Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ತುಂಗಾಭದ್ರಾ ಗೇಟ್ : 2 ದಿನದಿಂದ ಎಷ್ಟು ಲಕ್ಷ ಕ್ಯೂಸೆಕ್ ನೀರು ಪೋಲಾಗಿದೆ ಗೊತ್ತಾ..?

Facebook
Twitter
Telegram
WhatsApp

 

ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ತುಂಗಾಭದ್ರಾ ಜಲಾಶಯ ಕೂಡ ಒಂದು. ಆದರೆ ಕಳೆದ ಎರಡು ದಿನದಿಂದ ಡ್ಯಾಂನಿಂದ ಸಿಕ್ಕಾಪಟ್ಟೆ ನೀರು ಪೋಲಾಗುತ್ತಿದೆ. ಗೇಟ್ ನಂಬರ್19 ಲಾಕ್ ಕಟ್ ಆಗಿದ್ದು, ಇದಕ್ಕೆ ಪ್ರಮುಖ ಕಾರಣವಾಗಿದೆ. ನಿರಂತರವಾಗಿ ನೀರು ಹೊರಗೆ ಹೋಗುತ್ತಿದ್ದು, ಈಗಾಗಲೇ 1,50,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗುತ್ತಿದೆ.

ರೈತರಿಗೆ ಬಳಕೆಯಾಗಬೇಕಾದ ನೀರು ಹೀಗೆ ಪೋಲಾಗುತ್ತಿರುವುದು ಅಲ್ಲಿನ ರೈತರಿಗೆ ಬೇಸರವನ್ನುಂಟು ಮಾಡಿದೆ. ಹಾಗೇ ಗ್ರಾಮಸ್ಥರು ಕೂಡ ಆತಂಕದಲ್ಲಿದ್ದಾರೆ. ನೀರು ಹೊರಗೆ ಹೆಚ್ಚಾಗಿ ಹೋದರೆ, ಪ್ರವಾಹವೇನಾದರೂ ಉಂಟಾದರೆ ಹೇಗೆ ಎಂಬ ಭಯ ಅವರಲ್ಲಿದೆ. ಈಗಾಗಲೇ ಜಲಾಶಯದ ಅಕ್ಕಪಕ್ಕದ, ನದಿ ಪಾತ್ರದ ಜನರಿಗೆ ಸೂಕ್ತ ಸ್ಥಳಕ್ಕೆ ತೆರಳುವಂತೆ ಮನವಿ ಮಾಡಿಕೊಳ್ಳಲಾಗಿದೆ. ಪ್ರವಾಹದ ಎಚ್ಚರಿಕೆಯನ್ನು ನೀಡಲಾಗಿದೆ ಎಂದು ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿಯನ್ನು ನೀಡಿದೆ. ಈ ಸಂಬಂಧ ಸೋಷಿಯಲ್ ಮೀಡಿಯಾದಲ್ಲೂ KSNDMC ಮಾಹಿತಿಯನ್ನು ನೀಡಿದೆ.

ಇಂದು ಬೆಳಗ್ಗೆಯಿಂದಾನೇ 1,5,000 ಕ್ಯೂಸೆಕ್ ಒಳಹರಿವು ಹೆಚ್ಚಾಗುತ್ತಿದೆ‌. ನದಿ ಪಾತ್ರದ ಜನರಿಗೆ ಎಚ್ಚರದಿಂದ ಇರಲು ಸೂಚಿಸಲಾಗಿದೆ. ಇನ್ನು ಈಗಾಗಲೇ ಡ್ಯಾಂನ ಪರಿಸ್ಥಿತಿಯನ್ನು ಡಿಸಿಎಂ ಡಿಕೆ ಶಿವಕುಮಾರ್ ಪರಿಶೀಲನೆ ಮಾಡಿ ಹೋಗಿದ್ದಾರೆ. ದುರಸ್ಥಿ ಮಾಡಲು ತಜ್ಞರೊಂದಿಗೆ ಚರ್ಚೆ ನಡೆಸಲಾಗಿದೆ. ತಜ್ಞರ ಜೊತೆಗೆ ಈ ಸಂಬಂಧ ಚರ್ಚೆಯನ್ನು ನಡೆಸಲಾಗಿದೆ. ಆದರೆ ದುರಸ್ಥಿ ಕಾರ್ಯ ಇನ್ನು ಆರಂಭವಾಗಿಲ್ಲ‌ ನೀರಿನ ಹೊರ ಹರಿವಿನ ಪ್ರಮಾಣ ಹೆಚ್ಚಾದ ಹಿನ್ನೆಲೆ ಆನೆಗೊಂದಿಯ ಕೃಷ್ಣದೇವರಾಯ ಸಮಾಧಿಯ ಕಲ್ಲಿನ ಮಂಟಪವೂ ಮುಳುಗುವ ಸ್ಥಿತಿ ನಿರ್ಮಾಣವಾಗಿದೆ. ಒಳಹರಿವು ಹೆಚ್ಚಾದ ಹಿನ್ನೆಲೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!