Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಜಮೀನು ವಿವಾದ : ತುಮಕೂರಿನಲ್ಲಿ ಅಡಿಕೆ ಗಿಡಗಳು ಬಲಿ..!

Facebook
Twitter
Telegram
WhatsApp

ಜಮೀನು ವಿವಾದ : ತುಮಕೂರಿನಲ್ಲಿ ಅಡಿಕೆ ಗಿಡಗಳು ಬಲಿ..!

ತುಮಕೂರು: ಮರಗಿಡಗಳು ಮಕ್ಕಳಿದ್ದಂತೆ. ಇನ್ನು ಫಸಲು ಕೊಡುವ ಗಿಡ ಮರಗಳನ್ನು ದೇವರಂತೆಯೇ ಕಾಣುತ್ತಾರೆ. ಫಸಲು ಬರುವುದನ್ನು ಹಾಳು ಮಾಡುವ ಮನಸ್ಸನ್ನು ಯಾರು ಮಾಡುವುದಿಲ್ಲ. ಆದ್ರೆ ತುಮಕೂರು ಜಿಲ್ಲೆಯ ಹೆಬ್ಬೂರು ಹೋಬಳಿಯ ಹುಲಿಯಾಪುರ ಗ್ರಾಮದಲ್ಲಿ ಫಸಲು ಬಂದ ಬೆಳೆಯನ್ನು ಲೆಕ್ಕಿಸದೆ ದ್ವೇಷ ಮಾತ್ರ ತೀರಿಸಿಕೊಂಡಿದ್ದಾರೆ. ಇದ್ದ ಹಳೆ ದ್ವೇಷದಿಂದ ಸುಮಾರು 126 ಅಡಿಕೆ ಗಿಡಗಳನ್ನು ಕತ್ತರಿಸಿ, ನೆಲಕ್ಕುರುಳಿಸಿದ್ದಾರೆ.

ಮಂಗಳಮ್ಮ ಎಂಬುವವರಿಗೆ ಸೇರಿದ ಅಡಿಕೆ ಗಿಡಗಳನ್ನು ಈ ರೀತಿ ನಾಶ ಮಾಡಿರುವುದು ಎಂಬುದು ತಿಳಿಸು ಬಂದಿದೆ. ಮಂಗಳಮ್ಮ ಸುಮಾರು 12 ಗುಂಟೆ ಜಮೀನಿನಲ್ಲಿ ಅಡಿಕೆ ಗಿಡಗಳನ್ನು ಬೆಳೆದಿದ್ದರು. ಈ ಜಮೀನಿಗೆ ಸಂಬಂಧಿಸಿದಂತೆ ಆಗಾಗ ಜಗಳಗಳು ನಡೆಯುತ್ತಿದ್ದವಂತೆ. ಇವರ ಸಂಬಂಧಿಗಳಾದ ಜಗದಂಬ ಮತ್ತು ರೇಣುಕಮ್ಮ ಎಂಬುವವರು ಈ ವಿಚಾರಕ್ಕೆ ಯಾವಾಗಲೂ ಜಗಳ ಮಾಡುತ್ತಿದ್ದರಂತೆ. ಇದೇ ದ್ವೇಷದಿಂದ ಗಿಡಗಳನ್ನು ಕಡಿದು ಹಾಕಿದ್ದಾರೆ ಎಂದು ಮಂಗಳಮ್ಮ ಆರೋಪಿಸಿದ್ದಾರೆ.

ಇನ್ನು ಬೆಳಗ್ಗಿನ ಜಾವ ಈ ಕೆಲಸ ಮಾಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ದೂರು ನೀಡಿದ್ದು, ಘಟನಾ ಸ್ಥಳಕ್ಕೆ ಹೆಬ್ಬೂರು ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಜಗದಂಬಾ ಹಾಗೂ ರೇಣುಕಮ್ಮಾ ವಿರುದ್ಧವೂ ಪೊಲೀಸ್ ಠಾನೆಯಲ್ಲಿ ದೂರು ದಾಖಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

28 ಕ್ಷೇತ್ರಗಳಲ್ಲೂ ಎನ್.ಡಿ.ಎ. ಮೈತ್ರಿ ಕೂಟಕ್ಕೆ ಗೆಲುವು : ಗೋವಿಂದ ಕಾರಜೋಳ

ಸುದ್ದಿಒನ್, ಹಿರಿಯೂರು, ಮಾರ್ಚ್. 29 : ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಗೆಲುವು ಸಾಧಿಸಲಿದೆ ಎಂದು ಎನ್ ಡಿ ಎ ಮೈತ್ರಿ ಕೂಟದ ಅಭ್ಯರ್ಥಿ ಗೋವಿಂದ ಕಾರಜೋಳ ಭರವಸೆ

ಚಿತ್ರದುರ್ಗ ಜಿಲ್ಲಾ ವಕೀಲರಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಚಾಲನೆ

  ಚಿತ್ರದುರ್ಗ, ಮಾರ್ಚ್. 29 : ಚಿತ್ರದುರ್ಗ ಜಿಲ್ಲಾ ವಕೀಲರ ಕಲಾ ಬಳಗದಿಂದ ರಾಜವೀರ ಮದಕರಿ ನಾಯಕ ನಾಟಕಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು. ಅಕ್ಟೋಬರ್ 13, 2024 ರಂದು ಮದಕರಿ ನಾಯಕ ಜಯಂತಿ ಅಂಗವಾಗಿ

ನನ್ನ ರಾಜಕೀಯ ಶಕ್ತಿ ಸಾಮರ್ಥ್ಯವನ್ನು ಮುಂದಿನ ದಿನಗಳಲ್ಲಿ ತೋರಿಸುತ್ತೇನೆ : ಶಾಸಕ ಎಂ.ಚಂದ್ರಪ್ಪ ಸವಾಲು

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.29  : ನನ್ನ ಮಗ ಏನು ತಪ್ಪು ಮಾಡಿದ್ದಾ ಅಂತ ಈ ಬಾರಿಯ ಪಾರ್ಲಿಮೆಂಟ್ ಚುನಾವಣೆಯಲ್ಲಿ ಟಿಕೇಟ್

error: Content is protected !!