ಚಿತ್ರದುರ್ಗ,(ಮೇ.13) : ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿಯ ಕೆರೆಗಳಿಗೆ ಕುಡಿಯುವ ನೀರಿನ ಸಲುವಾಗಿ ವಾಣಿ ವಿಲಾಸ ಸಾಗರದಿಂದ 0.30 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗಿದೆ ಎಂದು ವಿಶ್ವೇಶ್ವರಯ್ಯ ಜಲ ನಿಗಮದ ಭದ್ರಾ ಮೇಲ್ದಂಡೆ ಯೋಜನಾ ವೃತ್ತ ನಂ.02ರ ಅಧೀಕ್ಷಕ ಇಂಜಿನಿಯರ್ ಕೆ.ಎಂ.ಶಿವಪ್ರಕಾಶ್ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಜಲಸಂಪನ್ಮೂಲ ಇಲಾಖೆಯಿಂದ ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ಶಾಖಾ ಕಾಲುವೆಯ ಮುಖಾಂತರ ಧರ್ಮಪುರ ಕೆರೆ ಹಾಗೂ ಇಕ್ಕನೂರು ಮತ್ತು ಕೊಡಿಹಳ್ಳಿ ಕೆರೆಗಳಿಗೆ ಕೃಷಿ ನೀರಾವರಿಗಾಗಿ ಡಿಪಿಆರ್ನಲ್ಲಿ ಅಳವಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ರೈತರು ಭದ್ರಾ ಜಲಾಶಯದ ಪ್ರಸ್ತುತ ವಾಸ್ತವಾಂಶಗಳನ್ನು ಮನವರಿಕೆ ಮಾಡಿಕೊಳ್ಳಬೇಕು. ತಪ್ಪು ಮಾಹಿತಿಗಳಿಗೆ ಕಿವಿಕೊಡಬಾರದು ಎಂದು ಹೇಳಿದ್ದಾರೆ.






GIPHY App Key not set. Please check settings