Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದರ್ಶನ್ ಜೈಲಲ್ಲಿ ಹೇಗಿದ್ದಾರೆ..? ಭೇಟಿ ಬಳಿಕ ರಚಿತಾ ರಾಮ್ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಸೇರಿ 70 ದಿನಗಳ ಮೇಲಾಗಿದೆ. ಪೊಲೀಸರು ಕೂಡ ಇನ್ನು ಚಾರ್ಜ್ ಶೀಟ್ ಸಲ್ಲಿಕೆ ಮಾಡಿಲ್ಲ. ಹೀಗಾಗಿ ದರ್ಶನ್ ಪರ ವಕೀಲರು ಜಾಮೀನಿಗೂ ಅರ್ಜಿ ಹಾಕಿಲ್ಲ. ಇನ್ನು ಪೊಕೀಸರು ಸಾಕ್ಷ್ಯಗಳನ್ನು ಕಲೆ ಹಾರುತ್ತಿರುವ ರೀತಿ ನೋಡಿದರೆ ದರ್ಶನ್ ಅವರು ಹೊರಗೆ ಬರುವುದೇ ಅನುಮಾನ ಎಂದೇ ಹಲವರು ಹೇಳುತ್ತಿದ್ದಾರೆ. ಇದರ ಬೆನ್ನಲ್ಲೇ ಇಂದು ನಟಿ ರಚಿತಾ ರಾಮ್ ದರ್ಶನ್ ಅವರನ್ನು ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಹೋಗಿದ್ದರು.

ದರ್ಶನ್ ಅವರನ್ನು ಭೇಟಿಯಾದ ರಚಿತಾ ರಾಮ್ ಅವರ ಯೋಗ ಕ್ಷೇಮ ವಿಚಾರಿಸಿದ್ದಾರೆ. ಸಹಜವಾಗಿಯೇ ನೆಚ್ಚಿನ ನಟನನ್ನು ಆ ಸ್ಥಿತಿಯಲ್ಲಿ ನೋಡಿದಾಗ ಕಣ್ಣಲ್ಲಿ ನೀರು ಬರುತ್ತದೆ. ರಚಿತಾ ರಾಮ್ ಕೂಡ ಅಪ್ಸೆಟ್ ಆಗಿದ್ದರಂತೆ. ಆದರೆ ದರ್ಶನ್ ಅವರೇ ಧೈರ್ಯ ತುಂಬಿದ್ದಾರೆ ಎನ್ನಲಾಗಿದೆ.

ದರ್ಶನ್ ಭೇಟಿ ಬಳಿಕ ಮಾತನಾಡಿದ ರಚಿತಾ ರಾಮ್, ರಾಜನನ್ನ ರಾಜನ ರೀತಿಯಲ್ಲಿಯೇ ನೋಡುವುದಕ್ಕೆ ನನಗೆ ಇಷ್ಟ. ಈ ರೀತಿಯಲ್ಲಿ ನೋಡುವುದಕ್ಕೆ ಕಷ್ಟ ಆಯ್ತು. ನಾನು ಅವರ ಬ್ಯಾನರ್ ನಿಂದಾನೇ ಪರಿಚಯ ಆಗಿದ್ದು. ಅವರು ನನಗೆ ಅವಕಾಶ ಕೊಡಲು ನೋ ಎಂದಿದ್ದರೆ ಖಂಡಿತಾ ಬಿಂದ್ಯಾ ರಚಿತಾ ರಾಮ್ ಆಗ್ತಾ ಇರಲಿಲ್ಲ. ಅವರನ್ನು ನೋಡಿದ ಕೂಡಲೇ ಭಾವುಕಳಾದೆ. ಆದರೆ ಅವರೇ ನಮಗೆ ಧೈರ್ಯ ಹೇಳಿದರು. ಸಮಾಧಾನ ಮಾಡಿದ್ರು. ಕಾನೂನಿನಲ್ಲಿ ನಮಗೆ ನಂಬಿಕೆ ಇದೆ. ಆದಷ್ಟು ಬೇಗ ಹೊರಗೆ ಬರ್ತೀನಿ ಅಂತ ಅವರು ಹೇಳಿದ್ದಾರೆ. ನಾನು ಕೂಡ ನಿಮಗೋಸ್ಕರ ನಾವೆಲ್ಲಾ ಕಾಯ್ತಾ ಇದ್ದೀವಿ. ಬೇಗ ಬನ್ನಿ ಎಂದಿದ್ದೇನೆ ಅಂತ ರಚಿತಾ ರಾಮ್ ಮಾಹಿತಿ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!