Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಶ್ರೀ ಮುರುಘಾಮಠಕ್ಕೆ ಉತ್ತರಾಧಿಕಾರಿ ನೇಮಕ : ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು

Facebook
Twitter
Telegram
WhatsApp

 

ಚಿತ್ರದುರ್ಗ, (ಮೇ. 27)  : ಚಿತ್ರದುರ್ಗದ ಐತಿಹಾಸಿಕ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ಪೀಠಾಧಿಪತಿಗಳಾದ ಡಾ. ಶ್ರೀ ಶಿವಮೂರ್ತಿ ಮುರುಘಾ ಶರಣರು ತಮ್ಮ ಉತ್ತರಾಧಿಕಾರಿಯನ್ನಾಗಿ ಶ್ರೀ ಬಸವಾದಿತ್ಯ ದೇವರು ಅವರನ್ನು ನೇಮಕ ಮಾಡಿದ್ದಾರೆ.

ಶ್ರೀಮಠದ ಶಿರಸಂಗಿ ಮಹಾಲಿಂಗಸ್ವಾಮಿ ಸಭಾಂಗಣದಲ್ಲಿ ನಡೆದ ಶರಣ ಸಭೆಯಲ್ಲಿ ಭಾಗವಹಿಸಿದ್ದ ಭಕ್ತರ ಹಾಗೂ ವಿವಿಧ ಸಮುದಾಯದ ಮಖಂಡರ ಸಮ್ಮುಖದಲ್ಲಿ ಈ ತೀರ್ಮಾನವನ್ನು ಶ್ರೀಗಳು ಪ್ರಕಟಿಸಿದರು.
ನಮ್ಮನ್ನು ಸೇರಿ 20 ಪೀಠಾಧಿಪತಿಗಳು ಶ್ರೀಮಠವನ್ನು ಮುನ್ನಡೆಸಿದ್ದಾರೆ.

ಆಕಸ್ಮಿಕವಾಗಿ ಹಾಗೂ ಅನಿರೀಕ್ಷಿತವಾಗಿ ಸಂಭವಿಸುವ ಘಟನೆಗಳಿಂದ ಮಠ-ಪೀಠಗಳಲ್ಲಿ ಶೂನ್ಯ ನಿರ್ಮಾಣವಾಗಬಾರದು ಎಂಬ ಕಾರಣಕ್ಕೆ ಉತ್ತರಾಧಿಕಾರಿ ನೇಮಕ ಮಾಡಲಾಗಿದೆ.

ತಾಲ್ಲೂಕಿನ ಹುಲ್ಲೂರು ಗ್ರಾಮದ ಶ್ರೀಮತಿ ಚಂದ್ರಕಲಾ ಮತ್ತು ಶಿವಮೂರ್ತಯ್ಯ ದಂಪತಿಯ ಪುತ್ರ ಬಸವಾದಿತ್ಯ ಅವರು ಶ್ರೀಮಠದ ಗುರುಕುಲದಲ್ಲಿದ್ದುಕೊಂಡು ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ. ಕನ್ನಡ, ಇಂಗ್ಲಿಷ್ ಹಾಗೂ ಹಿಂದಿ ಭಾಷೆ ಬಲ್ಲವರಾಗಿದ್ದು, ಉನ್ನತ ವ್ಯಾಸಂಗ ಮಾಡಿಸಿ ಪಟ್ಟ ಕಟ್ಟಲಾಗುವುದು ಎಂದು ಶ್ರೀಗಳು ಹೇಳಿದರು.

ಕರ್ನಾಟಕದ ಬೇರೆ ಬೇರೆ ಭಾಗಗಳಲ್ಲಿ ಶರಣಸಭೆ ಮಾಡುತ್ತ ಬರಲಾಗಿದೆ. ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ಎಂದರೆ ಸಂವಾದ. ಶರಣ ಸಭೆ ಸಂಘಟನೆ ಮಾಡುತ್ತ ಬಂದಿದೆ. ಸಂಘಟನೆ, ಸಮಾಲೋಚನೆ ಸಂವರ್ಧನ ಇವು ಮೂರು ಸಭೆಯ ಉದ್ದೇಶಗಳು. ಇದ್ದು ಇಲ್ಲದಂತಿರುವುದು ಎದ್ದು ಕಾಣಿಸಿಕೊಳ್ಳಬಾರದು. ಅನುಭವ ಮಂಟಪದ ಪರಿಕಲ್ಪನೆ ಎಂದರೆ ಪ್ರಜಾಸತ್ತಾತ್ಮಕವಾದ ಪರಿಕಲ್ಪನೆ. ಇಲ್ಲಿ ಸ್ವಹಿತಾಸಕ್ತಿ ಇರುವುದಿಲ್ಲ. ಪಟ್ಟಭದ್ರ ಹಿತಾಸಕ್ತಿ ಇರುವುದಿಲ್ಲ ಎಂದರು.

ಶ್ರೀಮಠಕ್ಕೆ ಸರ್ವ ಸಮಾಜದವರನ್ನೊಳಗೊಂಡ ಸಲಹಾ ಸಮಿತಿಯೊಂದನ್ನು ಮಾಡಲಿದ್ದೇವೆ ಎಂದು ಶ್ರೀಗಳು ತಿಳಿಸಿದರು.

