Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಳೆಗಾಲದಲ್ಲೂ ವಿಪರೀತ ಶೆಕೆ : ಚಿತ್ರದುರ್ಗ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಕೊಟ್ಟ ಎಚ್ಚರಿಕೆ ಏನು..?

---Advertisement---

 

ಬೆಂಗಳೂರು: ಕಳೆದ ಎರಡು ದಿನದಿಂದ ಜೋರು ಶೆಖೆಯಾಗುತ್ತಿದೆ. ರಾತ್ರಿಯೆಲ್ಲಾ ಮಳೆ ಸುರಿದರೂ ಬೆಳಗ್ಗೆ ಬಿಸಿಲು ಜೋರಾಗಿ ಬಡಿಯುತ್ತಿದೆ. ಇದರಿಂದ ದೇಹ ಬೆವರುವುದಕ್ಕೆ ಶುರು ಮಾಡಿದೆ. ಆದರೆ ಶೆಕೆಯ ನಡುವೆಯೂ ಹವಮಾನ ಇಲಾಖೆ ಮಳೆಯ ಅಲರ್ಟ್ ಘೋಷಣೆ ಮಾಡಲಾಗಿದೆ.

 

ಇಂದು ಮತ್ತು ನಾಳೆ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಎರಡು ದಿನಗಳ ಕಾಲ ಹೊರಗೆ ಓಡಾಡುವ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ ನೀಡಲಾಗಿದೆ. ಬೆಂಗಳೂರಿನಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ತುಮಕೂರು ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಮತ್ತು ನಾಳೆ ಈ ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಷ್ಟೇ ಅಲ್ಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಮೈಸೂರು ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮಳೆಯ ಜೊತೆಗೆ ಬಿಸಿಲು ಇರುವ ಕಾರಣ ಜನ ಗೊಂದಲಕ್ಕೀಡಾಗಿದ್ದಾರೆ.

ಈಗಷ್ಟೇ ಬಿತ್ತನೆ ಮಾಡುವುದಕ್ಕೆ ಜಮೀನು ಉಳುಮೆ ಮಾಡಿದ್ದಾರೆ. ಇಷ್ಟೊಂದು ಶೆಕೆಯಾದರೆ ಮಳೆ ಏನಾದರೂ ಹೋಗಿ ಬಿಡ್ತಾ ಎಂಬ ಆತಂಕ ರೈತರಲ್ಲಿ ಕಾಡಿದೆ. ಆದರೆ ಒಮ್ಮೊಮ್ಮೆ ಬೆಳಗ್ಗೆ ಜೋರು ಬಿಸಿಲು ಕಾಣಿಸಿಕೊಂಡರೆ ಮಧ್ಯಾಹ್ನದ ವೇಳೆಗೆ ಅಥವಾ ಸಂಜೆ ವೇಳೆಗೆ ಮಳೆ ಬರಲಿದೆ ಎಂದು ಹಿರಿಯರು ಹೇಳುತ್ತಾರೆ. ಅದರಂತೆಯೇ ಈಗ ಸಂಜೆ ವೇಳೆಗೆ ಮಳೆ ಬರುವ ಮುನ್ಸೂಚನೆಯನ್ನು ಹವಮಾನ ಇಲಾಖೆ ನೀಡಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment