Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಬಳ್ಳಾರಿಯಲ್ಲಿ ನದಿ ನೀರಲ್ಲಿ ಸಿಲುಕಿದ್ದ ಅರ್ಚಕರ ಕುಟುಂಬದ ರಕ್ಷಣೆ..!

Facebook
Twitter
Telegram
WhatsApp

 

ಬಳ್ಳಾರಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಎಲ್ಲೆಡೆ ಸಾಕಷ್ಟು ಸಮಸ್ಯೆ ತಲೆದೂರಿದೆ. ಜನರು ಜೀವನ ನಡೆಸುವುದಕ್ಕೂ ಕಷ್ಟವಾಗಿದೆ. ಎಷ್ಟೋ ಹಳ್ಳಿಗಳು ನೀರಿನಿಂದ ಮುಳುಗಡೆಯಾಗಿದೆ. ಇನ್ನು ಉತ್ತರ ಕರ್ನಾಟಕ, ಮಲೆನಾಡು ಕಡೆಗಳೆಲ್ಲಾ ಮಳೆ ಹೆಚ್ಚಾಗಿದೆ. ಇನ್ನು ಕೆಲವು ದಿನಗಳ ಕಾಲ ಇದೆ ರೀತಿ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

ಈ ಮಧ್ಯೆ ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲೂಕಿನ ಮುದೇಗುಪ್ಪದಲ್ಲಿ ಪ್ರವಾಹ ಬಂದಿದೆ. ಈ ಪ್ರವಾಹದಲ್ಲಿ ನೆರೆಯಲ್ಲಿ ಅರ್ಚಕರ ಕುಟುಂಬ ಹಾಗೂ ಸಿಬ್ಬಂದಿಗಳು ಸಿಲುಕಿಕೊಂಡಿದ್ದರು. ಶನೇಶ್ಚರ ದೇವಸ್ಥಾನದ ಪಕ್ಕದಲ್ಲಿಯೇ ಅರ್ಚಕರ ಕುಟುಂಬವಿತ್ತು. ನೆರೆಪ್ರವಾಹ ಉಂಟಾದ ಕಾರಣ ಅರ್ಚಕರನ್ನು ಕರೆತರಲು ಬೋಟ್ ನಲ್ಲಿ ತೆರಳಿದ್ದಾಗ ಬೋಟ್ ಮಗುಚಿಕೊಂಡಿತ್ತು. ಅಗ್ನಿಶಾಮಕ ದಳ ಸೇರಿದಂತೆ 10 ಜನ ಮತ್ತೆ ಪ್ರವಾಹದಲ್ಲಿ ಸಿಲುಕಿಕೊಂಡಿದ್ದರು. ಇದೀಗ ಮತ್ತೊಂದು ಬೋಟ್ ಕಳುಹಿಸಿ ಅವರನ್ನು ರಕ್ಷಿಸಲಾಗಿದೆ.

ಇನ್ನು ಇದೇ ಜಿಲ್ಲೆಯಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಿದೆ. ದೋಣಿಗಳ ಮೂಲಕ ಓಡಾಡುವ ಸ್ಥಿತಿ ಎದುರಾಗಿದೆ. ಬಸರಕೋಡು ಗ್ರಾಮಕ್ಕೆ ನದಿ ನೀರು ನುಗ್ಗಿದೆ. ಎಲ್ಲರೂ ತೆಪ್ಪದ ಮೂಲಕ ಸಾಗಿಸುತ್ತಿದ್ದಾರೆ. ಅಲ್ಲಿನ ಜನರಿಗೆ ಊಟದ ವ್ಯವಸತೆಯನ್ನು ಮಾಡಲಾಗುತ್ತಿದೆ. ಇದೊಂದೆ ಅಲ್ಲ ವೇದಾವತಿ ನದಿಯ ಪ್ರವಾಹ ಸುಮಾರು 250ಕ್ಕೂ ಹೆಚ್ಚು ಹಳ್ಳಿಗಳಿಗೆ ನೀರು ನುಗ್ಗಿದೆ. ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

ಚಿತ್ರದುರ್ಗದ ರಾಜಬೀದಿಗಳಲ್ಲಿ ವಿಜೃಂಭಣೆಯಿಂದ ಸಾಗಿದ ಏಕನಾಥೇಶ್ವರಿ ಅಮ್ಮನವರ ಮೆರವಣಿಗೆ ಮತ್ತು ಗ್ರಾಮ ದೇವತೆ ಬರಗೇರಮ್ಮನವರ ಮೆರವಣಿಗೆ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 03 : ಏಕನಾಥೇಶ್ವರಿ ಅಮ್ಮನ ಮೆರವಣಿಗೆ ನಗರದ ರಾಜಬೀದಿಗಳಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ಕೋಟೆ

ನೇಹಾ ಹತ್ಯೆ ವೇಳೆ ನೆರವಿಗೆ ಧಾವಿಸಿದ ಜೋಶಿ ವಿರುದ್ಧ ಪ್ರಚಾರ ಮಾಡ್ತಿದ್ದೀರಾ ಎಂದು ಕೇಳಿದ್ದಕ್ಕೆ ನೇಹಾ ತಂದೆ ಏನಂದ್ರು..?

ಹುಬ್ಬಳ್ಳಿ: ಲೋಕಸಭಾ ಚುನಾವಣೆಯ ಮೊದಲ ಹಂತದ ಚುನಾವಣೆ ನಡೆದಿದ್ದು, ಈಗ ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ ಕಾರ್ಯವೂ ನಡೆಯುತ್ತಿದೆ. ಹುಬ್ಬಳ್ಳಿ ಧಾರವಾಢ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿನೋದ್ ಸೂಟಿ ಸ್ಪರ್ಧೆ ಮಾಡಿದ್ದು ಅದಕ್ಕೆ ವಿರುದ್ಧ

error: Content is protected !!