Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚುನಾವಣೆ ಹೊತ್ತಲ್ಲೇ ಕಾರ್ಪೋರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆ..!

Facebook
Twitter
Telegram
WhatsApp

 

 

ವಿಜಯಪುರ : ನಗರದಲ್ಲಿ ಹಾಡುಹಗಲೇ ಗುಂಡಿನ ದಾಳಿ ನಡೆದಿದ್ದು, ಕಾರ್ಪೋರೇಟರ್ ಪತಿಯನ್ನು ಗುಂಡಿಟ್ಟು ಹತ್ಯೆ ಮಾಡಲಾಗಿದೆ. ರೌಡಿ ಶೀಟರ್ ಆಗಿದ್ದ ಹೈದರ್ ನದಾಫ್ ಮೇಲೆ ಗುಂಡಿನ ದಾಳಿ‌ ನಡೆದ ಪರಿಣಾಮ ಹೈದರ್ ನದಾಫ್ ಸ್ಥಳದಲ್ಲಿಯೇ ಮೃತಪಟ್ಟದ್ದಾರೆ.

ವಿಜಯಪುರ ನಗರದಲ್ಲಿ ಚಾಂದಪೂರ ಕಾಲೋನಿ ಬಳಿ‌ ಇರುವ ತನ್ನ ನಿವಾಸದಿಂದ ಹೊರ ಬಂದು ಕಾರು ಹತ್ತಿತ್ತದ್ದ ವೇಳೆ ಹೈದರ್ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು, ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಿಂದ ತಪ್ಪಿಸಿಕೊಳ್ಳಲು ಹೈದರ್ ಓಡಿ ಹೋಗಿದ್ದಾರೆ, ಬೆನ್ನಟ್ಟಿದ್ದ ದುಷ್ಕರ್ಮಿಗಳು ನಾಲ್ಕು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಘಟನೆ ನಡೆದ ಸ್ಥಳದಲ್ಲಿ ಎರಡು ಗುಂಡುಗಳು ಪತ್ತೆಯಾಗಿವೆ.

 

ಸ್ಥಳಕ್ಕೆ ಜಿಲ್ಲಾ ಪೊಲೀಸ್ ವದಿಷ್ಠಾಧಿಕಾರಿ ಎಚ್.ಡಿ. ಆನಂದಕುಮಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೊನ್ನೆ ನಡೆದ ಪಾಲಿಕೆ ಚುನಾವಣೆಯಲ್ಲಿ ಹೈದರ್ ನದಾಫ್ ವಾರ್ಡ್ ನಂ.19 ರಿಂದ ತಮ್ಮ ಪತ್ನಿ ನಿಶಾತ್ ನದಾಫ್ ಅವರನ್ನು ಪಕ್ಷೇತರವಾಗಿ ಕಣಕ್ಕಿಳಿಸಿ ಗೆಲುವು ಸಾಧಿಸಿದ್ದರು. ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿದ್ದರು.
ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಜೆಪಿ ಸರ್ಕಾರ ಕೊಟ್ಟಿದ್ದ 2D ಬೇಡ, 2A ಬೇಕು : ಕಾಂಗ್ರೆಸ್ ಗೆ ಪಂಚಮಸಾಲಿ ಸ್ವಾಮೀಜಿ ಒತ್ತಾಯ

ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡಬೇಕು ಎಂದು ಒತ್ತಾಯಿಸಿ ಹೋರಾಟಗಳು ನಡೆಯುತ್ತಿವೆ. ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಸಂಬಂಧ ಸಭೆ ಕೂಡ ನಡೆಸಲಿದ್ದಾರೆ. ಜಯಮೃತ್ಯುಂಜಯ ಸ್ವಾಮೀಜಿ, ಶಾಸಕ ಯತ್ನಾಳ್ ಕೂಡ ಭಾಗಿಯಾಗಲಿದ್ದಾರೆ. ಜಯ

ರಾಮನಗರದ ತೋಟದ ಮನೆಯಲ್ಲಿ ಚನ್ನಪಟ್ಟಣ ಅಭ್ಯರ್ಥಿ ಫೈನಲ್ : ಯೋಗೀಶ್ವರ್ ಸಮಾಧಾನಗೊಳಿಸಲು ನಿರ್ಧಾರ..!

    ರಾಮನಗರ: ಚನ್ನಪಟ್ಟಣ ಬೈಎಲೆಕ್ಷನ್ ವಿಚಾರ ರಾಜ್ಯದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡ್ತಾ ಇದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಪ್ರತಿಷ್ಠೆಯ ಪ್ರಶ್ನೆಯಾಗಿದ್ರೆ, ಜೆಡಿಎಸ್ ಲೆಕ್ಕಚಾರದಲ್ಲಿ ಮಗನ ರಾಜಕೀಯ ಭವಿಷ್ಯಕ್ಕೂ ಬಹಳ ಮುಖ್ಯವಾಗಿದೆ. ಇಲ್ಲಿ ಮೈತ್ರಿ

ಚಿತ್ರದುರ್ಗ APMC : ಸೂರ್ಯಕಾಂತಿ, ಶೇಂಗಾ, ಕಡಲೆ ಸೇರಿದಂತೆ ಇತರ ಉತ್ಪನ್ನಗಳ ಇಂದಿನ ಮಾರುಕಟ್ಟೆ ಧಾರಣೆ…!

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 18 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಕಡಲೆ, ಶೇಂಗಾ, ಸೂರ್ಯಕಾಂತಿ ಸೇರಿದಂತೆ ಇತರೆ ಉತ್ಪನ್ನಗಳ (ಸರಕು)    ಇಂದಿನ             

error: Content is protected !!