ಬಿಜೆಪಿಯಲ್ಲಿ ಇನ್ನು ಸಹ ವಿಪಕ್ಷ ನಾಯಕನ ಆಯ್ಕೆಯಾಗಿಲ್ಲ, ರಾಜ್ಯಾಧ್ಯಕ್ಷ ಸ್ಥಾನಕ್ಕೂ ಹೆಸರು ಸೂಚಿಸಿಲ್ಲ. ಇದೀಗ ಮತ್ತೊಂದು ಹುದ್ದೆ ಖಾಲಿಯಾಗಿದೆ. ಸಿಟಿ ರವಿ ಇಷ್ಟು ದಿನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಲ್ಲಿದ್ದರು. ಇದೀಗ ಆ ಹುದ್ದೆಯಿಂದ ಸಿಟಿ ರವಿಗೆ ಕೊಕ್ ನೀಡಲಾಗಿದೆ.
ಲೋಕಸಭಾ ಚುನಾವಣೆಯೂ ಹತ್ತಿರದಲ್ಲಿದೆ. ಈಗಾಗಲೇ ತಯಾರಿಯೂ ನಡೆಯುತ್ತಿದೆ. ಇದರ ನಡುವೆ ಬಿಜೆಪಿ ಹೊಸ ಹೊಸ ಯೋಜನೆ ರೂಪಿಸುತ್ತಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ತಮ್ಮ ತಂಡವನ್ನು ಹೊಸದಾಗಿ ರೂಪಿಸಲು ಹೊರಟಿದ್ದಾರೆ. ಹೀಗಾಗಿ 38 ಹೊಸ ಮುಖಗಳಿಗೆ ಮಣೆ ಹಾಕಲಾಗಿದೆ.

ಜೆಪಿ ನಡ್ಡಾ ಅವರು ಹೊಸ ಪದಾಧಿಕಾರಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ಸಿಟಿ ರವಿಯವರ ಹೆಸರನ್ನು ಕೈಬಿಡಲಾಗಿದೆ. ವಸುಂಧರಾ, ರಮಣ್ ಸಿಂಗ್, ಸಂಜಯ್ ಬಂಡಿ, ಕೈಲಾಸ್ ವಿಜಯ ವರ್ಗೀಯ ಸೇರಿ ಇನ್ನು ಕೆಲವರು ಇದ್ದಾರೆ. ಇನ್ನು ಸಿಟಿ ರವಿ ಸದ್ಯ ರಾಜ್ಯಾಧ್ಯಕ್ಷ ಹುದ್ದೆ ಖಾಲಿ ಇರುವ ಕಾರಣ ಆ ಹುದ್ದೆ ಮೇಲೆ ನಿರೀಕ್ಷೆ ಇಟ್ಟುಕೊಂಡಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















