Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಮೊನ್ನೆ ಹದ್ದು.. ಇಂದು ಬೆಂಕಿ..!

Facebook
Twitter
Telegram
WhatsApp

 

 

ಹೊನ್ನಾವರ: ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ಕೆಲವು ದಿನಗಳು ಬಾಕಿ ಇದೆ. ಹೀಗಾಗಿ ಮೂರು ಪಕ್ಷಗಳ ನಾಯಕರು ರಭಸದ ಓಡಾಟ ಶುರು ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದು ನಾಯಕರು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಓಡಾಡುತ್ತಿದ್ದಾರೆ. ಆದರೆ ಈ ಓಡಾಟದ ನಡುವೆ ಅದ್ಯಾಕೋ ಪದೇ ಪದೇ ಡಿಕೆ ಶಿವಕುಮಾರ್ ಅವರಿಗೆ ಹೆಲಿಕಾಪ್ಟರ್ ನಿಂದ ಆತಂಕ ಜಾಸ್ತಿಯಾಗುತ್ತಿದೆ.

ಮೊನ್ನೆಯಷ್ಟೇ ಹೆಲಿಕಾಪ್ಟರ್ ನಲ್ಲಿ ಹೋಗುವಾಗ ಹದ್ದು ಅಡ್ಡವಾಗಿ, ಹೆಲಿಕಾಪ್ಟರ್ ಕಿಟಕಿಯ ಗಾಜು ಹೊಡೆದಿತ್ತು. ಈಗ ಮತ್ತೆ ಹೆಲಿಕಾಪ್ಟರ್ ಗೆ ಬೆಂಕಿ ಕಾಣಿಸಿಕೊಂಡಿದೆ. ಇದು ಆತಂಕಕ್ಕೆ ಕಾರಣವಾಗಿದೆ. ಚುನಾವಣಾ ಪ್ರಚಾರದ ಬಿಸಿಯಲ್ಲಿರುವಾಗ ಹೀಗೆ ಪದೇ ಪದೇ ಯಡವಟ್ಟು ಆಗುತ್ತಿರುವುದು ಸಹಜವಾಗಿಯೇ ಭಯದ ವಾತಾವರಣವನ್ನು ನಿರ್ಮಾಣ ಮಾಡಿದೆ.

ಇಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಚುನಾವಣಾ ಪ್ರಚಾರಕ್ಕಾಗಿ ಹೊನ್ನಾವರಕ್ಕೆ ಭೇಟಿ ನೀಡಿದ್ದಾರೆ. ಮೈಸೂರಿನಿಂದ ಹೊನ್ನಾವರಕ್ಕೆ ಹೆಲಿಕಾಪ್ಟರ್ ಮೂಲಕ ತೆರಳುತ್ತಿದ್ದರು. ಈ ವೇಳೆ ಹೆಲಿಕಾಪ್ಟರ್, ರಾಮತೀರ್ಥ ಬಳಿಯಿರುವ ಹೆಲಿಪ್ಯಾಡ್ ಗೆ ಬರುತ್ತಿದ್ದಂತೆ ಈ ಅವಘಡ ಸಂಭವಿಸಿದೆ. ಡಿಕೆಶಿ ಇದ್ದ ಹೆಲಿಕಾಪ್ಟರ್ ಗೆ ಸೂಚನೆ ಕೊಡುವ ದೃಷ್ಟಿಯಿಂದ ಸ್ಮೂಕ್ ಕ್ಯಾಂಡಲ್ ಮೂಲಕ ಹೆಲಿಪ್ಯಾಡ್ ಬಳಿ ಬೆಂಕಿ ಹಾಕಲಾಗಿತ್ತು. ಆದರೆ ಪಕ್ಕದಲ್ಲಿಯೇ ಇದ್ದ ಹುಲ್ಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಪೈಲಟ್ ಕೂಡ ಸುರಕ್ಷಿತವಾಗಿ ಹೆಲಿಕಾಪ್ಟರ್ ಲ್ಯಾಂಡ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!