Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಳೆಯಿಂದಾಗಿ ಹಲವು ಜಿಲ್ಲೆಗಳಲ್ಲಿ ಬೆಳೆನಾಶ.. ರೈತರ ಪರಿಸ್ಥಿತಿ ಹೇಗಿದೆ..?

Facebook
Twitter
Telegram
WhatsApp

 

ಬೆಂಗಳೂರು: ನಿನ್ನೆ ಇಡೀ ರಾತ್ರಿ ಸುರಿದ ಮಳೆಗೆ ರಾಜ್ಯಾದ್ಯಂತ ಸಮಸ್ಯೆ ಎದುರಾಗಿದೆ. ಕೆರೆಗಳಿಗೆ, ಹಳ್ಳ ಕೊಳ್ಳಗಳಲ್ಲಿ ಮತ್ತೆ ನೀರು ತುಂಬಿದ್ದು, ಬೆಳೆನಾಶವಾಗಿದೆ. ಕೆರೆಗಳ ಅಕ್ಕ ಪಕ್ಕ ಇದ್ದ ಜಮೀನುಗಳಂತು ಸಂಪೂರ್ಣ ಜಲಾವೃತವಾಗಿದೆ. ಇದರಿಂದ ರೈತರು ಅಕ್ಷರಶಃ ಆತಂಕಗೊಂಡಿದ್ದಾರೆ. ಯಾವ್ಯಾವ ಜಿಲ್ಲೆಯಲ್ಲಿ ಮಳೆಯಿಂದ ಅನಾಹುತವಾಗಿದೆ ಎಂಬ ಮಾಹಿತಿ ಇಲ್ಲಿದೆ.

ಚಾಮರಾಜನಗರ ಜಿಲ್ಲೆಯಲ್ಲೂ ಮಳೆ ನಿನ್ನೆ ರಾತ್ರಿ ಬೆಂಬಿಡದೆ ಮಳೆ ಸುರಿದಿದೆ. ಇದರ ಪರಿಣಾಮ ಬೆಳೆ ನಾಶವಾಗಿದೆ. ಕಬ್ಬು, ಅರಿಶಿನ, ಬಾಳೆ ಬೆಳೆ ಪ್ರದೇಶದಲ್ಲಿ ಸಂಪೂರ್ಣ ನೀರು ನಿಂತಿದೆ. ಸುವರ್ಣಾವತಿ, ಚಿಕ್ಕಹೊಳಿ ಜಲಾಶಯ ತುಂಬಿ ಹರಿಯುತ್ತಿದೆ. ಇನ್ನು ನದಿಪಾತ್ರದ ಜನರಿಗೆ ಎಚ್ಚರಿಕೆಯಿಂದ ಇರಲು ಹವಮಾನ ಇಲಾಖೆ ಸೂಚನೆ ನೀಡಿದೆ.

ತುಮಕೂರಿನಲ್ಲೂ ಮಳೆಯ ಆರ್ಭಟ ಜೋರಾಗಿದೆ. ಇಲ್ಲಿಯೂ ಪರಿಸ್ಥಿತಿ ಹದಗೆಟ್ಟಿದೆ. ಹಲವು ಮನೆಗಳಿಗೆ ನೀರು ನುಗ್ಗಿ, ನೀರನ್ನು ಹೊರಗೆ ಹಾಕಲು ಜನ ಹರಸಾಹಸ ಪಡುತ್ತಿದ್ದಾರೆ. ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಜಿಲ್ಲೆಯ ಚಿನ್ನಸಾಗರ ಜನರ ಪರದಾಟ ನಡೆಸುವಂತ ಸ್ಥಿತಿ ಎದುರಾಗಿದೆ.

ಕೋಲಾರದಲ್ಲಿಯೂ ಮಳೆ ಕಡಿಮೆ ಏನಿಲ್ಲ. ರಾತ್ರಿ ಇಡೀ ಸುರಿದ ಮಳೆಗೆ ಗುಲಾಬಿ ತೋಟ ಹಾಳಾಗಿದೆ. ಜಿಲ್ಲೆಯ ವಿಜಯನಗರದಲ್ಲಿರುವ ಗುಲಾಬಿ ಬೆಳೆ ಜಲಾವೃತ. ಸುಮಾರು 2 ಎಕರೆ ಗುಲಾಬಿ ತೋಟ ಇದಾಗಿದೆ. ಗುಲಾಬಿ ಬೆಳೆ ಜಲಾವೃತವಾದ ಕಾರಣ ರೈತ ತಲೆ ಮೇಲೆ ಕೈಹೊತ್ತು ಕುಳಿತಿದ್ದಾನೆ.

ಇನ್ನು ಕೋಲಾರದ ಅಮ್ಮೇರಹಳ್ಳಿ ಕೆರೆ ಕೂಡ ತುಂಬಿ ಹರಿಯುತ್ತಿದೆ. ಕೆರೆ ಕೋಡಿಯಿಂದಾಗಿ ಬೆಳೆನಾಶವಾಗಿದೆ. ರಾಜಕಾಲುವೆ ಒತ್ತುವರಿಯಿಂದಾಗಿ ಹೊಲಗಳಿಗೆ ನೀರು ನುಗ್ಗಿದೆ. ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜೋರು ಮಳೆಯಾಗಿದೆ. ಮಳೆಯ ಹಲವು ಪರಿಣಾಮ ಎದುರಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಆ ಕುಗ್ರಾಮ ಒಂದರಲ್ಲೇ 100% ಮತದಾನ : ಎಲ್ಲಿ, ಎಷ್ಟೆಷ್ಟು ಮತದಾನವಾಗಿದೆ..?

ಬೆಂಗಳೂರು: ಇಂದು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ನಡೆದಿದೆ. ಬೆಳಗ್ಗೆ 7 ಗಂಟೆಗೆ ಶುರುವಾದ ಮತದಾನ ಸಂಜೆ 5 ಗಂಟೆಗೆ ಮುಕ್ತಾಯವಾಗಿದೆ. ಬೇಸರದ ಸಂಗತಿ ಎಂದರೆ ಈ ಬಾರಿಯೂ ಸಂಪೂರ್ಣ ಮತದಾನವಾಗಿಲ್ಲ. ಪ್ರತಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.72.74 ಮತದಾನ : ಕ್ಷೇತ್ರವಾರು ಮಾಹಿತಿ…!

  ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 :   ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಇಂದು ಜರುಗಿದ ಮತದಾನದಲ್ಲಿ ಶೇ.72.74 ದಾಖಲಾಗಿದೆ‌. ವಿಧಾನ ಸಭಾ ಕ್ಷೇತ್ರವಾರು ಮತಾದನ ವಿವರ ಚಳ್ಳಕೆರೆ – 72.19%, ಚಿತ್ರದುರ್ಗ-70.42%, ಹಿರಿಯೂರು-71.49% ,

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

error: Content is protected !!