ಬೆಂಗಳೂರು: ಅಥಣಿ ಕ್ಷೇತ್ರದ ಟಿಕೆಟ್ ಸಿಗದ ಕಾರಣಕ್ಕೆ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದಾರೆ. ಸದ್ಯ ರಾಜೀನಾಮೆ ಪತ್ರ ತಲುಪಿಸಲು ಬೆಂಗಳೂರಿಗೆ ಬಂದು ಇಳಿದಿದ್ದಾರೆ. ಸವದಿ ಅವರ ಹಿಂದೆ ಡಿಕೆ ಶಿವಕುಮಾರ್ ಅವರಿದ್ದಾರೆ ಎನ್ನಲಾಗಿದೆ.
ಸದ್ಯ ಸವದಿ ಅವರು ಸಾಂಬ್ರಾದಿಂದ ಬೆಂಗಳೂರಿಗೆ ಬಂದಿಳಿದಿದ್ದಾರೆ. ಸವದಿಯನ್ನು ಬೆಂಗಳೂರಿಗೆ ಕರೆತರಲು ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಜವಾಬ್ದಾರಿ ನೀಡಲಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ನೀಡಿದ ಜವಬ್ದಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸಿದ್ದಾರೆ. ಈಗಾಗಲೇ ಸವದಿ ಅವರು ಬೆಂಗಳೂರಿಗೆ ಬಂದಿದ್ದಾರೆ. ಸಿಡಿದೆದ್ದಿರುವ ಲಕ್ಷ್ಮಣ ಸವದಿ ಅವರನ್ನು ಸಮಾಧಾನ ಪಡಿಸಲು ಬಿಜೆಪಿ ಕೂಡ ಪ್ರಯತ್ನ ಮಾಡಿದೆ. ಆದರೆ ಬಿಜೆಪಿ ನಾಯಕರಿಗೆ ಸಿಗದಂತೆ ಕಾಯಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ.
ಲಕ್ಷ್ಮಣ ಸವದಿ ಅವರಿಗೆ ವಿಶೇಷ ವಿಮಾನ ಬುಕ್ ಮಾಡಿದ್ದು ಡಿಕೆ ಶಿವಕುಮಾರ್ ಎನ್ನಲಾಗಿದೆ. ಸವದಿ ಜೊತೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಹೋದರ ಚನ್ಬರಾಜ ಹಟ್ಟಿಹೊಳಿ ಕೂಡ ಕಾಣಿಸಿಕೊಂಡಿದ್ದಾರೆ. ಸದ್ಯ ಸವದಿ ಬೆಂಗಳೂರಿನ ಅವರ ನಿವಾಸ ತಲುಪಿದ್ದಾರೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…