ಸದನದಲ್ಲಿ ಧರಣಿ ವಾಪಾಸ್ ಪಡೆದ ಬಿಜೆಪಿ

suddionenews
1 Min Read

 

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಬಗ್ಗೆ ನಿನ್ನೆಯಿಂದ ಬಿಜೆಪಿ ಪ್ರತಿಭಟನೆ ನಡೆಸುತ್ತಿತ್ತು. ಸದನದ ಒಳಗೂ ಮತ್ತು ಹೊರಗೂ ಪ್ರತಿಭಟನೆ ನಡೆಸಿದೆ. ಐದು ಗ್ಯಾರಂಟಿಗಳ ಬಗ್ಗೆ ಸದನದಲ್ಲಿ ಚರ್ಚೆಯಾಗಬೇಕು, ಅದಕ್ಕೆ ಅವಕಾಶ ನೀಡಬೇಕು ಎಂಬ ಒತ್ತಾಯವಿತ್ತು.

ಫ್ರೀಡಂ ಪಾರ್ಕ್ ನಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ಹರಿಹಾಯ್ದರು. ಇನ್ನು ವಿಧಾನಸೌಧದ ಬಳಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿತ್ತು. ಇಂದು ಬಿಜೆಪಿ ಪಕ್ಷ ಪ್ರತಿಭಟನೆಯನ್ನು ಕೈಬಿಟ್ಟಿದೆ.

ಬಿಜೆಪಿ ಸದನದಲ್ಲಿ ಧರಣಿ ವಾಪಾಸ್ ಪಡೆದಿದೆ. ಕಲಾಪದಲ್ಲಿ ಚರ್ಚೆಗೆ ಅವಕಾಶ ಹಿನ್ನೆಲೆ ವಾಪಸ್ ಪಡೆದುಕೊಂಡಿದೆ. ಇನ್ನು ವಿಧಾನಸಭೆ ಕಲಾಪ ಆರಂಭವಾಗಿದ್ದು, ನಿಗದಿತ ಸಮಯಕ್ಕಿಂತ ಮುಂಚೆ ಬಂದ ಶಾಸಕರಿಗೆ ಸ್ಪೀಕರ್ ಯುಟಿ ಖಾದರ್ ಅಭಿನಂದನೆ ಸಲ್ಲಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *