Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬರಗಾಲದ ನಿಯಮ ಸಡಿಲಿಕೆಗೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

Facebook
Twitter
Telegram
WhatsApp

ಬರಗಾಲದ ನಿಯಮ ಸಡಿಲಿಕೆಗೆ ಕೇಂದ್ರಕ್ಕೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಆಗಸ್ಟ್ ತಿಂಗಳಿನ ಅರ್ಧ ಭಾಗ ಮುಗಿಸಿದರೂ ಮಳೆಯಾಗುವ ಸೂಚನೆ ಕಾಣುತ್ತಿಲ್ಲ. ಜೂನ್, ಜುಲೈನಲ್ಲಿಯೇ ಸಾಕಷ್ಟು ಮಳೆಯಾಗಬೇಕಿತ್ತು. ಹೊಲಗಳಲ್ಲಿ ಉಳುಮೆ ಮಾಡಿ, ಮೋಡದತ್ತ ಕಣ್ಣಿಟ್ಟು ಕೂತಿದ್ದಾರೆ ರೈತರು. ಬೀಜ ಬಿತ್ತನೆ ಮಾಡಿದರೂ ಮಳೆಯಿಲ್ಲದೆ ಮಣ್ಣಿನಲ್ಲಿ ಊತು ಹೋಗುತ್ತಿವೆ. ಹೀಗಾಗಿ ಈ ಬಾರಿ ಬರಗಾಲ ಎಂದು ಘೋಷಿಸಲು ಸರ್ಕಾರ ನಿರ್ಧಾರ ಮಾಡಿದೆ.

ಆದರೆ ಇದರ ನಡುವೆ ಬರಗಾಲ ಎಂದು ಘೋಷಣೆ ಮಾಡುವುದಕ್ಕೆ ಕೇಂದ್ರ ಸರ್ಕಾರದ ಹಲವು ನಿಯಮಗಳು ಅಡ್ಡಿಯಾಗುತ್ತಿವೆ. ಹೀಗಾಗಿ ನಿಯಮಾವಳಿ ಸಡಿಲಿಕೆಗೆ ಕೇಂದ್ರಕ್ಕೆ ಪತ್ರದ ಮೂಲಕ ಮನವಿ ಮಾಡಿದ್ದಾರೆ ಸಿದ್ದರಾಮಯ್ಯ.

ಸದ್ಯಕ್ಕೆ ಬರಗಾಲ ಎಂದು ಘೋಷಣೆ‌ ಮಾಡಲು, ಕನಿಷ್ಠ‌ ಮೂರು ವಾರಗಳ ಕೊರತೆಯಿಂದ ಆ ತಾಲೂಕಿನಲ್ಲಿ ಮಳೆಯಾಗಬಾರದು.60% ಮಳೆ ಕೊರತೆ ಇರಬೇಕು, 33% ಬೆಳೆ ಹಾನಿಯಾದರೆ ಮಾತ್ರ ಪರಿಹಾರ ನೀಡಲು ಅವಕಾಶ.ಈ ನಿಯಮಗಳನ್ನು ತಿದ್ದು ಪಡಿ ಮಾಡಲು ಮನವಿ ಮಾಡಲಾಗಿದೆ. ಮಳೆ ಕೊರತೆ ಪ್ರಮಾಣವನ್ನು ಶೇ. 60 ರಿಂದ 30ಕ್ಕೆ ಇಳಿಸಲು ಮನವಿ ಮಾಡಲಾಗಿದೆ. ಕೇಂದ್ರದ ನಿಯಮಗಳು ಸಡಿಲಿಕೆಯಾದರೆ ಮಾತ್ರ ರಾಜ್ಯದಲ್ಲಿ ಬರಪೀಡಿತ ಎಂದು ಘೋಷಿಸಲು ಸಾಧ್ಯವಾಗುತ್ತದೆ. ಬರಗಾಲ ಎಂದು ಘೋಷಿಸಲು ಕೇಂದ್ರದ ಕೆಲ ನಿಯಮಗಳಯ ಅಡ್ಡಿಯಾಗಿದ್ದು ಅವುಗಳನ್ನು ಸಡಿಲಿಕೆ ಮಾಡಬೇಕೆಂದು ಕೇಂದ್ರದ ಕೃಷಿ ಇಲಾಖೆಗೆ ಪತ್ರ ಬರೆಯಲಾಗಿದೆ. ಕೇಂದ್ರ ಕೃಷಿ ಇಲಾಖೆ ಅನುಮತಿಸಿದರೆ ಮಾತ್ರ ಬರಗಾಲ ಎಂದು ಘೋಷಣೆ‌ ಮಾಡಬಹುದಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!