ಮಾಜಿ ಸಿಎಂ ಯಡಿಯೂರಪ್ಪ ಅವರು ನಿನ್ನೆ ವಿಧಾನಸಭೆಯಲ್ಲಿ ವಿದಾಯದ ಭಾಷಣ ಮಾಡಿದ್ದರು. ಈ ವೇಳೆ ಬಿಜೆಪಿ ಪಕ್ಷ ಗೆಲುವಿಗಾಗಿವಮುಂದೆಯೂ ಶ್ರಮಿಸಬೇಕೆಂದು ಹೇಳಿದರು. ಯಡಿಯೂರಪ್ಪ ಅವರ ವಿದಾಯದ ಭಾಷಣ ಎಂಥವರಿಗೂ ಹೆಮ್ಮೆ ಪಡುವಂತೆ ಮಾಡಿತ್ತು, ಬಿಜೆಪಿ ಕಾರ್ಯಕರ್ತರಿಗೆ ಹುಮ್ಮಸ್ಸು ತುಂಬುವಂತೆ ಕೇಳಿಸಿತ್ತು. ಈ ವಿದಾಯದ ಭಾಷಣಕ್ಕೆ ಇದೀಗ ಪ್ರಧಾನಿ ಮೋದಿ ಅವರು ಮನಸೋತಿದ್ದಾರೆ.
ತಮ್ಮ ಟ್ವಿಟ್ಟರ್ ನಲ್ಲಿ ಕನ್ನಡದಲ್ಲಿಯೇ ಬರೆದುಕೊಂಡಿದ್ದಾರೆ. “ಬಿಜೆಪಿಯ ಒಬ್ಬ ಕಾರ್ಯಜರ್ತನಾದ ನನಗೆ ಈ ಭಟಷಣ ಅತ್ಯಂತ ಸ್ಪೂರ್ತಿದಾಯಕ ಎಂದೆನಿಸಿದೆ. ಇದರಲ್ಲಿ ನಮ್ಮ ಪಕ್ಷದ ನೈತಿಜತೆಯೂ ಅಡಕವಾಗಿದೆ. ಇದು ಖಂಡಿತವಾಗಿಯೂ ಇತರ ಕಾರ್ಯಜರ್ತರಿಗೂ ಸ್ಪೂರ್ತಿ ನೀಡುತ್ತದೆ” ಎಂದು ಮೋದಿ ಅವರು ಟ್ವೀಟ್ ಮಾಡಿದ್ದಾರೆ.
ವಿದಾಯದ ಭಾಷಣ ಮಾಡುವಾಗ ಯಡಿಯೂರಪ್ಪ ಅವರು, ಪಕ್ಷಕ್ಕಾಗಿ ನಾನು ಇನ್ನೂ ಹೋರಾಟ ಮಾಡುತ್ತೇನೆ. ಮನೆಯಲ್ಲಿ ಸುಮ್ಮನೆ ಕುಳಿತುಕೊಳ್ಳುವ ಪ್ರಶ್ನೆಯೇ ಇಲ್ಲ. ನೀವೂ ಎಲ್ಲೆಲ್ಲಿ ಕರೆಯುತ್ತಿರೋ ಅಲ್ಲೆಲ್ಲಾ ಬರುತ್ತೇನೆ. ಇನ್ನು ಐದು ವರ್ಷಗಳ ಕಾಲ ದೇವರು ಕೆಲಸ ಮಾಡುವ ಶಕ್ರಿ ನೀಡಲಿ. ನಾನು ಈಗಾಗಲೇ ಹೇಳಿದ್ದೇನೆ ಚುನಾವಾಣೆಯಲ್ಲಿ ನಿಲ್ಲಲ್ಲ ಎಂದು. ಬದುಕಿನ ಕೊನೆಯ ಉಸಿರು ಇರುವ ತನಕ ಬಿಜೆಪಿಯನ್ನು ಕಟ್ಟುವುದಕ್ಕಾಗಿ, ಬಿಜೆಪಿಯನ್ನು ಅಧಿಕಾರಕ್ಕೆ ತರುವುದಕ್ಕಾಗಿ ನನ್ನ ಶಕ್ತಿ ಮೀರಿ, ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇನೆ
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ,ಫೆಬ್ರವರಿ. 07…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ.…
ಚಿತ್ರದುರ್ಗ.ಫೆ.07: ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜತೆಗೆ ದೇಶದ, ರಾಜ್ಯದ ಸಾಂಸ್ಕøತಿಕ ರಾಯಬಾರಿಗಳಾಗಿ ಕಲೆ, ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ಕೊಂಡ್ಯೊಯುವ ಕೆಲಸ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಶಿಕ್ಷಣ ಇಲಾಖೆಗೆ ಈಗಾಗಲೇ 13 ಸಾವಿರ ಶಿಕ್ಷಕರ ನೇಮಕಾತಿ ಮಾಡಿಕೊಳ್ಳಲಾಗಿದ್ದು, ಹೊಸದಾಗಿ 15…
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…