ಮಂಗಳೂರು: ರಾಜ್ಯದಲ್ಲಿ ಮುಂಗಾರು – ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಈಗಾಗಲೇ ರಾಜ್ಯದಿಂದ 216 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲಾಗಿದೆ. ಕೇಂದ್ರದಿಂದ ತಂಡ ಕೂಡ ಬಂದು ಬರಪರಿಶೀಲನೆ ನಡೆಸಿ ಹೋಗಿದ್ದಾರೆ. ಆದರೆ ಅದಾದ ಮೇಲೆ ಯಾವುದೇ ಅಪ್ಡೇಟ್ ಆಗಿಲ್ಲ. ಇದೀಗ ಕೇಂದ್ರದಿಂದ ಬರ ಪರಿಹಾರಕ್ಕೆ ಒಂದು ರೂಪಾಯಿ ಕೂಡ ಬಂದಿಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯಕ್ಕೆ ಬರಪರಿಹಾರ ಮಾಡುವ ವಿಚಾರದಲ್ಲಿ ಕೇಂದ್ರ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದೆ. ರಾಜ್ಯದ ಬರ ಅಧ್ಯಯನಕ್ಕೆ ಕೇಂದ್ರದಿಂದ ತಂಡ ಬಂದಿದೆ. ರಾಜ್ಯದಿಂದಲೂ ಎರಡು ಬಾರಿ ಮನವಿ ಸಲ್ಲಿಸಲಾಗಿದೆ. ರಾಜ್ಯದಲ್ಲಿ ಸುಮಾರು 30 ಸಾವಿರ ಕೋಟಿಯಷ್ಟು ಬೆಳೆನಾಶವಾಗಿದೆ. ಸುಮಾರು 17 ಸಾವಿರ ಕೋಟಿಯಷ್ಟು ಪರಿಹಾರವನ್ನು ಕೇಂದ್ರದಿಂದ ಕೋರಲಾಗಿದೆ. ಆದರೆ ಕೇಂದ್ರದಿಂದ ಇಲ್ಲಿಯವರೆಗೂ ಒಂದು ರೂಪಾಯಿ ಬರಪರಿಹಾರ ಬಂದಿಲ್ಲ. ಜೊತೆಗೆ ಕೇಂದ್ರ ಸಚಿವರು ಭೇಟಿಗೂ ಅವಕಾಶ ನೀಡಿಲ್ಲ ಎಂದೇ ತಿಳಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂದು ಬಿಜೆಪಿ ನಾಯಕರು ಕಾಂಗ್ರೆಸ್ ನಾಯಕರಿಗೆ ಆಮಿಷ ಒಡ್ಡಿದರ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಆದರೆ 50 ಕೋಟಿ ಹಾಗೂ ಅಧಿಕಾರದ ಆಫರ್ ನೀಡಲಾಗುತ್ತಿದೆ ಎಂಬ ಮಾಹಿತಿ ಇಲ್ಲ. ಗೃಹಸಚಿವರ ಆಮಂತ್ರಣದ ಮೇರೆಗೆ ಭೋಜನಕ್ಕೆ ಹೋಗಿದ್ದಾರೆ ವಿನಃ, ಇದರಲ್ಲಿ ಬೇರೆ ಯಾವುದೇ ರಾಜಕೀಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.











