Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಡಿಸಿಎಂ ಆಕಾಂಕ್ಷಿಗಳನ್ನ ಸಮಾಧಾನ ಮಾಡುವುದೇ ಹೈಕಮಾಂಡ್ ಗೆ ದೊಡ್ಡ ಟಾಸ್ಕ್..!

---Advertisement---

 

 

ನವದೆಹಲಿ: ಡಿಕೆ ಶಿವಕುಮಾರ್ ಕೂಡ ಸಿಎಂ ಸ್ಥಾನದ ಆಕಾಂಕ್ಷಿಯಾಗಿದ್ದರು. ಆದರೆ ಹೈಕಮಾಂಡ್ ಮಾಡಿದ ಸಂಧಾನಕ್ಕೆ ಒಪ್ಪಿಗೆ ಸೂಚಿಸಿ, ಡಿಸಿಎಂ ಹುದ್ದೆಗೆ ತೃಪ್ತಿಪಟ್ಟುಕೊಂಡಿದ್ದಾರೆ. ಒಂದೇ ಡಿಸಿಎಂ ಹುದ್ದೆಗೆ ಸೀಮಿತವಾಗಬೇಕು ಎಂಬ ಷರತ್ತಿನೊಂದಿಗೆ. ಆದರೆ ಇದೀಗ ಅದೇ ವಿಚಾರ ಹಲವರ ಅಸಮಾಧಾನಕ್ಕೆ ಕಾರಣವಾಗಿದೆ.

ಸಾಕಷ್ಟು ಜನ ಡಿಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದರು. ಒಂದಕ್ಕಿಂತ ಹೆಚ್ಚು ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಲಾಗುತ್ತೆ ಎಂದುಕೊಳ್ಳಲಾಗಿತ್ತು. ಆದರೆ ಡಿಕೆ ಶಿವಕುಮಾರ್ ಅವರ ಷರತ್ತಿನ ಪ್ರಕಾರ ಒಂದೇ ಡಿಸಿಎಂ ಹುದ್ದೆ ಇರಲಿದೆ. ಇದೀಗ ನಮಗೂ ಡಿಸಿಎಂ ಹುದ್ದೆ ನೀಡಿ ಎಂದು ಕಾಂಗ್ರೆಸ್ ನ ಹಿರಿಯ ನಾಯಕರು ವರಸೆ ಶುರಿ ಮಾಡಿದ್ದಾರೆ. ಇದು ಕಾಂಗ್ರೆಸ್ ಹೈಕಮಾಂಡ್ ಗೆ ಮತ್ತೆ ಸಂಕಷ್ಟ ತಂದೊಡ್ಡಿದೆ.

ಡಾ. ಜಿ ಪರಮೇಶ್ವರ್, ಲಕ್ಷ್ಮಣ ಸವದಿ, ಶಾಮನೂರು ಶಿವಶಂಕರಪ್ಪ, ಸತೀಶ್ ಜಾರಕಿಹೊಳಿ, ಎಂಬಿ ಪಾಟೀಲ್ ಡಿಸಿಎಂ ಹುದ್ದೆಯ ಆಕಾಂಕ್ಷಿಯಾಗಿದ್ದಾರೆ. ಪಕ್ಷದಲ್ಲಿನ ನಮ್ಮ ಸೇವೆ ಮತ್ತು ಹಿರಿಯತನಕ್ಕೆ ಗೌರವ ನೀಡಿ, ಡಿಸಿಎಂ ಹುದ್ದೆ ನೀಡುವಂತೆ ಆಗ್ರಹಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...