Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪೊಲೀಸರಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ ಅಮೃತ್ ಪಾಲ್ ವಿಡಿಯೋ ರಿಲೀಸ್ ಮಾಡಿ ಹೇಳಿದ್ದೇನು..?

Facebook
Twitter
Telegram
WhatsApp

 

ಪಂಜಾಬ್ ಪೊಲೀಸರು ಕಳೆದ 12 ದಿನದಿಂದ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಹುಡುಕಾಟ ನಡೆಸುತ್ತಿದ್ದರು ಸಹ, ತೀವ್ರಗಾಮಿ ಅಮೃತ್ ಪಾಲ್ ಪೊಲೀಸರ ಕೈಗೆ ಸಿಕ್ಕಿ ಬೀಳುತ್ತಿಲ್ಲ. ಎಲ್ಲೆಲ್ಲೋ ಸಂಚರಿಸಿ, ಇನ್ನೆಲ್ಲೋ ಅಡಗಿಕೊಳ್ಳುತ್ತಿದ್ದಾನೆ. ಅವನ ಓಡಾಟದ ವಿಡಿಯೋಗಳು ಪೊಲೀಸರಿಗೆ ಲಭ್ಯವಾಗಿದೆ. ಆದರೆ ಈಗ ಸ್ವತಃ ಅಮೃತ್ ಪಾಲ್ ವಿಡಿಯೋವೊಂದನ್ನು ರಿಲೀಸ್ ಮಾಡಿದ್ದಾನೆ.

ತಾನಿರುವ ಜಾಗದಿಂದ ವಿಡಿಯೋ ಅಪ್ಲೋಡ್ ಮಾಡಿದ್ದಾನೆ. ಈ ವಿಡಿಯೋ ಯುಕೆ ಹ್ಯಾಂಡಲ್ ಗಳು ಅಪ್ಲೋಡ್ ಮಾಡಿದ್ದಾರೆ ಎನ್ನಲಾಗಿದೆ. 2 ನಿಮಿಷ 59 ಸೆಕೆಂಡ್ ಈ ವಿಡಿಯೋ ಇದೆ. ಇದರಲ್ಲಿ ಪಂಜಾಬ್ ಗೆ ಮರಳುವ ಸುಳಿವು ನೀಡಿದ್ದಾನೆ ಅಮೃತ್ ಪಾಲ್.

ಎಲ್ಲಾ ಕಡೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಅಮೃತ್ ಪಾಲ್ ಸಿಕ್ಕರೆ ಅರೆಸ್ಟ್ ಮಾಡೋದೆ. ಅಮೃತ್ ಪಾಲ್ ಕೂಡ ಬಹಳ ದಿನ ಎಲ್ಲಿಗೋ ತಪ್ಪಿಸಿಕೊಂಡು ಓಡಾಡಲು ಸಾಧ್ಯವಿಲ್ಲ ಎಂಬುದನ್ನು ಅರಿತುಕೊಂಡೆ ಈಗ ಶರಣಾಗಲೂ ನಿರ್ಧರಿಸಿದ್ದಾನೆ.

ಆತ ಮಾಡಿರುವ ವಿಡಿಯೋದಲ್ಲಿ “ಜತೇದಾರ್ ಸಾಹೇಬ್ ಅವರು ಪಂಜಾಬ್ ಸರ್ಕಾರಕ್ಕೆ 24 ಗಂಟೆಗಳ ಅಲ್ಟಿಮೇಟ್ ನೀಡಿದ್ದರು. ಆದರೆ ಸರ್ಕಾರವೂ ಅಕಾಲ್ ತಕ್ತ್ ಸಂಸ್ಥೆಗೆ ತಕರಾರು ಹಾಕಿತ್ತು. ಮತ್ತು ಅದನ್ನು ಅಪಹಾಸ್ಯ ಮಾಡಿತ್ತು. ಪಂಜಾಬ್ ಸರ್ಕಾರ ಸಬ್ಬಾಳಿಕೆಯ ಮಿತಿಯನ್ನು ಮೀರಿದೆ” ಅಂತೆಲ್ಲಾ ವಿಡಿಯೋದಲ್ಲಿ ಹೇಳಿದ್ದಾನೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿ.ಎನ್.ಚಂದ್ರಪ್ಪ ಗೆಲುವು ನಿಶ್ಚಿತ : ಹೊಳಲ್ಕೆರೆಯಲ್ಲಿ ಮತ ಚಲಾಯಿಸಿದ ಬಳಿಕ ಎಚ್.ಆಂಜನೇಯ ಹೇಳಿಕೆ

ಹೊಳಲ್ಕೆರೆ, ಏ.26 :  ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತ ಇಡೀ ದೇಶಕ್ಕೆ ಮಾದರಿಯಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮರ್ಮಘಾತದ ಫಲಿತಾಂಶ ಬರಲಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದರು. ಪಟ್ಟಣದ 

ಚಿತ್ರದುರ್ಗ | ಬಿಸಿಲಾಘತಕ್ಕೂ ಕುಗ್ಗದ ಮತದಾನ, ಮಧ್ಯಾಹ್ನ 1 ಗಂಟೆವರೆಗೆ ಆದ ಶೇಕಡಾವಾರು ಮತದಾನ ಎಷ್ಟು ?

ಚಿತ್ರದುರ್ಗ. ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಜರುಗಿದ ಮತದಾನದಲ್ಲಿ ಮಧ್ಯಾಹ್ನ 1 ಗಂಟೆವರೆಗೆ ಶೇ 39.05.% ಮತದಾನ ಜರುಗಿದೆ. ಬಿಸಿಲಾಘತದ ನಡುವೆಯು ಕುಗ್ಗದೆ ಮತದಾರ ಪ್ರಭುಗಳು ಮತಗಟ್ಟೆ ಕಡೆಗೆ ಧಾವಿಸಿ ಬರುತ್ತಿದಾರೆ. ವಿಧಾನ

ಚಳ್ಳಕೆರೆ | ಚುನಾವಣಾ ಕರ್ತವ್ಯ ನಿರತ ಎಪಿಆರ್ ಓ ಶಿಕ್ಷಕಿ ಸಾವು

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಏಪ್ರಿಲ್.26 : ಲೋಕಸಭಾ ಚುನಾವಣೆ ಕರ್ತವ್ಯ ವೇಳೆ ಹೃದಯಘಾತದಿಂದ  ಕರ್ತವ್ಯ ನಿರತ  ಎಪಿಆರ್ ಓ  ಶಿಕ್ಷಕಿ ಯಶೋದಮ್ಮ(55)

error: Content is protected !!