ಡಿ.21 ರಿಂದ 27 ರವರೆಗೆ ಮೂಡಬಿದರೆಯಲ್ಲಿ ಅಂತರಾಷ್ಟ್ರೀಯ ಸಾಂಸ್ಕೃತಿಕ ಸ್ಕೌಟ್ ಅಂಡ್ ಗೈಡ್ ಜಾಂಬೂರಿ : ಆಯುಕ್ತೆ ಮಂಜುಳ

 

ವರದಿ ಮತ್ತು ಫೋಟೋ  ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ: ಅಂತರಾಷ್ಟ್ರೀಯ ಸಾಂಸ್ಕೃತಿಕ ಸ್ಕೌಟ್ ಅಂಡ್ ಗೈಡ್ ಜಾಂಬೂರಿ ಡಿ.21 ರಿಂದ 27 ರವರೆಗೆ ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆಯಲ್ಲಿ ಕರ್ನಾಟಕ ರಾಜ್ಯ ಸ್ಕೌಟ್ ಅಂಡ್ ಗೈಡ್ ಸಂಸ್ಥೆಯಿಂದ ಪ್ರಥಮ ಬಾರಿಗೆ ಏಳು ದಿನಗಳ ಕಾಲ ನಡೆಯಲಿದೆ ಎಂದು ಗೈಡ್ ರಾಜ್ಯ ಸಂಘಟನಾ ಆಯುಕ್ತೆ ಮಂಜುಳ ಸಿ. ತಿಳಿಸಿದರು.

ಡಿ.ಡಿ.ಪಿ.ಐ.ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಭಾರತ್ ಸ್ಕೌಟ್ ಅಂಡ್ ಗೈಡ್ ಕರ್ನಾಟಕ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ.ಆರ್.ಸಿಂಧ್ಯಾ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಆಯುಕ್ತ ಡಾ.ಮೋಹನ್ ಆಳ್ವ ಇವರುಗಳ ನೇತೃತ್ವದಲ್ಲಿ ನಡೆಯುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಸ್ಕೌಟ್ ಅಂಡ್ ಗೈಡ್ ಜಾಂಬೂರಿಯಲ್ಲಿ ಹದಿನೇಳು ದೇಶಗಳಿಂದ ಐವತ್ತು ಸಾವಿರ ಮಕ್ಕಳು ಭಾಗವಹಿಸಲಿದ್ದಾರೆ. ಏಕ್‍ಭಾರತ್ ಶ್ರೇಷ್ಠ ಭಾರತ್ ಅಡಿ ಪ್ರತಿದಿನವೂ ವಿವಿಧ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಹೇಳಿದರು.

ಮಕ್ಕಳನ್ನು ಸಂಸ್ಕೃತಿಯಿಂದ ಸಂಸ್ಕಾರದ ಕಡೆಗೆ ಕರೆದುಕೊಂಡು ಹೋಗುವುದು ಜಾಂಬೂರಿಯ ಉದ್ದೇಶವಾಗಿದ್ದು, ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕೃಷಿಗೆ ಸಂಬಂಧಿಸಿದ ವಸ್ತುಪ್ರದರ್ಶನ, ಪುಷ್ಪ, ಪುಸ್ತಕ, ನಮ್ಮ ದೇಶದ ವಿವಿಧ ರಾಜ್ಯಗಳ ವಿಭಿನ್ನ ಆಹಾರಗಳ ವಸ್ತು ಪ್ರದರ್ಶನವಿರುತ್ತದೆ. ಪುಲಿಕುಳ ತರಬೇತಿ ಕೇಂದ್ರ, ಕಲೆ, ಸಾಹಿತ್ಯ, ಸಂಸ್ಕøತಿ ಪರಂಪರೆಯನ್ನು ಇಲ್ಲಿ ಮಕ್ಕಳಿಗೆ ಪರಿಚಯಿಸಲಾಗುವುದು. ಓಟ್ಟು ಐವತ್ತು ಸಾವಿರ ಮಕ್ಕಳು ಜಾಂಬೂರಿಯಲ್ಲಿ ಪಾಲ್ಗೊಳ್ಳಲಿದ್ದು, 12 ರಿಂದ 22 ವರ್ಷ ವಯಸ್ಸಿನವರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಮ್ಯಾರಥಾನ್ ಯೋಗ, ದೈಹಿಕ ಕಸರತ್ತು, ಸಾಂಸ್ಕøತಿಕ ಕ್ವಿಜ್ ಮೂಲಕ ಸ್ಕೌಟ್ ಅಂಡ್ ಗೈಡ್‍ನ ನೂರಾರು ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಿ ಹೊರತರಲಾಗುವುದು. ನಿರುದ್ಯೋಗ ಸಮಸ್ಯೆ, ಆಹಾರದ ಕೊರತೆ, ಓಜೋನ್ ಪರದೆ, ಜಂಗಲ್ ಟ್ರಯಲ್‍ನಲ್ಲಿ ಪ್ರಾಣಿ, ಪಕ್ಷಿ, ನೀರಿನ ಕಲರವ ಹೀಗೆ ಮಕ್ಕಳ ಮನಸ್ಸಿಗೆ ಮುದ ನೀಡುವ ಹತ್ತು ಹಲವಾರು ಕಾರ್ಯಕ್ರಮಗಳಿರುತ್ತವೆ. ಈ ಜಾಂಬೂರಿಗೆ ಪ್ರಧಾನಿ ನರೇಂದ್ರಮೋದಿ ಬರುವ ಸಾಧ್ಯತೆಗಳಿದ್ದು, ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಆಗಮಿಸುತ್ತಾರೆ. ವಿವಿಧ ಇಲಾಖೆಗಳ ಸಚಿವರುಗಳು ಪಾಲ್ಗೊಳ್ಳಲಿದ್ದಾರೆ.

