Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಂಜನಗೂಡು ಟಿಕೆಟ್ ಧ್ರುವ ನಾರಾಯಣ್ ಮಗನಿಗಾ..? ಮಹದೇವಪ್ಪಗಾ..? : ಶುರುವಾಯ್ತು ಹೊಸ ಚರ್ಚೆ‌.!

Facebook
Twitter
Telegram
WhatsApp

 

ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್ ತೀವ್ರ ರಕ್ತಸ್ರಾವದಿಂದ ಹಠಾತ್ ನಿಧನರಾಗಿದ್ದಾರೆ. ಇಂದು ಅವರ ಹುಟ್ಟೂರಿನಲ್ಲಿಯೇ ಅಂತ್ಯಕ್ರಿಯೆ ನಡೆಯಲಿದೆ. ಅವರ ನಿಧನ ಬೆನ್ಮಲ್ಲೇ ಟಿಕೆಟ್ ಚರ್ಚೆ ಶುರುವಾಗಿದೆ. ನಿನ್ನೆಯಷ್ಟೇ ರಣದೀಪ್ ಸುರ್ಜೆವಾಲ, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರ ಮುಂದೆಯೇ ಧ್ರುವ ನಾರಾಯಣ್ ಅವರ ಮಗನಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಿದ್ದರು.

ಧ್ರುವ ನಾರಾಯಣ್ ನಂಜನಗೂಡಿನ ಟಿಕೆಟ್ ಬಯಸಿ ಅರ್ಜಿ ಸಲ್ಲಿಸಿದ್ದರು. ಟಿ‌ನರಸೀಪುರದಿಂದ ಮಗನಿಗೆ ಟಿಕೆಟ್ ಬಯಸಿದ್ದರು. ಹೆಚ್ ಸಿ ಮಹದೇವಪ್ಪ ಅವರು ಕೂಡ ನಂಜನಗೂಡು ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಒಂದೇ ಕುಟುಂಬದಲ್ಲಿ ಎರಡು ಕಡೆಗೆ ಇಬ್ಬರಿಗರ ಟಿಕೆಟ್ ಕೊಡುವುದು ಬಹಳ ಕಷ್ಟ. ಅದರ ಬದಲಿಗೆ ಟಿ ನರಸೀಪುರದಿಂದ ಟಿಕೆಟ್ ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಹಠಾತ್ ಧ್ರುವ ನಾರಾಯಣ್ ನಿಧನವಾಗಿದೆ. ಈ ಬೆನ್ನಲ್ಲೇ ನಂಜನಗೂಡು ಟಿಕೆಟ್ ಸಿಕ್ಕಾಪಟ್ಟೆ ಚರ್ಚೆಗೆ ಗ್ರಾಸವಾಗಿದೆ. ಟಿಕೆಟ್ ಯಾರಿಗೆ ಸಿಗಲಿದೆ ಎಂಬ ಚರ್ಚೆ ನಡೆಯುತ್ತಿದೆ.

ಧ್ರುವ ನಾರಾಯಣ್ ಅವರ ಮಗನನ್ನು ಕಾರ್ಯಕರ್ತರು, ಬೆಂಬಲಿಗರು ರಾಜಕೀಯಕ್ಕೆ ಬರುವಂತೆ ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಗಮನಕ್ಕೂ ಇದನ್ನ ತಂದಿದ್ದಾರೆ. ಹೀಗಾಗಿ ಕಾಂಗ್ರೆಸ್ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡುತ್ತೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಮಹದೇವಪ್ಪ ಅವರಿಗಾ..? ಧ್ರುವ ನಾರಾಯಣ್ ಅವರ ಮಗನಿಗಾ ಎಂಬುದೇ ಪ್ರಶ್ನೆಯಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಲೈಸೆನ್ಸ್ ಪಡೆಯದೆ ಡ್ರೋನ್ ಹಾರಿಸಿದ ಪ್ರತಾಪ್ : ಸಾಕ್ಷಿಗಳು ಬಹಿರಂಗ..!

ಡ್ರೋನ್ ಪ್ರತಾಪ್ ಸೋಷಿಯಲ್ ಮೀಡಿಯಾದಲ್ಲಿ ರೈತರ ಬೆಳೆಗಳಿಗೆ ಔಷಧಿ ಸಿಂಪಡಿಸಲು ಡ್ರೋನ್ ಬಳಕೆ ಮಾಡುವುದನ್ನು ನೋಡಬಹುದು. ಇದೀಗ ಡ್ರೋನ್ ವಿಚಾರಕ್ಕೆ ಹೊಸದೊಂದು ಸಂಕಷ್ಟ ಎದುರಾಗಿದೆ. ಡ್ರೋನ್ ಪ್ರತಾಪ್ ವಿರುದ್ಧ ಸಾಕ್ಷಿಗಳು ಸಿಕ್ಕಿವೆ. ಡ್ರೋನ್ ಪ್ರತಾಪ್

ಮೂವರು ಆಟಗಾರರು ಆಟ ಶುರು ಮಾಡಿದ್ರೆ RCB ಟಚ್ ಮಾಡೋದು ಕಷ್ಟ ಕಷ್ಟ..!

ಪಂಜಾಬ್ ಕಿಂಗ್ಸ್ ಮಣಿಸಿದ ಆರ್ಸಿಬಿ ಇಂದು ಮತ್ತೊಂದು ಆಟಕ್ಕೆ ಸಜ್ಜಾಗಿದೆ. ಕೆಕೆಆರ್ ವಿರುದ್ದ ಜಯ ಗಳಿಸುವ ಆತ್ಮ ವಿಶ್ವಾಸದಲ್ಲಿ ಮೈದಾನಕ್ಕೆ ಇಳಿದಿದೆ. ಕೊಲ್ಕತ್ತಾ ನೈಟ್ ರೈಡರ್ಸ್ ಜೊತೆಗೆ ಆರ್ಸಿಬಿ ಎರಡನೇ ಪಂದ್ಯವನ್ನಾಡಲಿದೆ. ಆದರೆ ಈ

ಚಳ್ಳಕೆರೆ | ರಸ್ತೆ ಅಪಘಾತದಲ್ಲಿ ಛಾಯಾಗ್ರಾಹಕ ಮೃತ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಮಾರ್ಚ್. 29 :  ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ

error: Content is protected !!