Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಾಮರಾಜಪೇಟೆಯಲ್ಲಿ ಜಮೀರ್ ಅಹ್ಮದ್ ಖಾನ್ ವಿರುದ್ಧ ಗೆಲುವು ಕಾಣ್ತಾರಾ ಮಾಜಿ ಪೊಲೀಸ್ ಕಮೀಷನರ್..?

---Advertisement---

 

 

ಬೆಂಗಳೂರು: ವಿಧಾನಸಭಾ ಚುನಾವಣೆಯ ಕಣ ರಂಗೇರುತ್ತಿದೆ. ಪಕ್ಷಗಳು ಸ್ಪರ್ಧಿಗಳ ಹೆಸರನ್ನು ಸೂಚಿಸುತ್ತಾ ಇದ್ದಾರೆ. ಇದೀಗ ಚಾಮರಾಜಪೇಟೆಯಲ್ಲಿ ಹಾಲಿ ಶಾಸಕ ಹಾಗೂ ಮಾಜಿ ಕಮಿಷನರ್ ನಡುವೆ ಜಿದ್ದಾಜಿದ್ದಿನ ಕಣ ನಿರ್ಮಾಣವಾಗುವ ಸಾಧ್ಯತೆ ಇದೆ. ಕಾಂಗ್ರೆಸ್ ನ ಪ್ರಬಲ ಅಭ್ಯರ್ಥಿಯಾಗಿರುವ ಭಾಸ್ಕರ್ ರಾವ್ ವಿರುದ್ಧ ಬಿಜೆಪಿ ಈ ಬಾರಿ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಗೆ ಟಿಕೆಟ್ ನೀಡಲು ನಿರ್ಧರಿಸಿದೆ ಎನ್ನಲಾಗಿದೆ.

ರೌಡಿಶೀಟರ್ ಸೈಲೆಂಟ್ ಸುನೀಲ ಚಾಮರಾಜಪೇಟೆಯ ಟಿಕೆಟ್ ಆಕಾಂಕ್ಷಿಯಾಗಿದ್ದ. ಬಿಜೆಪಿ ಕೂಡ ಸೈಲೆಂಟ್ ಸುನೀಲನಿಗೆ ಟಿಕೆಟ್ ನೀಡಲಿದೆ ಎಂಬ ಚರ್ಚೆಗಳು ಶುರುವಾಗಿತ್ತು. ಆದರೆ ಅದನ್ನು ಮೀರಿ ಈಗ ಭಾಸ್ಕರ್ ರಾವ್ ಅವರಿಗೆ ಟಿಕೆಟ್ ನೀಡಲಿದ್ದಾರೆ. ಸೈಲೆಂಟ್ ಸುನೀಲನನ್ನ ಸೈಡ್ ಲೈನ್ ಮಾಡಲಾಗಿದೆ ಎಂಬ ಮಾತುಗಳು ಕೇಳಿ ಬಂದಿದೆ.

ಬಿಜೆಪಿಯಿಂದ ಇಂದು ಮೊದಲ ಪಟ್ಟಿ ರಿಲೀಸ್ ಆಗಲಿದೆ. ಈ ಒಟ್ಟಿಯಲ್ಲಿ ಭಾಸ್ಕರ್ ರಾವ್ ಹೆಸರನ್ನು ಚಾಮರಾಜ ಪೇಟೆಗೆ ಸೂಚಿಸಲಾಗಿದೆ. ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ರಾಜಕೀಯಕ್ಕೆ ಎಂಟ್ರಿಯಾಗಿದ್ದ ಭಾಸ್ಕರ್ ರಾವ್ ಮೊದಲಿಗೆ ಎಎಪಿ ಪಕ್ಷಕ್ಕೆ ಸೇರಿದ್ದರು. ಕೆಲವೇ ದಿನಗಳಲ್ಲಿ ಅಲ್ಲಿಂದ ಬುಜೆಪಿಗೆ ಬಂದಿದ್ದರು. ಬಿಜೆಪಿಗೆ ಬಂದ ಮೇಲೆ ಬಸವನಗುಡಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಈಗ ಬಿಜೆಪಿಯಿಂದ ಚಾಮರಾಜಪೇಟೆಗೆ ಟಿಕೆಟ್ ನೀಡಲಾಗಿದೆ ಎನ್ನಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...