಸಭಾ ಚುನಾವಣೆ ಗೆಲ್ಲುವುದಕ್ಕೆ ಮೂರು ಡಿಸಿಎಂ ಹುದ್ದೆಗಳನ್ನು ಸೃಷ್ಟಿ ಮಾಡಿ ಎಂದು, ಕಾಂಗ್ರೆಸ್ ನಾಯಕರು ಬೇಡಿಕೆ ಇಟ್ಟಿದ್ದಾರೆ. ಇದು ಕಾಂಗ್ರೆಸ್ ನಲ್ಲಿ ಪರ – ವಿರೋಧಕ್ಕೆ ನಾಂದಿ ಹಾಡಿತ್ತು. ಇದೀಗ ಹೈಕಮಾಂಡ್ ನಿಂದ ಈ ಸಂಬಂಧ ಸ್ಪಷ್ಟ ಉತ್ತರ ಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಜಿ ಪರಮೇಶ್ವರ್, ಆ ರೀತಿ ಏನು ಇಲ್ಲ. ಎಐಸಿಸಿ ಅಧ್ಯಕ್ಷರೇ ಸೂಚನೆ ನೀಡಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಅಂತದ್ದು ಯಾವುದನ್ನು ಮಾಡುವುದಕ್ಕೆ ಆಗಲ್ಲ ಅಂತ ಹೇಳಿದ್ದಾರೆ.

 

ಇನ್ನು ಹಾವೇರಿಯಲ್ಲಿ ನಡೆದ ನೈತಿಕ ಪೊಲೀಸ್ ಗಿರಿ ಬಗ್ಗೆ ಮಾತನಾಡಿ, ಆ ಬಗ್ಗೆ ತನಿಳೆ ನಡೆಯುತ್ತಿದೆ. ಈ ಕೇಸ್ ಗೆ ಸಂಬಂಧಿಸಿದಂತೆ ಮೊದಲೇ ಅವರು ದೂರು ಕೊಟ್ಟಿಲ್ಲ. ಆಮೇಲೆ ದೂರು ಕೊಟ್ಟಿದ್ದಾರೆ. ಅವರನ್ನು ಈಗಾಗಲೇ ಅರೆಸ್ಟ್ ಕೂಡ ಮಾಡಿದ್ದಾರೆ. ತನಿಖೆ ನಡೆಯುತ್ತಿದೆ. ದೂರು ಕೊಟ್ಟಿರುವುದು ನಿಜವಾ..? ಸುಳ್ಳಾ ಎಂಬುದನ್ನು ನೋಡಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.

 

ಸಚಿವ ಜಿ ಪರಮೇಶ್ವರ್ ಮಾತು ಮುಂದುವರೆಸಿದ್ದು, ಶಿರಸಿಯಿಂದ ಬಂದು ಅಲ್ಲಿ ರೂಮ್ ಮಾಡಿದ್ದರು. ಬೇರೆಯವರ ಜೊತೆಗೆ ಅನೈತಿಕವಾಗಿ ಇದ್ದರು ಎಂದು ಗಲಾಟೆ ಮಾಡಿದ್ದಾರೆ. ಗಲಾಟೆ ಮಾಡುವಾಗಲೇ ನಮ್ಮ ಮೇಲೆ ರೇಪ್ ಮಾಡಿದ್ದಾರೆ ಎಂದು ದೂರು ನೀಡಿದ್ದಾರೆ. ಮೆಡಿಕಲ್ ಟೆಸ್ಟ್ ಕೂಡ ಮಾಡಿಸಲಾಗಿದೆ. ಇಂಥ ಕೇಸ್ ಗಳ ಮೇಲೆ ನಿರ್ಲಕ್ಷ್ಯ ಮಾಡಲ್ಲ. ಈಗಾಗಲೇ ವಿಚಾರಣೆ ನಡೆಯುತ್ತಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಪ್ರಜ್ವಲ್ ರೇವಣ್ಣ ಕೇಸ್: ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಇದ್ದಾಗ ಮಾಡಿಕೊಂಡ ವಿಡಿಯೋ.. ಪ್ರಜ್ವಲ್ ಗೆ ಶಿಕ್ಷೆಯಾಗಲೇಬೇಕು : ಮೋದಿ ಒತ್ತಾಯ..!

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ಈಗಾಗಲೇ ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಂಬಂಧಪಟ್ಟವರಿಗೆ ನೋಟೀಸ್ ನೀಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಸಂತ್ರಸ್ತೆಯರನ್ನು ಕರೆಸಿ, ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇದರ ನಡುವೆ ಪ್ರಧಾನಿ

ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ : ಬೇಗ ಬೇಗ ವೋಟ್ ಮಾಡಿ ಬಿಡಿ

ಬೆಂಗಳೂರು: ನಿನ್ನೆಯಿಂದ ಎಲ್ಲೆಡೆ ಜೋರು ಮಳೆಯಾಗುತ್ತಿದೆ. ಇಂದು ಕೂಡ ಹವಮಾನ ಇಲಾಖೆ ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಂಜೆ ವೇಳೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ. ಚಾಮರಾಜನಗರ ಮತ್ತು ರಾಮನಗರದ

ಶಿಕ್ಷಕ ಎಸ್. ಶಿವಕುಮಾರ್ ನಿಧನ

    ಸುದ್ದಿಒನ್, ಚಳ್ಳಕೆರೆ, ಮೇ. 07 : ತಾಲ್ಲೂಕಿನ ತಿಮ್ಮಣ್ಣನಹಳ್ಳಿಯ  ಸಿ.ಪಿ. ಮೂಡಲಗಿರಿಯಪ್ಪ ಗ್ರಾಮಾಂತರ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ಶಿವಕುಮಾರ್ (55 ವರ್ಷ) ಅವರು ಲೋ ಬಿಪಿಯಿಂದ ಸರ್ಕಾರಿ ಆಸ್ಪತ್ರೆಯಲ್ಲಿ

error: Content is protected !!