Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹಾಸ್ಟೇಲ್ ನಲ್ಲಿ ಇದ್ದಕ್ಕಿದ್ದ ಹಾಗೆ ತಗುಲಿದ ಬೆಂಕಿಗೆ 10 ಮಂದಿ‌ ಸಜೀವ ದಹನ..!

Facebook
Twitter
Telegram
WhatsApp

 

ಹಾಸ್ಟೇಲ್ ನಲ್ಲಿ ಇದ್ದಕ್ಕಿದ್ದ ಹಾಗೇ ನಾಲ್ಕು ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡು, ಹತ್ತು ಮಂದಿ‌ಸಜೀವ ದಹನವಾಗಿರುವಂತಹ ದುರ್ಘಟನೆ ನಡೆದಿದೆ. ಕಟ್ಟಡದಲ್ಲಿ ಇನ್ನು ಇಪ್ಪತ್ತು ಮಂದಿ ಸಿಲುಕಿರುವ ಅನುಮಾನ ವ್ಯಕ್ತವಾಗಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ಶೋಧ ಕಾರ್ಯ ಮುಂದುವರೆದಿದೆ. ಈ ಘಟನೆ ನ್ಯೂಜಿಲೆಂಡ್ ನ ವೆಲ್ಲಿಂಗ್ ಟನ್ ನಲ್ಲಿ ನಡೆದಿದೆ.

ರಾತ್ರಿ 12.30ರ ವೇಳೆಗೆ ಹಾಸ್ಟೇಲ್ ಗೆ ಬೆಂಕಿ ಬಿದ್ದಿದೆ. ಕ್ಷಣ ಮಾತ್ರದಲ್ಲಿಯೇ ಬೆಂಕಿ ಧಗಧಗನೆ ಉರಿದಿದೆ. ಕಟ್ಟಡದ ಒಳಗಿದ್ದವರು ಹೊರಗೆ ಬರುವುದಕ್ಕೆ ಸಾಧ್ಯವಾಗಿಲ್ಲ. ಬೆಂಕಿಯ ಕೆನ್ನಾಲೆಗೆ 10 ಜನ ಸಜೀವ ದಹನವಾಗಿದ್ದಾರೆ. 20 ಜನ ಕಾಣೆಯಾಗಿದ್ದು, ಇನ್ನು ಹುಡುಕಾಟ ನಡೆಯುತ್ತಿದೆ.

ಹಾಸ್ಟೇಲ್ ಕಟ್ಟಡದೊಳಗೆ 52 ಜನ ಇದ್ದರು ಎನ್ನಲಾಗಿದೆ. ಇನ್ನು ಹನ್ನೆರಡು ಜನ ಈ ಬೆಂಕಿಯಿಂದ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳದವರು ಬಂದಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ.

ಬೆಂಕಿಯ ಕೆನ್ನಾಲೆಗೆ ಸಿಲುಕಿ ಗಾಯಗೊಂಡವರನ್ನು ಸದ್ಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡುತ್ತಿದ್ದಾರೆ. ಮೂರನೇ‌ ಮಹಡಿಯಲ್ಲಿ ಮೊದಲಿಗೆ ಕಾಣಿಸಿಕೊಂಡ ಬೆಂಕಿ, ಆನಂತರದಲ್ಲಿ ಇಡೀ ಕಟ್ಟಡಕ್ಕೆ ಆವರಿಸಿಕೊಂಡಿತ್ತು. ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದು ಇನ್ನು ಸಹ ತಿಳಿದು ಬಂದಿಲ್ಲ. ಸದ್ಯ ಬೆಂಕಿ ನಂದಿಸುವ ಕೆಲಸ ನಡೆಯುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಯರೇಹಳ್ಳಿಯಲ್ಲಿ ಮತದಾನ ಬಹಿಷ್ಕಾರ : ಮರು ಮತದಾನ ನಡೆಸಿ, ವಾರದೊಳಗಾಗಿ ಮೂಲಭೂತ ಸೌಲಭ್ಯಗಳನ್ನು ಒದಗಿಸಿ : ಕರುನಾಡ ವಿಜಯಸೇನೆ ಒತ್ತಾಯ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್.27  : ಮೂಲಭೂತ ಸೌಲಭ್ಯಗಳಿಲ್ಲದೆ ಪರಿತಪಿಸುತ್ತಿರುವ ಯರೇಹಳ್ಳಿ ಗ್ರಾಮಸ್ಥರು ಶುಕ್ರವಾರ ನಡೆದ ಲೋಕಸಭಾ ಚುನಾವಣೆಯಲ್ಲಿ ಮತದಾನ

ಚಿತ್ರದುರ್ಗ ಲೋಕಸಭಾ ಚುನಾವಣೆ: ಶೇ.73.30 ರಷ್ಟು ಮತದಾನ : 8 ವಿಧಾನಸಭಾ ಕ್ಷೇತ್ರಗಳ ಸಂಪೂರ್ಣ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

ಚಿತ್ರದುರ್ಗ. ಏ.27:  ಚಿತ್ರದುರ್ಗ ಲೋಕಸಭಾ ಚುನಾವಣೆಗೆ ಏ.26ರಂದು ಶುಕ್ರವಾರ ಜರುಗಿದ ಮತದಾನ ಶಾಂತಿಯುತವಾಗಿ ಮುಕ್ತಾಯವಾಗಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಶೇ.73.30 ರಷ್ಟು ಮತದಾನವಾಗಿದೆ. ಲೋಕಸಭಾ ಕ್ಷೇತ್ರ ವ್ಯಾಪ್ತಿಯ  ಒಟ್ಟು 18,56,876 ಮತದಾರರಲ್ಲಿ 13,61,031 ಮತದಾರರು 

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಜನರ ಸೇವೆ ಮಾಡಿದರೆ ಭಗವಂತನ ಸೇವೆ ಮಾಡಿದಂತೆ : ಗೋವಿಂದ ಕಾರಜೋಳ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552   ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 27  : ಕೆಲವರು ನನ್ನನ್ನು ಹೊರಗಿನವನು ಎಂದು ಅಪ ಪ್ರಚಾರ ಮಾಡಿದರು ಕ್ಷೇತ್ರದ ಜನ

error: Content is protected !!