Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮೂರ್ತಿ.ಎಂ. ನೇಮಕ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್.11 : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷ ಎಸ್.ಮಧುಬಂಗಾರಪ್ಪನವರ ಆದೇಶದಂತೆ ಹೊಸದುರ್ಗ ತಾಲ್ಲೂಕು ಚಿತ್ತಯ್ಯನಹಟ್ಟಿ ಗ್ರಾಮದ ಮೂರ್ತಿ ಎಂ. ಇವರನ್ನು ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್ ಕಾಂಗ್ರೆಸ್ ಕಚೇರಿಯಲ್ಲಿ ಮೂರ್ತಿ ಎಂ. ಇವರಿಗೆ ನೇಮಕಾತಿ ಪತ್ರ ನೀಡಿ ಮಾತನಾಡುತ್ತ ಪಕ್ಷದಲ್ಲಿ ಹುದ್ದೆ ಪಡೆದುಕೊಂಡು ಮನೆಯಲ್ಲಿ ಕುಳಿತುಕೊಳ್ಳಬಾರದು. ಜಿಲ್ಲೆಯಾದ್ಯಂತ ಸಂಚರಿಸಿ ಹಿಂದುಳಿದ ವರ್ಗಗಳ ವಿಭಾಗವನ್ನು ಸಂಘಟಿಸಿ ಪಕ್ಷಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಸೂಚಿಸಿದರು.

ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಪಿ.ಸಂಪತ್‍ಕುಮಾರ್ ಮಾತನಾಡಿ ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆ ಎದುರಾಗುವುದರಿಂದ ಈಗಿನಿಂದಲೇ ಪಕ್ಷ ಸಂಘಟನೆಯಲ್ಲಿ ಪ್ರಾಮಾಣಿಕವಾಗಿ ಶ್ರಮಿಸಬೇಕು. ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪನವರ ಶಿಫಾರಸ್ಸಿನ ಮೇರೆಗೆ ನಿಮ್ಮನ್ನು ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಅವರ ಮಾರ್ಗದರ್ಶನದಂತೆ ನಡೆಯಬೇಕು ಎಂದು ಹೇಳಿದರು.

ಹೊಸದುರ್ಗ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಮಾತನಾಡುತ್ತ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ. ಮುಂದಿನ ವರ್ಷ ನಡೆಯಲಿರುವ ಲೋಕಸಭಾ ಚುನಾವಣೆ ಹಾಗೂ ಜಿಲ್ಲಾ ಪಂಚಾಯಿತಿ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಪಕ್ಷದ ಪರವಾಗಿ ನಿಷ್ಠೆಯಿಂದ ಕೆಲಸ ಮಾಡಿ ಕಾಂಗ್ರೆಸ್‍ಗೆ ಶಕ್ತಿ ತುಂಬಬೇಕು ಎಂದು ಮೂರ್ತಿ ಎಂ.ಗೆ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಪದವೀಧರ ವಿಭಾಗದ ಅಧ್ಯಕ್ಷ ಮುದಸಿರ್ ನವಾಜ್, ಮೀನುಗಾರಿಕೆ ವಿಭಾಗದ ಶಶಿಕಿರಣ್, ಚಾಂದ್‍ಪೀರ್, ಹೊಸದುರ್ಗ ತಾಲ್ಲೂಕು ಕಾಡುಗೊಲ್ಲರ ಸಂಘದ ಅಧ್ಯಕ್ಷ ರವಿಕುಮಾರ್, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಈಶ್ವರ್, ಬಸವರಾಜ್, ಶಿವಣ್ಣ, ಯತೀಶ್, ಮೂರ್ತಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಿನಪತ್ರಿಕೆಗಳಲ್ಲಿ ಕಟ್ಟಿಕೊಡುವ ಬಿಸಿ ತಿಂಡಿ ತಿಂದ್ರೆ ಕ್ಯಾನ್ಸರ್ ಬರುತ್ತೆ ಎಚ್ಚರ..!

ಪ್ಲಾಸ್ಟಿಕ್ ಕವರ್ ಅನ್ನು ಬ್ಯಾನ್ ಮಾಡಿ ಬಹಳ ವರ್ಷಗಳೇ ಕಳೆದಿವೆ. ಪ್ಲಾಸ್ಟಿಕ್ ಬಳಕೆ ಮಾಡುವುದರಿಂದ ಮನುಷ್ಯನ ಆರೋಗ್ಯಕ್ಕೆ ಖಂಡಿತ ಕುತ್ತು ಬರಲಿದೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಹೊಟೇಲ್ ಗಳಲ್ಲಿ ಪ್ಲಾಸ್ಟಿಕ್ ಕವರ್ ಗಳನ್ನು

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ

ಈ ರಾಶಿಯವರ ವೃತ್ತಿ ಕ್ಷೇತ್ರದಲ್ಲಿ ಯಾರೋ ಮಾಡಿರೋ ತಪ್ಪಿಗೆ ನೀವೇ ನೇರ ಹೊಣೆಗಾರಿಕೆ, ಈ ಪಂಚ ರಾಶಿಗಳ ಮದುವೆ ವಿಳಂಬವೇ? ಶನಿವಾರ ರಾಶಿ ಭವಿಷ್ಯ -ಏಪ್ರಿಲ್-27,2024 ಸೂರ್ಯೋದಯ: 05:56, ಸೂರ್ಯಾಸ್ತ : 06:31 ಶಾಲಿವಾಹನ

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

error: Content is protected !!