Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೊಸ ವರ್ಷಕ್ಕೆ ಪಾರ್ಟಿ ಮಾಡೋಕೆ ಬಿಯರ್ ಸಿಗಲ್ವಾ..? ಸರ್ಕಾರದ ಆದೇಶವಾದರೂ ಏನು..?

Facebook
Twitter
Telegram
WhatsApp

ವೀಕೆಂಡ್, ಆ ಪಾರ್ಟಿ ಈ ಪಾರ್ಟಿ ಅಂತ ಬಿಯರ್ ಜೊತೆಗೆ ಮಜಾ ಮಾಡುವವರಿಗೆ ಸರ್ಕಾರದಿಂದ ಬಿಗ್ ಶಾಕ್ ಸಿಕ್ಕಿದೆ. ಬಿಯರ್ ಉತ್ಪಾದನೆಯನ್ನು ಸ್ಥಗಿತ ಮಾಡಲು ಯೋಚನೆ ಮಾಡಿದೆಯಂತೆ. ಹೊಸ ವರ್ಷ ಬೇರೆ ಹತ್ತಿರ ಬರುತ್ತಾ ಇದೆ. ಬಿಯರ್ ಗೆ ಹೆಚ್ಚಿನ ಡಿಮ್ಯಾಂಡ್ ಬೇಡಿಕೆ ಬರಲಿದೆ. ಆದರೆ ಸರ್ಕಾರದ ಈ ನಿರ್ಧಾರದಿಂದ ಬಿಯರ್ ಪ್ರಿಯರಿಗೆ ಶಾಕ್ ಆಗಲಿದೆ. ಇದಕ್ಕೆ ಕಾರಣ ಬೇರೆಯೇ ಇರುವ ಬಗ್ಗೆ ಚರ್ಚೆ ಆಗುತ್ತಾ ಇದ್ದರೆ, ಅಬಕಾರಿ ಇಲಾಖೆಯಿಂದ ಬೇರೆಯದ್ದೇ ಕಾತಣ ನೀಡುತ್ತಿದ್ದಾರೆ.

 

ಮೈಸೂರಿನ 4 ಉತ್ಪಾದನಾ ಕಂಪನಿಗಳಿಗೆ ಬಿಯರ್ ಉತ್ಪಾದನೆಯನ್ನು ಸ್ಥಗಿತ ಮಾಡುವಂತರ ಆದೇಶ ನೀಡಿದೆಯಂತೆ. ಮೈಸೂರು ಬಿಯರ್ ಉತ್ಪಾದನೆ ಕಂಪನಿಗಳಲ್ಲಿ ಸಿಬ್ಬಂದಿಗಳ ಕೊರತೆ ಇದೆ. ಹೀಗಾಗಿ ಸರ್ಕಾರ ಈ ನಿರ್ಧಾರಕಗಕೆ ಬಂದಿದೆ ಎಂಬ ಕಾರಣ ನೀಡಲಾಗಿದೆ. ಆದರೆ ಸರ್ಕಾರದ ಈ ನಿರ್ಧಾರದ ಹಿಂದೆ ಬೇರೆಯದ್ದೇ ಕಾರಣವಿದೆ ಎಂದೇ ಚರ್ಚೆಯಾಗುತ್ತಿದೆ.

ರಾಜ್ಯದಲ್ಲಿ ಬಿಯರ್ ಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆ. ಬಿಯರ್ ಸಪ್ಲೈ ಹೆಚ್ಚಾದರೆ IML ಸೇಲ್ ಆಗುವುದು ಕಡಿಮೆಯಾಗುತ್ತದೆ. ಅದೇ ಬಿಯರ್ ಕೊರತೆಯಾದಾಗ ಸಹಜವಾಗಿಯೇ IML ಗೆ ಡಿಮ್ಯಾಂಡ್ ಬರಲಿದೆ ಎಂಬ ಲೆಕ್ಕಾಚಾರದಲ್ಲಿಯೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಇನ್ನು ಬಿಯರ್ ಗಳು ಎಷ್ಟೇ ಖರ್ಚಾದರೂ ಸರ್ಕಾರದ ಬೊಕ್ಕಸಕ್ಕೆ ಅಷ್ಟಾಗಿ ಏನು ಲಾಭವಿಲ್ಲ. ಅದೇ IML ಗಳ ಮಾರಾಟದಿಂದ ಹೆಚ್ಚಿನ ಲಾಭ ಸಿಗುತ್ತಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಬಿಯರ್ ಮಾರಾಟದಲ್ಲಿ ಶೇಕಡ 15ರಷ್ಟು ಹೆಚ್ಚಳವಾಗಿದ್ದರೆ, IML ಗಳ ಮಾರಾಟದಲ್ಲಿ ಶೇಕಡ 2ರಷ್ಟು ಹೆಚ್ಚಳವಾಗಿದೆ ಅಷ್ಟೇ. ಹೀಗಾಗಿ ಡಿಮ್ಯಾಂಡ್ ಕ್ರಿಯೇಟ್ ಮಾಡಿಸುವ ನಿಟ್ಟಿನಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದೇಹದಲ್ಲಿ ರಕ್ತ ಹೆಪ್ಪುಗಟ್ಟಲು ಕಾರಣವೇನು ?

ಸುದ್ದಿಒನ್ : ದೇಹದಲ್ಲಿ ರಕ್ತ ಹೆಪ್ಪುಗಟ್ಟುವುದು ತುಂಬಾ ಅಪಾಯಕಾರಿ. ಪರಿಣಾಮವಾಗಿ, ಅನೇಕ ರೀತಿಯ ಮಾರಣಾಂತಿಕ ಸಮಸ್ಯೆಗಳು ಉದ್ಭವಿಸುತ್ತವೆ. ದೇಹದಲ್ಲಿ ರಕ್ತ ಹೆಪ್ಪುಗಟ್ಟುವಿಕೆಗೆ ಅಪಾಯಕಾರಿ ಅಂಶಗಳು ಯಾವುವು ? ಅವುಗಳನ್ನು ತಡೆಯುವುದು ಹೇಗೆ ? ಮುಂತಾದ

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ?

ನಿಮ್ಮದೇ ರಾಶಿ ಹೊಂದಿರುವರು ಶ್ರೀಮಂತರಾಗಿದ್ದಾರೆ, ಸರಕಾರಿ ಉದ್ಯೋಗದಲ್ಲಿದ್ದಾರೆ ನೀವೇಕೆ ಇಲ್ಲ? ಶನಿವಾರ ರಾಶಿ ಭವಿಷ್ಯ -ಮೇ-4,2024 ಸೂರ್ಯೋದಯ: 05:52, ಸೂರ್ಯಾಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆ : ಜೂನ್ 3 ರಂದು ಮತದಾನ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ. ಮೇ.03: ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಆಯ್ಕೆಯ ಚುನಾವಣೆಗೆ ವೇಳಾಪಟ್ಟಿ ಪ್ರಕಟವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 4615 ಮತದಾರರು ಇದ್ದು , ಜೂನ್ 3 ರಂದು ಮತದಾನ ಜರುಗಲಿದೆ ಎಂದು ಆಗ್ನೇಯ

error: Content is protected !!