Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಮ್ಮ ಕಾರ್ಯಕರ್ತರ ಒಂದೊಂದು ಹನಿ ರಕ್ತವು ನನ್ನದೇ ರಕ್ತ : ಆಂಧ್ರದ ಮಾಜಿ ಸಿಎಂ ಎಚ್ಚರಿಕೆ

Facebook
Twitter
Telegram
WhatsApp

 

ಆಂಧ್ರ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲವೇ ಸೃಷ್ಟಿಯಾಗಿದೆ. ವೈಎಸ್ಆರ್ ಕಾಂಗ್ರೆಸ್ ಪಕ್ಷದ ವಿರುದ್ಧ TDP ಮುಖ್ಯಸ್ಥ ಚಂದ್ರಬಾಬು ನಾಯ್ಡು ಸವಾಲು ಹಾಕಿದ್ದಾರೆ. ನೀನಾ.. ನಾನಾ ಎಂಬ ಸವಾಲನ್ನು ಹಾಕಿದ್ದಾರೆ.

ನೀವು ದೊಣ್ಣೆ ತೆಗೆದುಕೊಂಡು ಬಂದ್ರೆ ನಾನು ದೊಣ್ಣೆ ತೆಗೆದುಕೊಂಡು ಬರ್ತೀನಿ. ನೀವೂ ಯುದ್ಧ ಘೋಷಿಸಿದರೆ ನಾನು ಯುದ್ಧ ಘೋಷಿಸುತ್ತೇನೆ. ನಮ್ಮ ಕಾರ್ಯಕರ್ತರ ಒಂದೊಂದು ಹನಿ ರಕ್ತವೂ ನನ್ನ ರಕ್ತವೆ. ಹುಷಾರ್.. ಹುಷಾರ್ ಎಂದು ಚಂದ್ರ ಬಾಬು ನಾಯ್ಡು ಸವಾಲು ಹಾಕಿದ್ದಾರೆ.

ಆಗಸ್ಟ್ 4ರಂದು ಚಿತ್ತೂರು ಜಿಲ್ಲೆಯ ಅನ್ನಮಯ್ಯದಲ್ಲಿ ಹಿಂಸಾಚಾರ ನಡೆದಿತ್ತು. YSR ಕಾಂಗ್ರೆಸ್ ಹಾಗೂ TDP ಕಾರ್ಯಕರ್ತ ಮಧ್ಯೆ ಮಾರಾಮಾರಿ ನಡೆದಿದ್ದು ರಕ್ತಪಾತವೇ ಹರಿದಿತ್ತು. ಈ ಘಟನೆಯಲ್ಲಿ ಪೊಲೀಸರು ಸೇರಿದಂತೆ YSRC ಹಾಗೂ TDP ಪಕ್ಷದ 20ಕ್ಕೂ ಹೆಚ್ಚು ಕಾರ್ಯಕರ್ತರು ಗಾಯಗೊಂಡಿದ್ದರು. ಹಿಂಸಾಚಾರದ ಮಧ್ಯೆ ಹಲವು ವಾಹನಗಳು ಜಖಂಗೊಂಡಿದ್ದವು. ಈ ಘಟನೆ ಸಂಬಂಧ ಸಿಎಂ ಜಗನ್ ಸರ್ಕಾರ TDP ಮುಖ್ಯಸ್ಥ ಚಂದ್ರಬಾಬು ನಾಯ್ಡು ವಿರುದ್ಧ ಎರಡು ಎಫ್ಐಆರ್ ದಾಖಲಿಸಿದೆ.

ಇನ್ನು ಆರು ತಿಂಗಳಲ್ಲಿ ಆಂಧ್ರದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಹಿನ್ನೆಲೆ ಈಗಾಗಲೇ ಪ್ರಚಾರ ಕಾರ್ಯ ಆರಂಭವಾಗಿದೆ. ಚಂದ್ರಬಾಬು ನಾಯ್ಡು ಕೂಡ ಪ್ರಚಾರ ಕಾರ್ಯ ಆರಂಭಿಸಿದ್ದಾರೆ. ಇದರ ನಡುವೆ ವೈಎಸ್ಆರ್ಸಿ ಹಾಗೂ ಟಿಡಿಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಈ ಪ್ರಕರಣ ಸಂಬಂಧ ಚಂದ್ರಬಾಬು ನಾಯ್ಡು ಅವರನ್ನು ಬಂಧಿಸುವ ಸಾಧ್ಯತೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

Cold Water Side Effects : ಬೇಸಿಗೆಯಲ್ಲಿ ಫ್ರಿಡ್ಜ್ ನಲ್ಲಿರುವ ತಣ್ಣೀರು ಕುಡಿದರೆ ಎಷ್ಟೆಲ್ಲಾ ಸಮಸ್ಯೆ ಗೊತ್ತಾ ?

  ಸುದ್ದಿಒನ್ : ಈ ಬೇಸಿಗೆಯ ತಾಪವನ್ನು ನಿವಾರಿಸಲು ತಣ್ಣೀರಿಗಿಂತ ಉತ್ತಮ ಪರ್ಯಾಯವಿಲ್ಲ. ಅದಕ್ಕಾಗಿಯೇ ನಮ್ಮಲ್ಲಿ ಹೆಚ್ಚಿನವರು ಬಿಸಿಲಿನಿಂದ ಮನೆಗೆ ಬಂದ ತಕ್ಷಣ ರೆಫ್ರಿಜರೇಟರ್‌ನಿಂದ ತಣ್ಣೀರು ಕುಡಿಯುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ ಈ ರೀತಿ

ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ

ಈ ರಾಶಿಯ ಜನಪ್ರತಿನಿಧಿಗಳಿಗೆ ಆತ್ಮೀಯರಿಂದ ಕಂಟಕ, ಈ ರಾಶಿಯ ಪದವಿ ಪಡೆದವರು ಉನ್ನತ ಶ್ರೇಣಿಯ ಉದ್ಯೋಗ ಪ್ರಾಪ್ತಿ, ಈ ರಾಶಿಯ ವಿವಾಹಿತ ಜೀವನವು ಸಂತೋಷವಾಗಿ ಕಾಣುತ್ತದೆ, ಶುಕ್ರವಾರ-ರಾಶಿ ಭವಿಷ್ಯ ಮೇ-3,2024 ಸೂರ್ಯೋದಯ: 05:52, ಸೂರ್ಯಾಸ್ತ

ಸಾಹಿತಿ ಬಿ.ಎಲ್.ವೇಣು ನಿವಾಸಕ್ಕೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ

ಸುದ್ದಿಒನ್, ಚಿತ್ರದುರ್ಗ, ಮೇ. 02 :  ಖ್ಯಾತ ಸಾಹಿತಿ, ಚಿಂತಕ ಬಿ.ಎಲ್.ವೇಣು ಅವರ ನಿವಾಸಕ್ಕೆ ಸ್ಥಳೀಯ ಶಾಸಕ ಕೆ.ಸಿ.ವೀರೆಂದ್ರ ಪಪ್ಪಿ ಅವರು ಭೇಟಿ ಮಾಡಿ, ಆಶೀರ್ವಾದ ಪಡೆದು, ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಲಹೆಗಳನ್ನು ಪಡೆದರು.

error: Content is protected !!