Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಂದೇ ವಾರದಲ್ಲಿ ಹಾಸನಾಂಬೆಗೆ ಹರಿದು ಬಂತು 10 ಕೋಟಿ ಕಾಣಿಕೆ

---Advertisement---

ಹಾಸನ : ವರ್ಷಕ್ಕಿಮ್ಮೆ ದರ್ಶನ ಭಾಗ್ಯ ಕೊಡುವ ಹಾಸನಾಂಬೆಯನ್ನು ನೋಡಲು ಪ್ರತಿದಿನ ಸಾವಿರಾರು ಭಕ್ತರು ಬರ್ತಾನೇ ಇರ್ತಾರೆ. ಈಗಾಗಲೇ ಲಕ್ಷಾಂತರ ಭಕ್ತರು ಅಮ್ಮನ ದರ್ಶನ ಭಾಗ್ಯವನ್ನ ಪಡೆದುಕೊಂಡಿದ್ದಾರೆ. ಈ ಮೂಲಕ ಒಂದೇ ವಾರದಲ್ಲಿ ತಾಯಿಯ ಹುಂಡಿಯಲ್ಲಿ ಕೋಟ್ಯಾಂತರ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ. ಈ ಮೂಲಕ ಭಕ್ತರ ಕಾಣಿಕೆ ವಿಚಾರದಲ್ಲಿ ಇತಿಹಾಸವನ್ನೇ ಸೃಷ್ಟಿಸಿದೆ.

ಇಲ್ಲಿಯವರೆಗೂ 15,30,000 ಭಕ್ತರು ಹಾಸನಾಂಬ ದೇವಿಯ ದರ್ಶನ ಪಡೆದುಕೊಂಡಿದ್ದಾರೆ. ಇನ್ನು ಕೇವಲ ಎಂಟೇ ದಿನದಲ್ಲಿ ದೇವಾಲಯಕ್ಕೆ 10.5 ಕೋಟಿ ರೂಪಾಯಿ ಆದಾಯ ಹರಿದು ಬಂದಿದೆ. ಇನ್ನೂ ಐದು ದಿನಗಳ ಕಾಲ ಹಾಸನಾಂಬೆಯ ಜಾತ್ರಾ ನಡೆಯಲಿದೆ. ಈ ಮೂಲಕ ಹಾಸನಾಂಬೆ ದರ್ಶನಕ್ಕೆಂದು ಲಕ್ಷಾಂತರ ಭಕ್ತರು ಬರುವ ನಿರೀಕ್ಷೆ ಇದ್ದು, ಕಾಣಿಕೆ ಮತ್ತಷ್ಟು ಸಂಗ್ರಹವಾಗಲಿದೆ. ಹಾಸನಾಂಬೆಯ ದರ್ಶನಕ್ಕೆ ಪ್ರತಿ ವರ್ಷವೂ ವಿಐಪಿ, ವಿವಿಐಪಿ ದರ್ಶನದ ವ್ಯವಸ್ಥೆಯನ್ನು ಮಾಡಲಾಗುತ್ತಿತ್ತು. ಆದರೆ ಈ ಬಾರಿ ಆ ವ್ಯವಸ್ಥೆಗೆ ಬ್ರೇಕ್ ಬಿದ್ದಿದೆ. ವಿಐಪಿ, ವಿವಿಐಪಿ ಪಾಸ್ ಗಳನ್ನ ನೀಡಿಲ್ಲ. ಹೀಗಾಗಿ ಹೆಚ್ಚಿನ ಜನ ಸಾವಿರದ ಟಿಕೆಟ್ ಕ್ಯೂ ನಲ್ಲಿಯೇ ಸಾಗಿದ್ದಾರೆ. ಈ ಕಾರಣಕ್ಕೂ ಕಾಣಿಕೆ ಸಂಗ್ರಹದಲ್ಲಿ ಹೆಚ್ಚಾಗಿರಬಹುದು. ಒಟ್ನಲ್ಲಿ ಈ ವರ್ಷ ಕಡಿಮೆ ಸಮಯದಲ್ಲಿ ಹತ್ತು ಕೋಟಿ ಕಾಣಿಕೆ ಸಂಗ್ರಹವಾಗಿರುವುದು ಇತಿಹಾಸದಲ್ಲಿಯೇ ದಾಖಲೆಯ ದಿನವೇ ಸರಿ.

ಹಾಸನಾಂಬೆ ದರ್ಶನ ಮಾಡಲು ಸಾಮಾನ್ಯರು, ಸೆಲೆಬ್ರೆಟಿಗಳು, ರಾಜಕಾರಣಿಗಳು ಸರತಿ ಸಾಲಿನಲ್ಲಿ ಬರುತ್ತಿದ್ದಾರೆ. ತಾಯಿಯ ದರ್ಶನ ಪಡೆದು ಪುನೀತರಾಗುತ್ತಿದ್ದಾರೆ. ವರ್ಷವಿಡೀ ದೇಗುಲದ ಬಾಗಿಲು ಹಾಕಿದ್ರು ಹೂ ಬಾಡಲ್ಲ, ದೀಪ ಆರಲ್ಲ ಇದು ತಾಯಿಯ ಪವಾಡ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now