Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚುನಾವಣೆಯಲ್ಲಿ ಸ್ಪರ್ಧಿಸದೇ ಸಚಿವ ಸ್ಥಾನ ಗಿಟ್ಟಿಸಿಕೊಂಡ ಬೋಸರಾಜ್ ಬಗ್ಗೆ ಅಸಮಾಧಾನ ಹೊಗೆ..?

Facebook
Twitter
Telegram
WhatsApp

ರಾಯಚೂರು: ಇಂದಿನ ಸಚಿವರ ಫೈನಲ್ ಪಟ್ಟಿಯಲ್ಲಿ ಬೋಸರಾಜ್ ಅವರ ಹೆಸರು ಕೂಡ ಇದೆ. ಆದರೆ ಈ ಹೆಸರು ಸಚಿವ ಸ್ಥಾನದಲ್ಲಿ‌ ಬಂದಿದ್ದೇ ತಡ ಹಲವರ ಕಣ್ಣು ಕೆಂಪಾಗಿದೆ. ಯಾಕಂದ್ರೆ ಈ ಬಾರಿಯ ಚುನಾವಣೆಯಲ್ಲೂ ಅವರು ಸ್ಪರ್ಧಿಸಿಲ್ಲ. ಹೀಗಾಗಿ ಶಾಸಕರು ಅಲ್ಲ, ಎಂಎಲ್ಸಿಯೂ ಅಲ್ಲ. ಆದರೂ ಅಚಿವ ಸ್ಥಾನ ಸಿಕ್ಕಿದೆ ಎಂಬುದೇ ಹಲವರ ಆಕ್ರೋಶಕ್ಕೆ ಕಾರಣವಾಗಿದೆ. ಬೋಸರಾಜ್ ಅವರಿಗೆ ಸಚಿವ ಸ್ಥಾನ ಸಿಗುವುದಕ್ಕೆ ಹೈಕಮಾಂಡ್ ಕಾರಣ ಎನ್ನಲಾಗಿದೆ.

ಈ ಬಾರಿಯ ಚುನಾವಣೆಯಲ್ಲಿ ರಾಯಚೂರು ನಗರದ ಟಿಕೆಟ್ ಆಕಾಂಕ್ಷಿಯಾಗಿದ್ದರು ಬೋಸರಾಜ್. ತನಗೆ ಅಥವಾ ತನ್ನ ಮಗ ರವಿ ಬೋಸರಾಜ್ ಅವರಿಗೆ ಟಿಕೆಟ್ ನೀಡುವಂತೆ ಕಾಂಗ್ರೆಸ್ ಪಕ್ಷಕ್ಕೆ ಒತ್ತಡ ಹಾಕಿದ್ದರು. ಆದರೆ ಟಿಕೆಟ್ ಬೇರೆಯವರಿಗೆ ಕೊಡುವ ಪ್ಲ್ಯಾನ್ ನಡೆದಿತ್ತು.‌ ಕ್ಷೇತ್ರ ಬಿಟ್ಟುಕೊಡಲು ಬೋಸರಾಜ್ ಗೆ ಯಾವುದೇ ರೀತಿಯ ಒಪ್ಪಿಗೆ ನೀಡಿರಲಿಲ್ಲ. ಕಾಂಗ್ರೆಸ್ ನಾಯಕರೆಲ್ಲಾ ಸಂಧಾನ ಮಾಡುವುದಕ್ಕೆ ಪ್ರುತ್ನ ಮಾಡಿದರು. ಅದು ಸಾಧ್ಯವಾಗಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾಧಾನ ಮಾಡುವುದಕ್ಕೆ ಕೂಡ ಪ್ರಯತ್ನ ಪಟ್ಟಿದ್ದರು.