ಚಿತ್ರದುರ್ಗ ಜಿಲ್ಲೆಯಿಂದ ಒಂದುವರೆ ಸಾವಿರ ಮಕ್ಕಳನ್ನು ಕರೆದುಕೊಂಡು ಹೋಗಲಾಗುವುದು. ಮೂವತ್ತು ಕೋಟಿ ರೂ.ವೆಚ್ಚದಲ್ಲಿ ನಡೆಯುವ ಸಾಂಸ್ಕøತಿಕ ಸ್ಕೌಟ್ ಅಂಡ್ ಗೈಡ್ ಜಾಂಬೂರಿಯಲ್ಲಿ ವಸತಿ, ಗುಣ ಮಟ್ಟದ ಊಟ ಉಪಹಾರವಿರುತ್ತದೆ. ರಾಜ್ಯದ ಎಲ್ಲಾ ಜಿಲ್ಲೆಗಳ ಸ್ಕೌಟ್ ಅಂಡ್ ಗೈಡ್ ಮುಖ್ಯ ಆಯುಕ್ತರುಗಳು ಹಾಜರಿರುತ್ತಾರೆಂದು ಮಾಹಿತಿ ನೀಡಿದರು.

ಸ್ಕೌಟ್ ಅಂಡ್ ಗೈಡ್ ಜಿಲ್ಲಾ ಕಾರ್ಯದರ್ಶಿ ಬಿ.ಎ.ಲಿಂಗಾರೆಡ್ಡಿ ಮಾತನಾಡಿ ಏಳು ದಿನಗಳ ಕಾಲ ಮೂಡಬಿದರೆಯಲ್ಲಿ ನಡೆಯುವ ಅಂತರಾಷ್ಟ್ರೀಯ ಸಾಂಸ್ಕೃತಿಕ ಸ್ಕೌಟ್ ಅಂಡ್ ಗೈಡ್ ಜಾಂಬೂರಿಯಲ್ಲಿ ಹದಿನೇಳು ದೇಶಗಳಿಂದ ಒಟ್ಟು ಐವತ್ತು ಸಾವಿರ ಸ್ಕೌಟ್ ಅಂಡ್ ಗೈಡ್ ವಿದ್ಯಾರ್ಥಿಗಳು ಭಾಗವಹಿಸಲಿದ್ದು, ಜಿಲ್ಲೆಯಿಂದ ಒಂದರಿಂದ ಒಂದುವರೆ ಸಾವಿರ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುವುದಾಗಿ ತಿಳಿಸಿದರು.

ಜಿಲ್ಲಾ ಗೈಡ್ ಆಯುಕ್ತೆ ಸುನಿತಾ ಮಲ್ಲಿಕಾರ್ಜುನ್, ಹೆಚ್.ಕ್ಯೂ.ಸಿ. ಜಿ.ಎಸ್.ಉಜ್ಜಿನಪ್ಪ, ಜಿಲ್ಲಾ ಸಹ ಕಾರ್ಯದರ್ಶಿ ಡಾ.ರಹಮತ್‍ವುಲ್ಲಾ, ರೋವರ್ ಲೀಡರ್ ತಿಪ್ಪೇಸ್ವಾಮಿ, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಮೋಹನ್‍ಕುಮಾರ್, ಎ.ಎಲ್.ಟಿ.ಸ್ಕೌಟ್ ಸಿ.ರವಿ, ಪಾಟೀಲ್, ಎಸ್.ಜಿ.ಸತ್ಯನಾರಾಯಣ ನಾಯ್ಡು ಪತ್ರಿಕಾಗೋಷ್ಟಿಯಲ್ಲಿ ಹಾಜರಿದ್ದರು.

suddionenews

Recent Posts

ದಾವಣಗೆರೆ ವಿಶ್ವವಿದ್ಯಾನಿಲಯ : ಹೊಳಲ್ಕೆರೆ ವಿದ್ಯಾರ್ಥಿನಿ ಗಂಗಮ್ಮ ಪ್ರಥಮ ರ‌್ಯಾಂಕ್

  ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…

5 seconds ago

ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮಕ್ಕೆ ಹೆಚ್ಚಿನ ಅನುದಾನ : ಸಚಿವ ಮಧು ಬಂಗಾರಪ್ಪ

ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…

6 minutes ago

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ : ಸಚಿವ ಮಧು ಬಂಗಾರಪ್ಪ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…

19 minutes ago

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

3 hours ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

3 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

6 hours ago