ನವದೆಹಲಿ: ಸಚಿವ ವಿ ಸೋಮಣ್ಣ ನಿನ್ನೆಯಷ್ಟೇ ನಾನು ಎಲ್ಲೂ ಹೋಗಲ್ಲ, ಬಿಜೆಪಿಯಲ್ಲಿಯೇ ಇರುತ್ತೀನಿ ಅಂತ ಕ್ಲಾರಿಟಿ ಕೊಟ್ಟಿದ್ದಾರೆ. ಈ ಬೆನ್ನಲ್ಲೇ ಇಂದು ನವದೆಹಲಿಗೂ ವಿಸಿಟ್ ಹಾಕಿದ್ದಾರೆ. ಈ ವೇಳೆ ಮಾತನಾಡುವಾಗ ಮಾಜಿ ಸಿಎಂ ಬಿಎಸ್ವೈ ಪುತ್ರ ಬಿವೈ ವಿಜಯೇಂದ್ರ ಬಗ್ಗೆ ಮಾತನಾಡಿದ್ದಾರೆ. ಬಿವೈ ವಿಜಯೇಂದ್ರ ವಯಸ್ಸೆಷ್ಟು ನನ್ನ ವಯಸ್ಸೆಷ್ಟು. ನಂಗೆ ಅವರಿಗೆ ಯಾಕೆ ಹೋಲಿಕೆ ಮಾಡ್ತೀರಾ ಎಂದು ಪ್ರಶ್ನಿಸಿದ್ದಾರೆ.
ಮಾಜಿ ಸಿಎಂ ಯಡಿಯೂರಪ್ಪ ಅವರ ಬಗ್ಗೆ ನನಗೆ ಸಿಟ್ಟಿಲ್ಲ. ಯಡಿಯೂರಪ್ಪ ಅವರಿಗೆ ನನ್ನ ಮೇಲೆ ಏನು ಅಭಿಪ್ರಾಯವಿದೆಯೋ ನನಗೆ ಗೊತ್ತಿಲ್ಲ. ನನ್ನ ಮಗ ಮತ್ತು ಯಡಿಯೂರಪ್ಪ ಅವರ ಮಗನ ನಡುವೆ ಏನು ಗೊಂದಲವಿದೆಯೋ ಅದನ್ನು ಅವರ ಬಳಿಯೇ ಕೇಳಿ. ನನ್ನಿಂದ ಬಿಜೆಪಿಗೆ ಯಾವ ಅಪಚಾರವೂ ಆಗಲ್ಲ ಎಂದಿದ್ದಾರೆ.
ಯಡಿಯೂರಪ್ಪ ಅವರು ನನ್ನನ್ನು ಕರೆದರೆ ಹೋಗುವೆ. ಆದ್ರೆ ಅವರು ಇವತ್ತಿನ ತನಕ ನನ್ನನ್ನು ಕರೆದಿಲ್ಲ. ನನ್ನದು ಮತ್ತು ಯಡಿಯೂರಪ್ಪ ಅವರದ್ದು ತಂದೆ ಮಗನ ಸಂಬಂಧ. ಯಡಿಯೂರಪ್ಪ ಅವರ ಬಗ್ಗೆ ದ್ವೇಷ ಮಾಡಿ ನನಗೇನು ಲಾಭ. ಅವರ ಬಗ್ಗೆ ವಿನಾಕಾರಣ ಮಾತನಾಡುವುದು ಅಪ್ರಸ್ತುತ. ನಾನು ಒಮ್ಮೊಮ್ಮೆ ಮಾತನಾಡುವ ಸತ್ಯವೇ ಕಹಿಯಾಗುತ್ತೆ ಎಂದಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…