Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸೋಮಣ್ಣ ಕಾಂಗ್ರೆಸ್ ಕಡೆ ಒಲವು : ವದಂತಿಗಳಿಗೆ ಕಡೆಗೂ ಸ್ಪಷ್ಟನೆ ನೀಡಿದ ಸಚಿವ..!

---Advertisement---

 

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಸಚಿವ ವಿ ಸೋಮಣ್ಣ ನಡೆ ಕಾಂಗ್ರೆಸ್ ಕಡೆಗೆ ಎಂಬ ಮಾತಿತ್ತು. ಬಿಜೆಪಿಯಲ್ಲಿ ಒಂದಷ್ಟು ಮನಸ್ತಾಪವಿದೆ, ಹೀಗಾಗಿ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನಲಾಗ್ತಾ ಇತ್ತು. ಅದಕ್ಕೆ ತಕ್ಕಂತೆ ಡಿಕೆ ಶಿವಕುಮಾರ್ ಹಾಗೂ ಸೋಮಣ್ಣ ಜೊತೆಗಿನ ಫೋಟೋ ಬೇರೆ ವೈರಲ್ ಆಗಿತ್ತು.

ಇದೀಗ ಈ ಎಲ್ಲಾ ಊಹಾಪೋಹಗಳಿಗೂ ಖಡಕ್ ಉತ್ತರ ನೀಡಿದ್ದಾರೆ. ಪ್ರಧಾನಿ ಮೋದಿ ಹಾಗೂ ಸಿಎಂ ಬೊಮ್ಮಾಯಿ ನಾಯಕತ್ವದಲ್ಲಿ ಕೆಲಸ ಮಾಡುತ್ತಿದ್ದೇನೆ. ಮಾಜಿ ಸಿಎಂ ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಕೆಲಸ ಮಾಡುತ್ತೇನೆ. ನಾನು ಬಿಜೆಪಿಯ ನಾಯಕ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಗೆ ಹೋಗುವುದಿಲ್ಲ. ನಾನು ಎಲ್ಲಿಗೂ ಹೋಗಲ್ಲ, ಬಿಜೆಪಿಯಲ್ಲಿಯೇ ಇರುತ್ತೇನೆ ಎಂದಿದ್ದಾರೆ.

ಟಿಕೆಟ್ ಕೊಟ್ಟರೆ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತೇನೆ. ಇಲ್ಲವಾದರೆ ಪಕ್ಷದ ಕೆಲಸ ಮಾಡಿಕೊಂಡು ಇರುತ್ತೇನೆ. ನನ್ನ ವಿರುದ್ಧ ಷಡ್ಯಂತ್ರ ಮಾಡಿದವರು ಚೆನ್ನಾಗಿರಲಿ. ಇನ್ನು ಮುಂದಾದರೂ ತೇಜೋವಧೆ ಮಾಡಬೇಡಿ. ನಾನು ಬಿಜೆಪಿ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ. ಕಾಂಗ್ರೆಸ್ ನಿಂದ ಡಿಕೆಶಿ ನನ್ನನ್ನು ಸಂಪರ್ಕಿಸಿಲ್ಲ. ಕಾಂಗ್ರೆಸ್ ಗೆ ಬನ್ನಿ ಅಂತಾನು ಕರೆದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...