ಲಂಚಕ್ಕೆ ಬೇಡಿಕೆ : ಲೋಕಾಯುಕ್ತ ಪೊಲೀಸರಿಂದ ಪಶುವೈದ್ಯಾಧಿಕಾರಿ ಬಂಧನ

 

ಮಾಹಿತಿ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ,(ಏ.23) : ಹೊಳಲ್ಕೆರೆ ತಾಲೂಕು ಚಿಕ್ಕಜಾಜೂರು ಗ್ರಾಮದ ಪಶುವೈದ್ಯಾಧಿಕಾರಿ ಡಾ.ತಿಪ್ಪೆಸ್ವಾಮಿ ಅವರನ್ನು ಲಂಚ ಬೇಡಿಕೆ ಆರೋಪದ ಮೇಲೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಕಾಗಳಗೆರೆ ಗ್ರಾಮದ ಎಸ್.ಸ್ವಾಮಿ ಅವರ ಸಿಂಧಿ ಹಸು ಅನಾರೋಗ್ಯ ಕಾರಣ ಮರಣ ಹೊಂದಿತ್ತು. ಮೃತಪಟ್ಟ ಹಸುವಿನ ಮರಣೋತ್ತರ ಪರೀಕ್ಷೆ ವರದಿ ನೀಡಲು ಪಶುವೈದ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ ರೂ.7000 ಕ್ಕೆ ಲಂಚಕ್ಕೇ ಬೇಡಿಕೆ ಇಟ್ಟಿದ್ದರು.

ಮುಂಗಡವಾಗಿ ರೂ.1000 ಗಳನ್ನು ಸಹ ಪಡೆದುಕೊಂಡಿದ್ದರು. ಲಂಚ ನೀಡಲು ಇಷ್ಟವಿರದ ಎಸ್.ಸ್ವಾಮಿ ಲೋಕಾಯುಕ್ತ ಪೊಲೀಸರನ್ನು ಸಂಪರ್ಕಿಸಿ ದೂರು ನೀಡಿದ್ದರು. ಆಪಾದಿತ ಡಾ.ತಿಪ್ಪೇಸ್ವಾಮಿ ಮಂಗಳವಾರ ರೂ.6000 ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಂದ ಬಂಧಿತನಾಗಿದ್ದಾನೆ.

ಕಾಯಾಚರಣೆಯನ್ನು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎನ್.ವಾಸುದೇವರಾಮ ಅವರ ನೇತೃತ್ವದಲ್ಲಿ, ಪೊಲೀಸ್ ನಿರೀಕ್ಷಕಿ ಬಿ.ಕೆ.ಲತಾ ಅವರ ತಂಡ ಕೈಗೊಂಡಿದೆ.

ಈ ಸಂದರ್ಭದಲ್ಲಿ ಪೊಲೀಸ್ ಉಪಾಧೀಕ್ಷಕ ಎನ್.ಮೃತ್ಯುಂಜಯ, ವೈ.ಎಸ್.ಶಿಲ್ಪಾ, ಆರ್.ವಸಂತ ಕುಮಾರ್, ಪೊಲೀಸ್ ಸಿಬ್ಬಂದಿ ಜಿ.ಎಂ.ತಿಪ್ಪೇಸ್ವಾಮಿ, ಹೆಚ್.ಶ್ರೀನಿವಾಸ, ಎಸ್.ಆರ್.ಪುಷ್ಪ, ಎಲ್.ಜಿ.ಸತೀಶ, ಜಿ.ಎನ್.ಸಂತೋಷ ಕುಮಾರ್, ಎಂ.ವೀರೇಶ್, ಆರ್.ವೆಂಕಟೇಶ್‌ಕುಮಾರ್, ಟಿ.ವಿ.ಸಂತೋಷ, ಡಿ.ಮಾರುತಿ, ಎನ್.ಎಲ್.ಶ್ರೀಪತಿ ಸೇರಿದಂತೆ ಮತ್ತಿತರರು ಇದ್ದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

42 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago