Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮ: ಅರ್ಜಿ ಆಹ್ವಾನ

---Advertisement---

ಸುದ್ದಿಒನ್, ಚಿತ್ರದುರ್ಗ. ಜುಲೈ. 31: ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ, ಸಿಡಾಕ್ ಚಿತ್ರದುರ್ಗ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 10 ರಿಂದ 21 ರವರೆಗೆ ಸಾಮಾನ್ಯ ವರ್ಗದ ಪುರುಷರು/ಮಹಿಳೆಯರಿಗೆ 10 ದಿನಗಳ ಉದ್ಯಮಶೀಲತಾಭಿವೃದ್ಧಿ ಕಾರ್ಯಕ್ರಮವನ್ನು ಚಿತ್ರದುರ್ಗ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ. ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಸಾಧನಾ ಪ್ರೇರಣಾ ತರಬೇತಿ, ಉದ್ಯಮಶೀಲರ ಸಾಮಥ್ರ್ಯಗಳನ್ನು ಗುರುತಿಸುವಿಕೆ, ವ್ಯವಸ್ಥಾಪನಾ ಕೌಶಲ್ಯಗಳು, ಹೊಸ ಉದ್ಯಮಗಳ ಸ್ಥಾಪನೆಗೆ ಇರುವ ಅವಕಾಶಗಳು, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಲೆಕ್ಕ ಪತ್ರಗಳ ನಿರ್ವಹಣೆ, ಮಾರಾಟದ ತಂತ್ರಗಳು, ಸರ್ಕಾರದ ಯೋಜನೆಗಳು, ಬ್ಯಾಂಕಗಳ ಪಾತ್ರ, ಉದ್ಯಮಶೀಲರ ಅನುಭವ ಹಂಚಿಕೆ, ಸಣ್ಣ ಉದ್ಯಮ ನಿರ್ವಹಣೆ, ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಈ ಅವಧಿಯಲ್ಲಿ ಒಂದು ದಿನ ಕೈಗಾರಿಕೆಗಳಿಗೆ ಭೇಟಿ ನೀಡಿ ಆ ಕೈಗಾರಿಕೆಗಳ ಮಾಲೀಕರ ಜೊತೆಗೆ ಚರ್ಚೆಗೆ ಅವಕಾಶ ಮಾಡಿಕೊಡಲಾಗುವುದು.

ಆದುದರಿಂದ ಉದ್ಯಮ ಪ್ರಾರಂಭಿಸಲು ಉತ್ಸುಕರಾಗಿರುವ ಜಿಲ್ಲೆಯ ಸಾಮಾನ್ಯ ವರ್ಗದ ಪುರುಷರು/ಮಹಿಳೆಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು 18 ರಿಂದ 50 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಎಸ್.ಎಸ್.ಎಲ್.ಸಿ. ಶಿಕ್ಷಣ ಹೊಂದಿರಬೇಕು. ಆಸಕ್ತಿಯುಳ್ಳ ಪುರುಷರು/ಮಹಿಳೆಯರು ಆಗಸ್ಟ್ 8ರೊಳಗೆ ಉಪ ನಿರ್ದೇಶಕರು, ಸಿಡಾಕ್, ಚಿತ್ರದುರ್ಗ ಇವರಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಶಿವಾನಂದ ವೆಂ. ಎಲಿಗಾರ, ಉಪ ನಿರ್ದೇಶಕರು, ಸಿಡಾಕ್, ಚಿತ್ರದುರ್ಗ ಮೊ ಸಂಖ್ಯೆ 9448812974, ಪಿ. ವಿಜಯ ಕುಮಾರ್, ತರಬೇತುದಾರರು, ಸಿಡಾಕ್, ಚಿತ್ರದುರ್ಗ ಮೊ ಸಂಖ್ಯೆ:7760270058 ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಪೇಟೆಂಟ್ ರಿಜಿಸ್ಟ್ರೇಷನ್, ಉತ್ಪನ್ನ ಅಭಿವೃದ್ಧಿ, ವಿನ್ಯಾಸ, ನವಾನ್ವೇಷಣೆ, ಸಂಶೋಧನೆಗೆ ಪ್ರೋತ್ಸಾಹ, ಪ್ರಾಯೋಗಿಕ ಬೋಧನಾ ಕೌಶಲ್ಯದ ಉನ್ನತೀಕರಣ ಹಾಗೂ ಪೋಷಕರ ಸೂಕ್ತ ಉತ್ತೇಜನದ ಮೂಲಕ ವಿದ್ಯಾರ್ಥಿಗಳ ಮಾನಸಿಕ ವಿಕಸನದೊಂದಿಗೆ ಜಾಗತಿಕ ಶೈಕ್ಷಣಿಕ ನಾಗಲೋಟಕ್ಕೆ ಹೊಂದಿಕೊಳ್ಳುವುದನ್ನು ಭಾರತದ ಎಲ್ಲಾ ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಸಂಸ್ಥೆಗಳು ಆದ್ಯತೆಯಾಗಿಸಿಕೊಳ್ಳಬೇಕು

ಚಿತ್ರದುರ್ಗ : ಗ್ರಾಮೀಣ ಶಾಲೆಯಿಂದ ವೈದ್ಯಕೀಯ ಶಿಕ್ಷಣದ ಟಾಪರ್‌ವರೆಗೆ: ಮಕ್ಕಳ ತಜ್ಞ ಡಾ. ಎಸ್.ಎಚ್. ದೇವರಾಜ್ ಸುದೀರ್ಘ ಸೇವೆಗೆ ತೆರೆ

ಬ್ರಾಹ್ಮಣ ಅಭಿವೃದ್ಧಿ ಮಂಡಳಿ: ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಗೆ ಅರ್ಜಿ ಆಹ್ವಾನ

ಪ್ರತಿದಿನ ಈ ಆಹಾರಗಳನ್ನು ಸೇವಿಸಿದರೆ ಕೂದಲು ಉದರುವ ಸಮಸ್ಯೆ ಕಡಿಮೆಯಾಗುತ್ತೆ!

ಚಿತ್ರದುರ್ಗ APMC | ಜಲೈ 31 ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

ಆಗಸ್ಟ್ 12 ರಂದು ವರ್ಷದ ಕೊನೆಯ ‘ಸೂರ್ಯಗ್ರಹಣ’: ಭಾರತದಲ್ಲಿ ಕಾಣಿಸುತ್ತದೆಯೇ?