ಬೆಂಗಳೂರಿನ ದ.ಸಂ.ಸ. ಮುಖಂಡ  ವೆಂಕಟಸ್ವಾಮಿ, ಸಿಂದಗಿ ಬಸವಕೇಂದ್ರದ ನಾನಾಗೌಡ ಪಾಟೀಲ, ಧಾರವಾಡ ಬಸವಕೇಂದ್ರದ ಈಶ್ವರ ಸಾಣಿಕೊಪ್ಪ, ಚಿತ್ರದುರ್ಗ ವೀರಶೈವ ಸಮಾಜದ ಜಿತೇಂದ್ರ ಹುಲಿಕುಂಟೆ, ಚನ್ನಗಿರಿ ಉಮಾಪತಿ, ಭಾಲ್ಕಿ ಬಸವಕೇಂದ್ರದ ಅಧ್ಯಕ್ಷ ಕಿರಣ್‍ಕುಮಾರ್ ಖಂಡ್ರೆ ಮೊದಲಾದವರು ಮಾತನಾಡಿದರು.

ಇಳಕಲ್‍ನ ಶ್ರೀ ಗುರುಮಹಾಂತ ಸ್ವಾಮಿಗಳು, ಅಥಣಿಯ ಶ್ರೀ ಶಿವಬಸವ ಗುರು ಮುರುಘರಾಜೇಂದ್ರ ಸ್ವಾಮಿಗಳು, ಹೆಬ್ಬಾಳು ವಿರಕ್ತಮಠದ ಶ್ರೀ ಮಹಂತ ರುದ್ರೇಶ್ವರ ಸ್ವಾಮಿಗಳು, ಗುರುಮಠಕಲ್‍ನ ಶ್ರೀ ಶಾಂತವೀರ ಗುರುಮುರುಘರಾಜೇಂದ್ರ ಸ್ವಾಮಿಗಳು, ದಾವಣಗೆರೆ ವಿರಕ್ತಮಠದ ಶ್ರೀ ಬಸವಪ್ರಭು ಸ್ವಾಮಿಗಳು, ಬ್ಯಾಡಗಿ ಮುಪ್ಪಿನಸ್ವಾಮಿ ವಿರಕ್ತಮಠದ ಶ್ರೀ ಚೆನ್ನಮಲ್ಲಿಕಾರ್ಜುನ ಸ್ವಾಮಿಗಳು, ಶ್ರೀ ಬಸವಮೂರ್ತಿ ಮಾದಾರಚೆನ್ನಯ್ಯ ಸ್ವಾಮಿಗಳು, ಡಾ. ಬಸವಕುಮಾರ ಸ್ವಾಮಿಗಳು, ಶ್ರೀ ಶಿದ್ದರಹಳ್ಳಿ ಪಾರಮಾರ್ಥ ಗವಿಮಠದ ಶ್ರೀ ಮಲ್ಲಿಕಾರ್ಜುನ ಸ್ವಾಮಿಗಳು, ತಿಳುವಳ್ಳಿಯ ಶ್ರೀ ಬಸವನಿರಂಜನ ಸ್ವಾಮಿಗಳು ಮೊದಲಾದವರಿದ್ದರು.
ಜಮುರಾ ಕಲಾವಿದರು ಪ್ರಾರ್ಥಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನೀಡಿದ ಭರವಸೆಗಳನ್ನು ಈಡೇರಿಸಿಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

  ಬೀದರ್, ಏಪ್ರಿಲ್ 25: ಹುಬ್ಬಳಿಯ ನೇಹಾ ಹೀರೆಮಠ ಕೊಲೆ ಪ್ರಕರಣವನ್ನು ಸರ್ಕಾರ ತೀವ್ರವಾಗಿ ಖಂಡಿಸುತ್ತದೆ ಹಾಗೂ ಆರೋಪಿಗೆ ಘೋರ ಶಿಕ್ಷೆ ವಿಧಿಸಲು ಸಿಐಡಿ ತನಿಖೆ ಚುರುಕುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು

ಅಬ್ಬಬ್ಬಾ.. ಐಫೋನ್ ಜಸ್ಟ್ 35 Thousand.. ಈ ಆಫರ್ ಎಂಡ್ ಆಗೋದು ಯಾವಾಗ..?

ಈಗಂತು ಯಾರ ಕೈನಲ್ಲಿ ನೋಡಿದರು ಐಫೋನ್ ಗಳದ್ದೇ ಹಬ್ಬ. ಹಣ ಜಾಸ್ತಿ ಆದ್ರೂ ಐಫೋನ್ ಇರಲೇಬೇಕು ಅಂತಾರೆ. ಅದರಲ್ಲೂ ಐಫೋನ್ ತರಹೇವಾರಿ ಮಾಡೆಲ್ ಗಳನ್ನ ರಿಲೀಸ್ ಮಾಡ್ತಾ ಇರುತ್ತೆ. ಆದ್ರೆ ಐಫೋನ್ ಪ್ರಿಯರಿಗಾಗಿಯೇ ಬಿಗ್ಗೆಸ್ಟ್

Watermelon vs Muskmelon : ಕಲ್ಲಂಗಡಿ vs ಕರ್ಬೂಜ |  ಬೇಸಿಗೆಯಲ್ಲಿ ಆರೋಗ್ಯಕ್ಕೆ ಯಾವುದು ಉತ್ತಮ ?

  ಸುದ್ದಿಒನ್ : ಕಲ್ಲಂಗಡಿ ಮತ್ತು ಕರ್ಬೂಜ ಎರಡೂ ಬೇಸಿಗೆಯಲ್ಲಿ ಬಹಳ ಜನಪ್ರಿಯವಾದ ಹಣ್ಣುಗಳಾಗಿವೆ.  ಎರಡನ್ನೂ ಇಷ್ಟಪಡುವ ಅನೇಕ ಜನರಿದ್ದಾರೆ. ಆದರೆ ಈಗ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಒಳ್ಳೆಯದು. ಅದರ ಬಗ್ಗೆ ತಿಳಿದುಕೊಳ್ಳೋಣ. ಕಲ್ಲಂಗಡಿ

error: Content is protected !!