ಹೊಳಲ್ಕೆರೆ : ನವೆಂಬರ್ ೧, ೧೯೫೬ ರಂದು ಬಹುತೇಕ ಕನ್ನಡ ಭಾಷಿಕರಿರುವ ನಾಡೆಲ್ಲ ಕರ್ನಾಟಕವಾಯಿತು. ಕನ್ನಡಿಗರ ಸ್ವಾಭಿಮಾನದ ಹೋರಾಟ ಸಾರ್ಥಕವಾಯಿತು. ಕನ್ನಡ ನಾಡು ನುಡಿ ನೆಲ ಜಲ ಕನ್ನಡಮಯವಾದ ಈ ಸುದಿನ ಕನ್ನಡಿಗರಿಗೆಲ್ಲ ಗೌರವ ಹಾಗು ಹೆಮ್ಮೆಯ ದಿನ ಎಂದು ಸಹಶಿಕ್ಷಕರಾದ ಟಿ.ಪಿ.ಉಮೇಶ್ ಹೇಳಿದರು.
ಅಮೃತಾಪುರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ದೇಶದ ಸ್ವಾತಂತ್ರ್ಯ ಹೋರಾಟದ ಜೊತೆಯಲ್ಲೆ ಭಾಷಾವಾರು ಪ್ರಾಂತಗಳ ರಚನೆಗೆ ಒತ್ತಾಯಗಳು ನಡೆಯುತ್ತಿದ್ದವು. ಕನ್ನಡ ಭಾಷಿಕರ ನಾಡು ತಮಿಳು, ತೆಲುಗು, ಮಲಯಾಳಿ, ಮರಾಠಿ ಭಾಷಿಕ ಪ್ರಾಂತಗಳಲ್ಲಿ ಹಂಚಿ ಹೋಗಿತ್ತು. ಆಡಳಿತ, ಶಿಕ್ಷಣ ಹಾಗು ಸಂಸ್ಕೃತಿ ಪರಂಪರೆಯ ದೃಷ್ಟಿಯಿಂದ ಕನ್ನಡ ಭಾಷಿಕರ ನಾಡು ಒಗ್ಗೂಡಬೇಕಾದದ್ದು ಅನಿವಾರ್ಯವಾಗಿತ್ತು. ಡೆಪ್ಯುಟಿ ಚೆನ್ನಬಸಪ್ಪ, ಆಲೂರು ವೆಂಕಟರಾವ್, ಎಸ್.ನಿಜಲಿಂಗಪ್ಪ, ಮುದವೀಡು ಕೃಷ್ಣರಾಯರು, ಅನಕೃ, ತರಾಸು, ಪಾಟೀಲ ಪುಟ್ಟಪ್ಪ, ವಿಕೃಗೋಕಾಕ್, ಕುವೆಂಪು ಮುಂತಾದ ಸಾವಿರಾರು ಮಹನೀಯರ ಶ್ರಮದಿಂದ ಕರ್ನಾಟಕ ಒಂದುಗೂಡಿತು. ಆರಂಭದಿ ವಿಶಾಲ ಮೃಸೂರು ರಾಜ್ಯ ಎಂದು ನಾಮಕರಣಗೊಂಡರು ನಂತರ ಕರ್ನಾಟಕ ಎಂದೇ ಹೆಸರಾಯಿತು. ಕನ್ನಡಿಗರ ರಾಜ್ಯ ರಚನೆಯಾಗಿ ಆರವತ್ತೆಂಟು ವರ್ಷಗಳು ಮತ್ತು ಕರ್ನಾಟಕ ಎಂದು ಹೆಸರಾಗಿ ಐವತ್ತು ವರ್ಷಗಳಾಯಿತು ಎಂದು ತಿಳಿಸಿದರು.
ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ನಾಡಗೀತೆ ಹಾಡಿದರು ಮತ್ತು. ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶಿಸಿದರು. ಮುಖ್ಯೋಪಾಧ್ಯಾಯರಾದ ಡಿ.ಸಿದ್ದಪ್ಪ, ಸಹಶಿಕ್ಷಕರಾದ ರೇಷ್ಮಾ, ಅಂಗನವಾಡಿ ಶಿಕ್ಷಕಿ ಜ್ಯೋತಿ, ಅಡಿಗೆ ಸಹಾಯಕರಾದ ತಿಮ್ಮಮ್ಮ, ಶಾರದಮ್ಮ ಹಾಗು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…