Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡಿಕೆಶಿ ಡಿನ್ನರ್ ಪಾರ್ಟಿಯಲ್ಲಿ ಬಿಜೆಪಿ ನಾಯಕರು : ವಿಜಯೇಂದ್ರ ಏನಂದ್ರು..!

---Advertisement---

 

ಬೆಳಗಾವಿ: ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಡಿನ್ನರ್ ಪಾರ್ಟಿಯನ್ನು ಆಯೋಜನೆ ಮಾಡಿದ್ದರು. ಈ ಪಾರ್ಟಿ ಮಾಡಿದ್ದು, ವಿಶೇಷವಲ್ಲದೆ ಇದ್ದರು, ಇದರಲ್ಲಿ ಭಾಗವಹಿಸಿದ ವ್ಯಕ್ತಿಗಳ ವಿಚಾರಕ್ಕೆ ಇದು ಸ್ಪೆಷಲ್ ಅಂತ ಅನ್ನಿಸಿತ್ತು. ಬಿಜೆಪಿಯ ಎಸ್ ಟಿ ಸೋಮಶೇಖರ್, ಶಿವರಾಂ ಹೆಬ್ಬಾರ್, ಹೆಚ್ ವಿಶ್ವನಾಥ್ ಡಿನ್ನರ್ ಪಾರ್ಟಿಯಲ್ಲಿ ಭಾಗಿಯಾಗಿದ್ದರು. ಇದು ಬಿಜೆಪಿಯಲ್ಲಿ ಹಲವು ರೀತಿಯ ಚರ್ಚೆಗಳನ್ನು ಹುಟ್ಟು ಹಾಕಿದೆ. ಇದೊಂದು ಗಂಭೀರವಾದ ವಿಚಾರ ಎಂದೇ ಪರಿಗಣಿಸಲಾಗುತ್ತಿದೆ.

 

ಬಿವೈ ವಿಜಯೇಂದ್ರ ಅವರು ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಅದಾದ ಮೇಲೆ ಪಕ್ಷ ಸಂಘಟನೆ, ಅಸಮಾಧಾನಗೊಂಡ ಹಿರಿಯರ ಮನವೊಲಿಕೆಯ ಕಡೆಗೆ ಹೆಚ್ಚು ಗಮನ ನೀಡಲಾಗುತ್ತಿದೆ. ಇದೀಗ ಡಿಕೆಶಿ ಡಿನ್ನರ್ ಪಾರ್ಟಿಯಲ್ಲಿ ಬಿಜೆಪಿ ನಾಯಕರು ಭಾಗವಹಿಸಿದ್ದು ವಿಜಯೇಂದ್ರ ಅವರ ಗಮನಕ್ಕೂ ಬಂದಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಬಿವೈ ವಿಜಯೇಂದ್ರ ಅವರು, ಈ ಮೂವರ ಬಗ್ಗೆ ಬೆಳಗ್ಗೆ ಮಾಹಿತಿ ಸಿಕ್ಕಿದೆ. ಅವರನ್ನು ಕರೆದು ಮಾತನಾಡಿ, ಸ್ಪಷ್ಟೀಕರಣ ಕೇಳುತ್ತೇನೆ. ಇದು ನಿಜಕ್ಕೂ ಗಂಭೀರವಾದ ವಿಚಾರ. ಕರೆದು ಮಾತನಾಡುತ್ತೇನೆ ಎಂದಿದ್ದಾರೆ.

ಈಗಾಗಲೇ ಹೆಚ್ ವಿಶ್ವನಾಥ್, ಬಿಜೆಪಿಯಲ್ಲಿನ ಅಸಮಾಧಾನದ ಬಗ್ಗೆ ಮಾತನಾಡಿ, ಸುದ್ದಿಯಾಗಿದ್ದಾರೆ. ಇನ್ನು ಎಸ್ ಟಿ ಸೋಮಶೇಖರ್ ಕೂಡ ಕಾಂಗ್ರೆಸ್ ನತ್ತ ವಾಲುತ್ತಿದ್ದಾರೆ. ಶಿವರಾಂ ಹೆಬ್ಬಾರ್ ಕಾಂಗ್ರೆಸ್ ಸೇರುವುದನ್ನು ಖಚಿತ ಎನ್ನಲಾಗಿತ್ತು. ಇದರ ನಡುವೆ ಇಂಥದ್ದೊಂದು ಬೆಳವಣಿಗೆ ನಡೆದಿದೆ. ಹಿರಿಯರ ಮನವೊಲಿಕೆ ಮಾಡುವ ಹಾದಿಯಲ್ಲಿರುವ ವಿಜಯೇಂದ್ರ ಅವರು ಈ ಮೂವರ ಮನವೊಲಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment