Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುವಕರಿಗಾಗಿ ಒಂದು ಮಾತು ಕೊಟ್ರು ಕುಮಾರಸ್ವಾಮಿ : ಏನದು ಗೊತ್ತಾ..?

Facebook
Twitter
Telegram
WhatsApp

 

ಮಂಡ್ಯ: ಇತ್ತೀಚಿನ ದಿನಗಳಲ್ಲಿ ಕೆಲಸ ಸಮಸ್ಯೆ ಯುವಕರನ್ನು ಹೆಚ್ಚು ಕಾಡುತ್ತಿದೆ. ಎಷ್ಟೇ ಓದಿದರು ಕೆಲಸ‌ ಸಿಗುವುದು ಬಹಳ ಕಷ್ಟ. ಎಷ್ಟೇ ಅಲೆದಾಡಿದರು ನಿರುದ್ಯೋಗಿಗಳಾಗಿಯೇ ಉಳಿದು ಬಿಡುತ್ತಾರೆ. ಸರಿಯಾದ ಕೆಲಸ ಸಿಗದ ಕಾರಣ ಓದಿದ್ದು ಏನೋ ಕೆಲಸ ಇನ್ಯಾವುದೋ ಎಂಬಂತ ಸ್ಥಿತಿ ತಲುಪಿದ್ದಾರೆ. ಇದೀಗ ಯುವಕರಿಗೆ ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ಇಂದು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದ ಲಕ್ಷ್ಮಣ ಎಂಬುವವರ ಜಮೀನಿನಲ್ಲಿ ಭತ್ತವನ್ನು ನಾಟಿ ಮಾಡಿದರು. ಕುಮಾರಸ್ವಾಮಿ ಅವರನ್ನು ಮಣ್ಣಿನ ಮಗ ಅಂತಾನೇ ಕರೆಯುತ್ತಾರೆ. ರೈತರಿಗಾಗಿ ಮಿಡಿವ ಮನಸ್ಸು ಅಂತಾರೆ. ಅದೇ ಥರ ಕುಮಾರಸ್ವಾಮಿ ಅವರು ನಡೆದುಕೊಂಡಿದ್ದು, ಪ್ರತಿ ವರ್ಷದಂತೆ ಈ ವರ್ಷವೂ ರೈತರ ಜಮೀನಿಗೆ ಬಂದು ಭತ್ತ ನಾಟಿ ಮಾಡಿದ್ದಾರೆ.

 

ಈ ವೇಳೆ ಮಾತನಾಡಿದ ಕುಮಾರಸ್ವಾಮಿ ಅವರು, 2018ರಲ್ಲೂ ಕಾವೇರಿ ಮಾತೆಗೆ ಪೂಜೆ ಮಾಡಿ ಭತ್ತ ನಾಟಿ ಮಾಡಿದ್ದೆ. ಕೆಆರ್ಎಸ್ ಡ್ಯಾಂ ಭರ್ತಿಯಾಗಿದೆ. ಹೀಗಾಗಿ ಈ ವರ್ಷವೂ ಭತ್ತ ನಾಟಿ ಮಾಡಲು ಕರೆ ಬಂತು. ರೈತರ ಮನವಿ ಮೇರೆಗೆ ಭತ್ತ ನಾಟಿ ಮಾಡಲು ಬಂದಿದ್ದೇನೆ. ಜೊತೆಗೆ ಮೂರು ಬಾರಿ ತಾಯಿ ಚಾಮುಂಡೇಶ್ಚರಿ ನನಗೆ ಜನ್ಮ ನೀಡಿದ್ದಾಳೆ. ಈಗ ನನ್ನ ಆರೋಗ್ಯದ ಬಗ್ಗೆ ಚಿಂತೆಯಿಲ್ಲ. ನನ್ನ ನಾಡಿನ ರೈತರು ನೆಮ್ಮದಿಯಿಂದ ಬದುಕು ಕಟ್ಟಿಕೊಳ್ಳಲು ಹಾಗೂ ನಮ್ಮ ಯುವಕರಿಗೆ ಉದ್ಯೋಗ ಕೊಡಿಸಲು ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಇನ್ನು ಮಂಡ್ಯದ ಅನೇಕ ಯುವಕರು ಬಂದು ಮನವಿ ಮಾಡಿದ್ದಾರೆ. ನಿಮಗೆ ಒಂದು ಮಾತು ಕೊಡುತ್ತೇನೆ. ದೊಡ್ಡ ದೊಡ್ಡ ಕಂಪನಿಗಳಲ್ಲಿ ಮಾತುಕತೆ ನಡೆಸಿದ್ದೇನೆ. ಖಂಡಿತ ಆ ಕಂಪನಿಗಳಲ್ಲಿ ಕೆಲಸ ಕೊಡಿಸುತ್ತೇನೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ

ಈ ರಾಶಿಯವರ ಇನ್ಮುಂದೆ ಆರ್ಥಿಕ ಬಲ ಪವರ್ ಫುಲ್. ಈ ರಾಶಿಯ ಪ್ರೇಮಿಗಳಿಗೆ ಯಾರಿಂದಲೂ ಅಗಲಿಕೆ ಮಾಡಲು ಸಾಧ್ಯವಿಲ್ಲ, ಗುರುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-19,2024 ಸೂರ್ಯೋದಯ: 06:08, ಸೂರ್ಯಾಸ್ತ : 06:11 ಶಾಲಿವಾಹನ ಶಕೆ :1946,

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ ಹಾಗೂ ಶೋಭಾಯಾತ್ರೆ : 3 ಲಕ್ಷ ಜನ ಭಾಗವಹಿಸುವ ನಿರೀಕ್ಷೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾಹಿತಿ

ಚಿತ್ರದುರ್ಗ.ಸೆ.18: ಸೆ.28 ರಂದು ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯನ್ನು ಶಾಂತಿ ಹಾಗೂ ಸೌಹಾರ್ಧತೆಯಿಂದ ನಡೆಸುವಂತೆ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಹಿಂದೂ ಮಹಾ ಗಣಪತಿ ಪ್ರತಿಷ್ಟಾಪನಾ ಸಮಿತಿ ಸದಸ್ಯರಗೆ ಸೂಚನೆ

ಸೆಪ್ಟೆಂಬರ್ 28 ರಂದು ಹಿಂದೂ ಮಹಾಗಣಪತಿ ವಿಸರ್ಜನೆ : ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನೇಮಕ : ರಂಜಿತ್ ಕುಮಾರ ಬಂಡಾರು

ಸೆಪ್ಟೆಂಬರ್‌ 28 ರಂದು ನಡೆಯಲಿರುವ ಹಿಂದೂ ಮಹಾಗಣಪತಿ ವಿಸರ್ಜನಾ ಮೆರವಣೆಗೆ ಹಾಗೂ ಶೋಭಾ ಯಾತ್ರೆಯ ಬಂದೋಬಸ್ತ್ ಕಾರ್ಯಕ್ಕೆ 3000 ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ ಬಂಡಾರು ತಿಳಿಸಿದರು.

error: Content is protected !!