ಸುದ್ದಿಒನ್, ಚಿತ್ರದುರ್ಗ. ಜುಲೈ. 31: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ, ಸಿಡಾಕ್ ಚಿತ್ರದುರ್ಗ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 10 ರಿಂದ 21 ರವರೆಗೆ ಸಾಮಾನ್ಯ ವರ್ಗದ ಪುರುಷರು/ಮಹಿಳೆಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಚಿತ್ರದುರ್ಗ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಸಾಧನಾ ಪ್ರೇರಣಾ ತರಬೇತಿ, ಉದ್ಯಮಶೀಲರ ಸಾಮಥ್ರ್ಯಗಳನ್ನು ಗುರುತಿಸುವಿಕೆ, ವ್ಯವಸ್ಥಾಪನಾ ಕೌಶಲ್ಯಗಳು, ಹೊಸ ಉದ್ಯಮಗಳ ಸ್ಥಾಪನೆಗೆ ಇರುವ ಅವಕಾಶಗಳು, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಲೆಕ್ಕ ಪತ್ರಗಳ ನಿರ್ವಹಣೆ, ಮಾರಾಟದ ತಂತ್ರಗಳು, ಸರ್ಕಾರದ ಯೋಜನೆಗಳು, ಬ್ಯಾಂಕಗಳ ಪಾತ್ರ, ಉದ್ಯಮಶೀಲರ ಅನುಭವ ಹಂಚಿಕೆ, ಸಣ್ಣ ಉದ್ಯಮ ನಿರ್ವಹಣೆ, ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಈ ಅವಧಿಯಲ್ಲಿ ಒಂದು ದಿನ ಕೈಗಾರಿಕೆಗಳಿಗೆ ಭೇಟಿ ನೀಡಿ ಆ ಕೈಗಾರಿಕೆಗಳ ಮಾಲೀಕರ ಜೊತೆಗೆ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು.
ಆದುದರಿಂದ ಉದ್ಯಮ ಪ್ರಾರಂಭಿಸಲು ಉತ್ಸುಕರಾಗಿರುವ ಜಿಲ್ಲೆಯ ಸಾಮಾನ್ಯ ವರ್ಗದ ಪುರುಷರು/ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು 18 ರಿಂದ 50 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ. ಶಿಕ್ಷಣ ಹೊಂದಿರಬೇಕು. ಆಸಕ್ತಿಯುಳ್ಳ ಪುರುಷರು/ಮಹಿಳೆಯರು ಆಗಸ್ಟ್ 8ರೊಳಗೆ ಉಪ ನಿರ್ದೇಶಕರು, ಸಿಡಾಕ್, ಚಿತ್ರದುರ್ಗ ಇವರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶಿವಾನಂದ ವೆಂ. ಎಲಿಗಾರ, ಉಪ ನಿರ್ದೇಶಕರು, ಸಿಡಾಕ್, ಚಿತ್ರದುರ್ಗ ಮೊ ಸಂಖ್ಯೆ 9448812974, ಪಿ. ವಿಜಯ ಕುಮಾರ್, ತರಬೇತುದಾರರು, ಸಿಡಾಕ್, ಚಿತ್ರದುರ್ಗ ಮೊ ಸಂಖ್ಯೆ:7760270058 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.