ಬಳಿಕ ಹೈಕಮಾಂಡ್ ನಾಯಕರೇ ನೇರವಾಗಿ ಬೋಸರಾಜ್ ಗೆ ಭರವಸೆಯನ್ನು ನೀಡಿದ್ದರು. ಸರ್ಕಾರ ರಚನೆಯಾದರೆ ಎಂಎಲ್ಸಿ‌ ಮಾಡಿ, ಪ್ರಮುಖ ಹುದ್ದೆ‌ ನೀಡುವುದಾಗಿ ತಿಳಿಸಿತ್ತು. ಇದೀಗ ಹೈಕಮಾಂಡ್ ಕೊಟ್ಟ ಮಾತನ್ನು ಉಳಿಸಿಕೊಂಡಿದೆ. ಆದರೆ ಬಿಕೆ ಹರಿಪ್ರಸಾದ್ ಅವರಿಗೆ ಸಿಗಬೇಕಾದ ಸಚಿವ ಸ್ಥಾನ ಕೈ ತಪ್ಪಿ ಬೋಸರಾಜ್ ಗೆ ಸಿಕ್ಕಿದ್ದಕ್ಕೆ ಹಲವರು ಆಕ್ರೋಶ ಹೊರ ಹಾಕಿದ್ದಾರೆ.

ಸಿಂಧನೂರು ಕ್ಷೇತ್ರದ ಶಾಸಕ ಹಂಪನಗೌಡ ಬಾದರ್ಲಿ, ರಾಯಚೂರು ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಸೇರಿದಂತೆ ರಾಯಚೂರಿನ ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು ಬೇಸರ ಹೊರ ಹಾಕಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಮ್ಮ ಮಗಳು ಅಂತವಳಲ್ಲ, ಫೋಟೋ ಹೇಗೆ ಬೇಕೋ ಹಾಗೇ ಎಡಿಟ್ ಮಾಡ್ತಾರೆ : ನೇಹಾ ತಾಯಿ ಹೇಳಿಕೆ

ಹುಬ್ಬಳ್ಳಿ : ಪ್ರೀತಿ ವಿಚಾರಕ್ಕೆ ನೇಹಾರ ಕೊಲೆಯಾಗಿದೆ. ಆರೋಪಿಯ ಬಂಧನವೂ ಆಗಿದೆ. ತನಿಖೆಯೂ ನಡೆಯುತ್ತಿದೆ. ಇದರ ನಡುವೆ ಫಯಾಜ್ ತಂದೆ-ತಾಯಿ ಕ್ಷಮಾಪ್ಪಣೆ ಕೇಳಿ, ಮಗನಿಗೆ ಶಿಕ್ಷೆಯಾಗಲಿ ಎಂದೇ ಒತ್ತಾಯಿದ್ದಾರೆ. ಇಬ್ವರು ಲವ್ ಮಾಡುತ್ತಿದ್ದರು ಅಂತ

ನೇಹಾ ಕೊಲೆ : ಶಿಕ್ಷಕರಾಗಿರುವ ಫಯಾಜ್ ತಂದೆ-ತಾಯಿ ಏನಂದ್ರು..?

ಧಾರವಾಡ: ಚೆನ್ನಾಗಿ ಓದಿ ಉಜ್ವಲ ಭವಿಷ್ಯ ಕನಸು ಕಂಡಿದ್ದ ನೇಹಾ ಜೀವನ ಕಮರಿ ಹೋಗಿದೆ. ಪ್ರೀತಿಯ ಕಾರಣವನ್ನಿಟ್ಟುಕೊಂಡು ಫಯಾಜ್ ಎಂಬಾತ ನೇಹಾಳ ಜೀವನವನ್ನೇ ಅಂತ್ಯ ಮಾಡಿದ್ದಾನೆ. ಅವನಿಗೆ ಗಲ್ಲು ಶಿಕ್ಷೆಯಾಗಲೇಬೇಕೆಂದು ಹೋರಾಟಗಳು ನಡೆಯುತ್ತಿವೆ. ಯುವತಿಯ

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

error: Content is protected !!