ರಾಜ್ಯದ ಈ 4 ಜಿಲ್ಲೆಗಳಲ್ಲಿ‌ ಭಾರಿ ಮಳೆಯಾಗಲಿದೆ : ಹವಮಾನ ಇಲಾಖೆಯಿಂದ ಎಚ್ಚರಿಕೆ

suddionenews
1 Min Read

 

 

ಬೆಂಗಳೂರು: ಈಗಾಗಲೇ ಮಳೆಗಾಲ ಆರಂಭವಾಗಿದೆ. ಜೂನ್ 4ಕ್ಕೆ ಮಾನ್ಸೂನ್ ಪ್ರವೇಶ ಮಾಡಲಿದೆ. ಕೇರಳಕ್ಕೆ‌ಪ್ರವೇಶ ಮಾಡುವ ಮಾನ್ಸೂನ್ ನಿಂದ ಕರ್ನಾಟಕದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಜೋರಾಗಲಿದೆ.

ಕೇರಳಕ್ಕೆ ಆಗಮಿಸಿದ ಒಂದು ವಾರದಲ್ಲಿ ಮಾನ್ಸೂನ್ ರಾಜ್ಯಕ್ಕೂ ಆಗಮಿಸಲಿದೆ. ಇನ್ನು ಮುಂದಿನ 24 ಗಂಟೆಗಳ ಹವಮಾನ ವರದಿಯನ್ನು ಇಲಾಖೆ ಬಿಡಿಗಡೆ ಮಾಡಿದೆ. ಹವಮಾನ ಇಲಾಖೆಯ ವರದಿ ಪ್ರಕಾರ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಇನ್ನು ಬೆಂ.ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿ ತಕ್ಕಮಟ್ಟಿಗೆ ಮಳೆಯಾಗಲಿದೆ.

ಜೂನ್ 4ರ ತನಕ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಐಎಂಡಿ ನೀಡಿದ್ದು, ರಾಜ್ಯದ ಎಂಟು ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆಯಾಗಿದೆ. ಇನ್ನು ಎಲ್ಲಾ ಜಿಲ್ಲಾಡಳಿತ ಹಾಗೂ ಅಧಿಕಾರಿಗಳಿಗೆಕಂದಾಯ ಸಚಿವ ಕೃಷ್ಣಭೈರೇಗೌಡ ಸೂಚನೆಯನ್ನು ನೀಡಿದ್ದಾರೆ. ಮಳೆಹಾನಿ ಸಂದರ್ಭದಲ್ಲಿ ಅನುಸರಿಸಬೇಕಾದ ಸೂಚನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *